ಅಸ್ವಸ್ಥ ಖಲೀದಾ ಜಿಯಾ ಹೆಚ್ಚಿನ ಚಿಕಿತ್ಸೆಗೆ ನಾಳೆ ಲಂಡನ್‌ಗೆ

Kannadaprabha News   | Kannada Prabha
Published : Dec 06, 2025, 04:33 AM IST
KHALIDA_JIYA

ಸಾರಾಂಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ (80) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಲಂಡನ್‌ಗೆ ಕರೆದೊಯ್ಯಲಾಗುತ್ತದೆ. ಏರ್‌ ಆ್ಯಂಬುಲೆನ್ಸ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಭಾನುವಾರ ಕರೆದೊಯ್ಯಲಾಗುತ್ತದೆ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ (80) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಲಂಡನ್‌ಗೆ ಕರೆದೊಯ್ಯಲಾಗುತ್ತದೆ.

ಶುಕ್ರವಾರವೇ ಕರೆದೊಯ್ಯಬೇಕಿತ್ತು. ಆದರೆ ಏರ್‌ ಆ್ಯಂಬುಲೆನ್ಸ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರನ್ನುಶುಕ್ರವಾರ ಬದಲು ಭಾನುವಾರ ಕರೆದೊಯ್ಯಲಾಗುತ್ತದೆ ಎಂದು ಅವರ ಪಕ್ಷವಾದ ಬಿಎನ್‌ಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಈಗಾಗಲೇ ಬ್ರಿಟನ್‌ ಮತ್ತು ಚೀನಾ ವೈದ್ಯರು ಢಾಕಾ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆಯಲ್ಲಿ ತೊಡಗಿದ್ದಾರೆ.

ಪಾಕ್‌ನಲ್ಲಿ ಹಿಂದೂ ಬಾಲಕಿ ಮತಾಂತರ: ತನಿಖೆಗೆ ಆದೇಶ

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿರುವ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕಿಯು ಹಿಂದೂ ವಿದ್ಯಾರ್ಥಿನಿಯರಿಗೆ ಇಸ್ಲಾಂಗೆ ಮತಾಂತರವಾಗಲು ಒತ್ತಾಯಿಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಆಕೆಯ ಪೋಷಕರು ದೂರು ದಾಖಲಿಸಿದ್ದು, ತನಿಖೆಗೆ ಅಲ್ಲಿನ ಸರ್ಕಾರ ಸಮಿತಿ ರಚಿಸಿದೆ.ಸಿಂಧ್‌ನ ಮೀರ್‌ಪುರ್‌ ಸಕ್ರೋ ಎಂಬಲ್ಲಿನ ಸರ್ಕಾರಿ ಶಾಲೆಯಲ್ಲಿ ಘಟನೆ ಜರುಗಿದೆ. ಮುಖ್ಯ ಶಿಕ್ಷಕಿಯು ಬಲವಂತವಾಗಿ ಮತಾಂತರವಾಗಲು ಒತ್ತಡ ಹೇರುತ್ತಿದ್ದು, ಕಲ್ಮಾ ಓದುವಂತೆ, ಇಸ್ಲಾಂಗೆ ಬರದಿದ್ದರೆ ಶಾಲೆಯಿಂದ ಹೊರಗಿಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಹಲವು ಬಾರಿ ಮನೆಗೆ ಕಳುಹಿಸಿದ್ದಾರೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.

ಪಾಕ್‌ನಲ್ಲಿ ಸಿಂಧ್‌ ಪ್ರಾಂತ್ಯವು ಅತಿ ಹೆಚ್ಚು ಹಿಂದೂ ಜನಸಂಖ್ಯೆಯನ್ನು ಹೊಂದಿದೆ. ಪಾಕ್‌ನಲ್ಲಿ ವರ್ಷಕ್ಕೆ ಸುಮಾರು 1000 ಹಿಂದೂ ಹೆಣ್ಣುಮಕ್ಕಳನ್ನು ಬಲವಂತವಾಗಿ ಹಿರಿ ವಯಸ್ಸಿನ ಮುಸ್ಲಿಂ ವ್ಯಕ್ತಿಗೆ ಮದುವೆ ಮಾಡಲಾಗುತ್ತಿದೆ.

ಇನ್ನೂ 8 ದೇಶಗಳಲ್ಲಿ ಶೀಘ್ರ ಯುಪಿಐ ಸೇವೆ ಆರಂಭ ಸಾಧ್ಯತೆ

ನವದೆಹಲಿ: ದೇಶದ ಆನ್‌ಲೈನ್ ಪಾವತಿಯ ಸರ್ಕಾರಿ ಆ್ಯಪ್‌ ಆದ ಭೀಮ್ ಯುಪಿಐನನ್ನು ಇನ್ನು ಹಲವು ದೇಶಗಳಿಗೆ ವಿಸ್ತರಿಸಲು ಕೇಂದ್ರ ಸರ್ಕಾರ ಉತ್ಸುಕವಾಗಿದ್ದು, ಅದರ ಭಾಗವಾಗಿ 8 ದೇಶಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಕೇಂದ್ರ ಹಣಕಾಸು ಸೇವೆಗಳ ಕಾರ್ಯದರ್ಶಿ ಎಂ.ನಾಗರಾಜು ತಿಳಿಸಿದ್ದಾರೆ.ಈಗಾಗಲೇ 8 ದೇಶಗಳಲ್ಲಿ ಯುಪಿಐ ಸೇವೆ ಇದೆ. ಇನ್ನೂ 8 ದೇಶಕ್ಕೆ ವಿಸ್ತರಣೆಯಾದರೆ ಇವುಗಳ ಸಂಖ್ಯೆ 16ಕ್ಕೇರಲಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ಪೂರ್ವ ಏಷ್ಯಾ ಸೇರಿ ಹಲವು ದೇಶಗಳ ಜೊತೆಗೆ ಈಗಾಗಲೇ ಮಾತುಕತೆ ನಡೆಸುತ್ತಿದೆ. ದೇಶದ ಹಣಕಾಸು ಉದ್ಯಮದಲ್ಲಿ ಯುಪಿಐ ಪ್ರಮುಖ ಪಾತ್ರವಹಿಸಿದ್ದು, ವಿದೇಶಗಳಲ್ಲಿಯೂ ಭಾರತೀಯರು ಸುಲಲಿತವಾಗಿ ಪಾವತಿ ಮಾಡಬಹುದಾಗಿದೆ. ವ್ಯಾಪಾರ ಒಪ್ಪಂದಗಳ ಜೊತೆಗೆ ಯುಪಿಐನನ್ನು ಸೇರಿಸಲಾಗುತ್ತಿದೆ’ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ದುಡ್ಡು ಅನ್ಯ ಕೆಲಸಕ್ಕೆ ಬಳಸಕೂಡದು : ಸುಪ್ರೀಂ
ಉಗ್ರವಾದದ ವಿರುದ್ಧ ಜಂಟಿ ಹೋರಾಟ : ಮೋದಿ ಘೋಷಣೆ