
ನವದೆಹಲಿ(ಡಿ.23): ಕಳೆದ ವರ್ಷ ವಾಯು ಮಾಲಿನ್ಯದಿಂದ ಉಂಟಾದ ಆರೋಗ್ಯ ಸಮಸ್ಯೆ ಹಾಗೂ ಸಾವಿನಿಂದಾಗಿ ದೇಶದ ಆರ್ಥಿಕತೆಗೆ 2.60 ಲಕ್ಷ ಕೋಟಿ ರು.ನಷ್ಟುಅಥವಾ ಜಿಡಿಪಿಯ ಶೇ.1.4ರಷ್ಟುನಷ್ಟಉಂಟಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ.
ವಾಯು ಮಾಲಿನ್ಯದಿಂದ ಆರೋಗ್ಯ ಮತ್ತು ಆರ್ಥಿಕತೆಯ ಮೇಲೆ ಉಂಟಾದ ಪರಿಣಾಮದ ಕುರಿತು ಮಂಡಿಸಲಾದ ವೈಜ್ಞಾನಿಕ ವರದಿಯ ಪ್ರಕಾರ, 2019ರಲ್ಲಿ ದೇಶದಲ್ಲಿ ಸಂಭವಿಸಿದ ಸಾವಿನ ಪೈಕಿ ವಾಯು ಮಾಲಿನ್ಯದಿಂದಲೇ ಶೇ.18ರಷ್ಟುಅಂದರೆ 17 ಲಕ್ಷ ಮಂದಿ ಬಲಿ ಆಗಿದ್ದಾರೆ.
ವಾಯು ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆ ಹಾಗೂ ಜನರ ಸಾವು ಉತ್ಪಾದನೆಯ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಿದ್ದು, ಜಿಡಿಪಿಯ ಶೇ.1.4ರಷ್ಟುನಷ್ಟವಾಗಿದೆ. ಒಂದು ವೇಳೆ ಭಾರತದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಿದರೆ ಭಾರತಲ್ಲಿ ಉತ್ತಮ ಆರ್ಥಿಕ ಪ್ರಗತಿ ಹಾಗೂ ಅಭಿವೃದ್ಧಿಯನ್ನು ನಿರೀಕ್ಷಿಸಬಹುದಾಗಿದೆ ಎಂದು ವರದಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ