ಶಾ ಎದುರಲ್ಲೇ CAB ಪ್ರತಿ ಹರಿದು ವಿವಾದ ಸೃಷ್ಟಿಸಿದ ಒವೈಸಿ!

Published : Dec 10, 2019, 04:32 PM ISTUpdated : Dec 10, 2019, 10:58 PM IST
ಶಾ ಎದುರಲ್ಲೇ CAB ಪ್ರತಿ ಹರಿದು ವಿವಾದ ಸೃಷ್ಟಿಸಿದ ಒವೈಸಿ!

ಸಾರಾಂಶ

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ| ನಾಳೆ(ಡಿ.11) ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಮಂಡನೆ| ಮಸೂದೆ ಪ್ರತಿ ಹರಿದು ಹಾಕಿದ ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ| ಚರ್ಚೆಯ ವೇಳೆ ಮಸೂದೆ ಪ್ರತಿ ಹರಿದ ಅಸದುದ್ದೀನ್ ಒವೈಸಿ| ಪೌರತ್ವ ತಿದ್ದುಪಡಿ ಮಸೂದೆ ಅಸಾಂವಿಧಾನಿಕ ಎಂದ ಎಐಎಂಐಎಂ ಸಂಸದ| ಒವೈಸಿ ನಡೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಸದಸ್ಯರು| 

ನವದೆಹಲಿ(ಡಿ.11): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ನಾಳೆ(ಡಿ.11) ರಾಜ್ಯಸಭೆಯಲ್ಲಿ ಮಸೂದೆ ಚರ್ಚೆಗೆ ಬರಲಿದೆ.

ಅಮಿತ್ ಶಾ CAB: ವಾಷಿಂಗ್ಟನ್ ಟು ದಿಲ್ಲಿ, ಪಿಕ್ಚರ್ ಅಬಿ ಬಾಕಿ ಹೈ....!

ಈ ಮಧ್ಯೆ  ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆ ನಡೆಯುತ್ತಿರುವ ವೇಳೆ, ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಮಸೂದೆ ಪ್ರತಿಯನ್ನು ಹರಿದು ಹಾಕಿದ್ದಾರೆ.

ಚರ್ಚೆಯ ಸಂದರ್ಭದಲ್ಲಿ ಮಸೂದೆ ಪ್ರತಿ ಹರಿದು ಹಾಕಿದ ಒವೈಸಿ, ಇದು ಭಾರತವನ್ನು ಒಡೆಯಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಪೌರತ್ವ ತಿದ್ದುಪಡಿ ಮಸೂದೆ ಅಸಾಂವಿಧಾನಿಕ ಎಂದಿರುವ ಒವೈಸಿ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಕಿಡಿಕಾರಿದರು.

ಇನ್ನು ಮಸೂದೆ ಪ್ರತಿ ಹರಿದು ಹಾಕಿರುವ ಒವೈಸಿ ನಡೆಯನ್ನು ಆಡಳಿತಾರೂಢ ಬಿಜೆಪಿ ಸದಸ್ಯರು ತೀವ್ರವಾಗಿ ವಿರೋಧಿಸಿದ್ದಾರೆ. ಒವೈಸಿ ಸದನದಲ್ಲಿ ನಡಾವಳಿಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ
ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ