ಏರ್ ಇಂಡಿಯಾ- ನೇಪಾಳ ವಿಮಾನ ಮುಖಾಮುಖಿ, ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ!

By Suvarna NewsFirst Published Mar 26, 2023, 7:56 PM IST
Highlights

 ಆಗಸದಲ್ಲಿ ಎರಡು ವಿಮಾನಗಳು ಡಿಕ್ಕಿಯಾಗುವ ಆತಂಕ ಕೂದಲೆಲೆಯುವ ಅಂತರದಲ್ಲಿ ತಪ್ಪಿದೆ. ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಪೈಲೆಟ್ ಚಾಣಾಕ್ಷ ನಿರ್ಧಾರದಿಂದ ಅಪಘಾತ ತಪ್ಪಿದೆ. ನಿರ್ಲಕ್ಷ್ಯವಹಿಸಿದ ಮೂವರು ಅಧಿಕಾರಿಗಳನ್ನು ನೇಪಾಳ ಅಮಾನತು ಮಾಡಿದೆ.

ನವದೆಹಲಿ(ಮಾ.26) ಏರ್  ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಬಚಾವ್ ಆಗಿದೆ. ದೆಹಲಿಯಿಂದ ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾಗೂ ಮೇಲಿಷಿಯಾದ ಕೌಲಾಲಾಂಪುರದಿಂ ಕಾಠ್ಮಂಡುವಿನಿಂದ ಆಗಮಿಸುತ್ತಿದ್ದ ವಿಮಾನಏರ್ ಇಂಡಿಯಾ ವಿಮಾನ ಒಂದೇ ಸಮನೇ 19,000 ಅಡಿ ಎತ್ತರಕ್ಕೆ ಹಾರಿದರೆ, ನೇಪಾಳ ಏರ್‌ಲೈನ್ಸ್ 15,000 ಅಡಿ ಕೆಳಕ್ಕೆ ಹಾರಾಟ ನಡೆಸಿ ಅಪಘಾತ ತಪ್ಪಿಸಲಾಗಿದೆ. ಈ ಘಟನೆಗೆ ಕಾರಣರಾದ ಮೂವರು ಅಧಿಕಾರಿಗಳನ್ನು ನೇಪಾಳ ವಿಮಾನ ಸಚಿವಾಲಯ ಅಮಾನತು ಮಾಡಿದೆ.

ಪ್ರಯಾಣದ ನಡುವೆ ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಪೈಲೆಟ್‌ಗೆ ವಾರ್ನಿಂಗ್ ಬಂದಿದೆ. ಎರಡೂ ವಿಮಾನಗಳು ಕಾಕ್‌ಪಿಟ್‌ಗೆ ವಾರ್ನಿಂಗ್ ಸಂದೇಶ ನೀಡಿದೆ. ಹೀಗಾಗಿ ಪೈಲೆಟ್‌ಗಳು ಅಪಘಾತ ತಪ್ಪಿಸಿದ್ದಾರೆ. ನೇಪಾಳ ಕಂಟ್ರೋಲ್ ರೂಂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ ಕಾರಣ ಈ ಘಟನೆಗೆ ಕಾರಣವಾಗಿದೆ. 

 

ದುಬೈನಿಂದ ಭಾರತಕ್ಕೆ ಹಾರುತ್ತಿದ್ದ ವಿಮಾನದಲ್ಲಿ ಕುಡಿದು ಗಲಾಟೆ, ತಾಯ್ನಾಡಿಗೆ ಕಾಲಿಟ್ಟ ತಕ್ಷಣ ಕೈಗೆ ಕೋಳ!

ಒಂದೇ ದಾರಿಯ ವಿರುದ್ಧ ದಿಕ್ಕಿನಲ್ಲಿ ಮತ್ತೊಂದು ವಿಮಾನ ಬರುತ್ತಿರುವುದನ್ನು ರೇಡಾರ್ ಪತ್ತೆ ಹಚ್ಚಿದೆ. ಹೀಗಾಗಿ ಅಲರ್ಟ್ ಸಂದೇಶ ಪಡೆದ ಕೆಲವೇ ಸೆಕೆಂಡ್‌ಗಳಲ್ಲಿ ಪೈಲೆಟ್ಸ್ ಚಾಣಾಕ್ಷ ನಡೆ ಮೂಲಕ ದುರಂತ ತಪ್ಪಿಸಲಾಗಿದೆ. ನೇಪಾಳ ಕಂಟ್ರೋಲ್ ರೂಂ ಅಧಿಕಾರಿಗಳ ನಿರ್ಲಕ್ಷ್ಯ ಮೇಲ್ನೋಟಕ್ಕೆ ಸಾಬೀತಾಗಿದೆ. ಹೀಗಾಗಿ ಮೂವರನ್ನು ಅಮಾನತು ಮಾಡಲಾಗಿದೆ. ಇಷ್ಟೇ ಅಲ್ಲ ಘಟನೆಯ ತನಿಖೆಗೆ ಆದೇಶಿಸಿದೆ.

 

Air Traffic Controllers (ATCs) of Tribhuvan International Airport involved in traffic conflict incident (between Air India and Nepal Airlines on 24th March 2023) have been removed from active control position until further notice. pic.twitter.com/enxd0WrteZ

— Civil Aviation Authority of Nepal (@hello_CAANepal)

 

ಇತ್ತೀಚೆಗಷ್ಟೇ ನೇಪಾಳ ಅತೀ ದೊಡ್ಡ ವಿಮಾನ ದುರಂತಕ್ಕೆ ಸಾಕ್ಷಿಯಾಗಿತ್ತು. 72 ಜನರಿದ್ದ ನೇಪಾಳದ ಯೇತಿ ಏರ್‌ಲೈನ್ಸ್‌ಗೆ ಸೇರಿದ ವಿಮಾನ ನೇಪಾಳದ ಪೋಖರಾ ವಿಮಾನ ನಿಲ್ದಾಣದ ಬಳಿ ಭೀಕರ ಅಪಘಾತಕ್ಕೆ ತುತ್ತಾಗಿತ್ತು. ಈ ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಸೇರಿ ಎಲ್ಲಾ 72 ಜನರು ಸಾವನ್ನಪ್ಪಿದ್ದರು.

ಬೆಂಗಳೂರು ಇಂಡಿಗೋ ವಿಮಾನದಲ್ಲಿ ಸಿಗರೇಟ್‌ ಸೇದಿದ ಯುವಕ: ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ

9ಎನ್‌-ಎಎನ್‌ಸಿ ಎಟಿಆರ್‌-72 ವಿಮಾನ ಬೆಳಗ್ಗೆ 10.33ಕ್ಕೆ ರಾಜಧಾನಿ ಕಾಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಮುಖ ಪ್ರವಾಸಿ ತಾಣವಾದ ಪೋಖರಾಗೆ ಹೊರಟಿತ್ತು. ಬೆಳಗ್ಗೆ 11 ಗಂಟೆಗೆ ವಿಮಾನ ಇನ್ನೇನು ವಿಮಾನದ ರನ್‌ವೇನತ್ತ ಇಳಿಯಲು ಸಜ್ಜಾಗುತ್ತಿದೆ ಎನ್ನುವ ಹಂತದಲ್ಲಿ, ಇದ್ದಕ್ಕಿದ್ದಂತೆ ವಿಚಿತ್ರ ರೀತಿಯಲ್ಲಿ ಮಗುಚಿಕೊಂಡು ವಿಮಾನ ನಿಲ್ದಾಣದ ಸಮೀಪದಲ್ಲೇ ಇರುವ ಸೇತಿ ನದಿಯ ಕಂದಕದಲ್ಲಿ ಪತನಗೊಂಡಿದೆ. ಲ್ಯಾಂಡಿಂಗ್‌ಗೆ ಕೇವಲ 10-20 ಸೆಕೆಂಡ್‌ ಇದ್ದಾಗ ಘಟನೆ ಸಂಭವಿಸಿದೆ.ಐವರು ಭಾರತೀಯರು ಸೇರಿದಂತೆ 72 ಮಂದಿಯ ದುರ್ಮರಣಕ್ಕೆ ಕಾರಣವಾದ ಯೇತಿ ಏರ್‌ಲೈನ್ಸ್‌ನ ವಿಮಾನ ಪತನಗೊಂಡ ಸ್ಥಳದಿಂದ ಬ್ಲ್ಯಾಕ್‌ಬಾಕ್ಸ್‌  ಪತ್ತೆ ಹಚ್ಚಿ ತನಿಖೆ ತೀವ್ರಗೊಳಿಸಲಾಗಿದೆ.

click me!