ಚಿಕಿತ್ಸೆ ವೇಳೆ ಸ್ಟಿರಾಯಿಡ್‌ ದುರುಪಯೋಗ, ಇದೇ ಬ್ಲ್ಯಾಕ್‌ ಫಂಗಸ್‌ಗೆ ಕಾರಣ: ಏಮ್ಸ್

Published : May 16, 2021, 09:43 AM ISTUpdated : May 16, 2021, 01:33 PM IST
ಚಿಕಿತ್ಸೆ ವೇಳೆ ಸ್ಟಿರಾಯಿಡ್‌ ದುರುಪಯೋಗ, ಇದೇ ಬ್ಲ್ಯಾಕ್‌ ಫಂಗಸ್‌ಗೆ ಕಾರಣ: ಏಮ್ಸ್

ಸಾರಾಂಶ

 * ಕೋವಿಡ್‌ ಸೋಂಕಿತರ ಚಿಕಿತ್ಸೆ ವೇಳೆ ಸ್ಟಿರಾಯಿಡ್‌ಗಳನ್ನು ದುರುಪಯೋಗ * ಸೋಂಕಿತರಿಗೆ ಸ್ಟಿರಾಯ್ಡ್‌ ಬಳಕೆ ಬ್ಲ್ಯಾಕ್‌ ಫಂಗಸ್‌ಗೆ ಕಾರಣ * ಏಮ್ಸ್‌ ಮುಖ್ಯಸ್ಥ ಡಾ. ರಣದೀಪ್‌ ಗುಲೇರಿಯಾ ಎಚ್ಚರಿಕೆ

ನವದೆಹಲಿ(ಮೇ.16): ಕೋವಿಡ್‌ ಸೋಂಕಿತರ ಚಿಕಿತ್ಸೆ ವೇಳೆ ಸ್ಟಿರಾಯಿಡ್‌ಗಳನ್ನು ದುರುಪಯೋಗದಿಂದಲೇ ಕೊರೋನಾ ಸೋಂಕಿತರಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕಿನ ಸಮಸ್ಯೆ ಹೆಚ್ಚಲು ಕಾರಣ ಎಂದು ದೆಹಲಿಯ ಪ್ರತಿಷ್ಠಿತ ಏಮ್ಸ್‌ ಸಂಸ್ಥೆ ಮುಖ್ಯಸ್ಥ ಡಾ. ರಣದೀಪ್‌ ಗುಲೇರಿಯಾ ಹೇಳಿದ್ದಾರೆ.

"

ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುಲೇರಿಯಾ ಅವರು, ‘ಕಪ್ಪು ಶಿಲೀಂಧ್ರ ಎಂಬುದು ಹೊಸದಾಗಿ ಹುಟ್ಟಿಕೊಂಡಿರುವ ಸಮಸ್ಯೆಯೇನಲ್ಲ. ಆದರೆ ಕೊರೋನಾ ವೈರಸ್‌ ಹಾಗೂ ಸೋಂಕಿತರ ಗುಣಮುಖಕ್ಕಾಗಿ ಬಳಸಲಾಗುತ್ತಿರುವ ಚಿಕಿತ್ಸಾ ವಿಧಾನಗಳಿಂದ ಸೋಂಕಿತರಲ್ಲಿ ಬ್ಲಾಕ್‌ ಫಂಗಸ್‌ ಸಮಸ್ಯೆ ತೀವ್ರಗೊಂಡಿದೆ’ ಎಂದರು.

"

ಗಾಳಿ, ಮಣ್ಣು, ಕೆಲವೊಮ್ಮೆ ನಮ್ಮ ಆಹಾರದಲ್ಲೂ ಫಂಗಸ್‌ ಇರುತ್ತದೆ. ಆದರೆ ಈ ವೈರಸ್‌ ತೀವ್ರತೆ ಅಷ್ಟೇನೂ ಇಲ್ಲ. ಆದಾಗ್ಯೂ ಡಯಾಬೆಟಿಕ್‌ ಸೇರಿ ಇನ್ನಿತರ ಆರೋಗ್ಯ ಸಮಸ್ಯೆ ಹೊಂದಿದವರು ಹಾಗೂ ಸ್ಟೀರಾಯ್ಡ್‌ಗಳನ್ನು ತೆಗೆದುಕೊಂಡ ಕೊರೋನಾ ಸೋಂಕಿತರಿಗೆ ಫಂಗಸ್‌ ಕಾಣಿಸಿಕೊಳ್ಳಲಿದೆ. ಸ್ಟೀರಾಯ್ಡ್‌ಗಳ ತಪ್ಪು ಬಳಕೆ ತಡೆದಲ್ಲಿ ಬ್ಲ್ಯಾಕ್‌ಫಂಗಸ್‌ ಸಮಸ್ಯೆ ತಡೆಯಬಹುದು. ಕೆಲ ರಾಜ್ಯಗಳಲ್ಲಿ ಕೊರೋನಾ ಚಿಕಿತ್ಸೆ ಪಡೆಯುತ್ತಿರುವ 400-500 ಮಂದಿ ಫಂಗಸ್‌ಗೆ ತುತ್ತಾದ ಬಗ್ಗೆ ವರದಿಯಾಗುತ್ತಿದೆ. ಶಿಲೀಂಧ್ರದಿಂದ ಮಾನಸಿಕ ಅಸ್ವಸ್ತತೆ ಮತ್ತು ಸಾವಿಗೂ ಕಾರಣವಾಗಲಿದೆ ಎಂದು ಎಚ್ಚರಿಸಿದರು.

ಸೋಂಕಿನ ಸೌಮ್ಯ ಲಕ್ಷಣ ಹೊಂದಿರುವವರಿಗೂ ಆರಂಭದಲ್ಲೇ ಸ್ಟಿರಾಯ್ಡ್‌ಗಳನ್ನು ಬಳಕೆ ಮಾಡುತ್ತಿರುವ ಕಾರಣವೇ, ಈ ಬಾರಿ ಕೊರೋನಾ ಸೋಂಕಿತರಲ್ಲಿ ಆಕ್ಸಿಜನ್‌ ಬೇಡಿಕೆ ಹೆಚ್ಚಾಗಲು ಕಾರಣ ಎಂದು ಕೆಲ ದಿನಗಳ ಹಿಂದೆ ಗುಲೇರಿಯಾ ಎಚ್ಚರಿಸಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹಬೂಬಾ...ಹಾಡಿಗೆ ನೃತ್ಯದ ವೇಳೆ ಗೋವಾ ಪಬ್‌ ದುರಂತ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ