
ನವದೆಹಲಿ (ಡಿ. 24): ತನ್ನ ಹಲವು ಯತ್ನಗಳ ಹೊರತಾಗಿಯೂ, ತೀವ್ರ ನಷ್ಟದ ಸುಳಿಗೆ ಸಿಲುಕಿರುವ ಸರ್ಕಾರಿ ಸ್ವಾಮ್ಯದ ಏರಿಂಡಿಯಾ ವಿಮಾನ ಸಂಸ್ಥೆಯನ್ನು ಮಾರಾಟ ಮಾಡುವುದು ಕೇಂದ್ರ ಸರ್ಕಾರಕ್ಕೆ ದುಸ್ತರವಾಗಿ ಪರಿಣಮಿಸಿದೆ.
‘ಮಹಾರಾಜ’ನ ಮಾರಾಟ! ಸತತ ನಷ್ಟದಲ್ಲಿರುವ ಏರ್ಇಂಡಿಯಾವನ್ನು ಖರೀದಿಸುವವರು ಯಾರು?
ಏರ್ ಇಂಡಿಯಾ ವಿಮಾನ ಸಂಸ್ಥೆಯ ಖರೀದಿಗೆ ಹೂಡಿಕೆದಾರರ ಆಸಕ್ತಿ ಪರಿಶೀಲನೆಗಾಗಿ ಸಿಂಗಾಪುರ ಮತ್ತು ಲಂಡನ್ನಲ್ಲಿ ರೋಡ್ ಶೋಗಳನ್ನು ಏರ್ಪಡಿಸಲಾಗಿತ್ತು. ಆದರೆ, ವಿಮಾನ ಸಂಸ್ಥೆಯ ಖರೀದಿ ಕುರಿತು ಹೂಡಿಕೆದಾರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಈ ಬೆಳವಣಿಗೆ ಬಗ್ಗೆ ಗೊತ್ತಿರುವ ಸರ್ಕಾರದ ಹಿರಿಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.
ಏರಿಂಡಿಯಾದ ಸಂಪೂರ್ಣ ಪಾಲು ಖಾಸಗಿಗೆ ಮಾರಾಟ ಮಾಡಲು ಕೇಂದ್ರ ನಿರ್ಧಾರ!
ಆದಾಗ್ಯೂ, ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಸರ್ಕಾರದ ಪ್ರಯತ್ನಕ್ಕೆ ಯಾವುದೇ ಹಿನ್ನಡೆಯಾಗಿಲ್ಲ ಎಂದೂ ಅವರು ಇದೇ ವೇಳೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ