ಲಸಿಕೆಗೆ ವಿಭಿನ್ನ ದರ ಏಕೆ? ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

Published : Apr 22, 2021, 02:42 PM ISTUpdated : Apr 22, 2021, 02:43 PM IST
ಲಸಿಕೆಗೆ ವಿಭಿನ್ನ ದರ ಏಕೆ? ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಸಾರಾಂಶ

ಪ್ರಧಾನಿಗೆ ಪತ್ರ ಬರೆದ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ/ ದೇಶದಲ್ಲಿ ಕೋವಿಡ್ ಸೋಂಕು‌ಹೆಚ್ಚುತ್ತಲೇ ಇದೆ/ ಕಳೆದ ವರ್ಷದಿಂದ ಇಲ್ಲಿಯವರೆಗೂ ವಿಸ್ತರಿಸಿಕೊಂಡಿದೆ/ ಸೋಂಕು ನಿಯಂತ್ರಣಕ್ಕೆ ಇನ್ನೂ ಸಾಧ್ಯವಾಗ್ತಿಲ್ಲ/ ಈ ವಿಷಮ ಸ್ಥಿತಿಯಲ್ಲಿ ಯುವಜನತೆ ಪ್ರಾಣ ಮುಖ್ಯ/ 18 ವರ್ಷದಿಂದ 45 ವರ್ಷದವರಿಗೆ ಉಚಿತ ಲಸಿಕೆ ಒದಗಿಸಿ/ ಅವರ ಪ್ರಾಣ ಅತ್ಯಮೂಲ್ಯವಾದುದು/ ಎಲ್ಲ ಜನರಿಗೂ ಉಚಿತ ಲಸಿಕೆ ಸಿಗುವಂತೆ ಮಾಡಿ..

ನವದೆಹಲಿ(ಏ.  22) ಕೊರೋನಾ ಸೋಂಕು ಏರಿಕೆಯಾಗುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪತ್ರ ಬರೆದಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕು ‌ಹೆಚ್ಚುತ್ತಲೇ ಇದೆ. ಕಳೆದ ವರ್ಷದಿಂದ ಇಲ್ಲಿಯವರೆಗೂ ವಿಸ್ತರಿಸಿಕೊಂಡಿದೆ ಸೋಂಕು ನಿಯಂತ್ರಣಕ್ಕೆ ಇನ್ನೂ ಸಾಧ್ಯವಾಗ್ತಿಲ್ಲ ಈ ವಿಷಮ ಸ್ಥಿತಿಯಲ್ಲಿ ಯುವಜನತೆ ಪ್ರಾಣ ಮುಖ್ಯ ಎಂದು ತಿಳಿಸಿದ್ದಾರೆ.

18 ವರ್ಷದಿಂದ 45 ವರ್ಷದವರಿಗೆ ಉಚಿತ ಲಸಿಕೆ ಒದಗಿಸಿ. ಅವರ ಪ್ರಾಣ ಅತ್ಯಮೂಲ್ಯವಾದುದು. ಎಲ್ಲ ಜನರಿಗೂ ಉಚಿತ ಲಸಿಕೆ ಸಿಗುವಂತೆ ಮಾಡಿ. ಸಿರಂ ಇನ್ಸಿಟಿಟ್ಯೂಟ್ ಲಸಿಕೆಯನ್ನ ರಿಲೀಸ್ ಮಾಡಿದೆ. ಆದರೆ ಒಂದೇ ಸಂಸ್ಥೆ ಮೂರು ವಿಭಿನ್ನ ದರ ಇಟ್ಟಿದೆ. ಕೇಂದ್ರ ಸರ್ಕಾರಕ್ಕೆ ಲಸಿಕೆಗೆ 150 ದರ ಫಿಕ್ಸ್ ಮಾಡಿದೆ. ರಾಜ್ಯ ಸರ್ಕಾರಗಳಿಗೆ 400 ರೂ.ದರ ನಿಗದಿಯಾಗಿದೆ. ಖಾಸಗಿಯವರಿಗೆ 600 ರೂ. ದರ ನಿಗದಿಪಡಿಸಲಾಗಿದೆ. ಒಂದೇ ಸಂಸ್ಥೆ ಒಂದೇ ಲಸಿಕೆಗೆ ವಿಭಿನ್ನ ದರವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; ಯಾರ ನಿಯಂತ್ರಣವೂ ಇಲ್ಲವೇ? 

ಈದರ ನೀಡಿ ಲಸಿಕೆ ಪಡೆಯೋದು ಎಲ್ಲರಿಂದ ಸಾಧ್ಯವಿಲ್ಲ. ಕೂಡಲೇ ಈ ತಾರತಮ್ಯ ಸರಿಪಡಿಸಿ. ಆಸ್ಪತ್ರೆಗಳು,ಹಾಸಿಗೆ ಸಮಸ್ಯೆ ಸರಿಪಡಿಸಿ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಸೋನಿಯಾ ಆಗ್ರಹಪಡಿಸಿದ್ದಾರೆ.

ದೇಶದಲ್ಲಿ ಪ್ರತಿ ದಿನ ಎರಡು ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣ ದಾಖಲಾಗುತ್ತಿದೆ. 40-60  ವರ್ಷದ ವಯೋಮಾನದವರು ಹೆಚ್ಚಾಗಿ ಚೀನಿ ವೈರಸ್ ಗೆ ಬಲಿಯಾಗುತ್ತಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಳ ಮಾಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು