
ನವದೆಹಲಿ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ, ಮುಂದಿನ ದಿನಗಳಲ್ಲಿ ಹಿಂದೂ ಮತ್ತು ಸಿಖ್ ಸಮುದಾಯದ ಪ್ರಯಾಣಿಕರಿಗೆ 'ಹಲಾಲ್' ಪ್ರಮಾಣಕೃತ ಆಹಾರ ವಿತರಣೆ ಮಾಡುವುದಿಲ್ಲ ಎಂದು ಹೇಳಿದೆ. ಇದೇ ವರ್ಷದ ಜೂನ್ 17ರಂದು ವಿರುದುನಗರದ ಕಾಂಗ್ರೆಸ್ ಸಂಸದ ಮಣಿಕಂ ಟ್ಯಾಗೋರ್ , ಏರ್ ಇಂಡಿಯಾದಲ್ಲಿ ಧರ್ಮದ ಆಧಾರದ ಮೇಲೆ ಊಟವನ್ನು ಲೇಬಲ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ಏರ್ ಇಂಡಿಯಾ ವೆಬ್ಸೈಟ್ನ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡ ಸಂಸದರು “ಹಿಂದೂ” ಅಥವಾ “ಮುಸ್ಲಿಂ” ಊಟ ಎಂದರೇನು ಎಂದು ಖಾರವಾಗಿ ಪ್ರಶ್ನಿಸಿದ್ದರು. ನಾಗರಿಕ ವಿಮಾನಯಾನ ಸಚಿವಾಲಯದಿಂದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಕಾಂಗ್ರೆಸ್ ನಾಯಕ, “ಸಂಘಿಗಳು ಏರ್ ಇಂಡಿಯಾವನ್ನು ವಶಪಡಿಸಿಕೊಂಡಿದ್ದಾರೆಯೇ?” ಎಂದು ಪ್ರಶ್ನೆ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ