
ಪಣಜಿ: ಇಲ್ಲಿನ ಮೋಪಾ ಮನೋಹರ್ ಪರಿಕ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಏರ್ಪೋರ್ಟ್ನಲ್ಲಿ ಬಾಂಬ್ ಇದೆ ಎಂದು ಹುಸಿ ಬಾಂಬ್ ಕರೆ ಮಾಡಿದ ಘಟನೆ ಶನಿವಾರ ನಡೆದಿದೆ. ವ್ಯಕ್ತಿಯೊಬ್ಬ ಸಂಜೆ 4.45ಕ್ಕೆ ಪೊಲೀಸ್ ನಿಯಂತ್ರಣಾ ಕೊಠಡಿಗೆ ಕರೆ ಮಾಡಿ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಹೇಳಿದ್ದ. ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಮಾನ ನಿಲ್ದಾಣ ಹಾಗೂ ಮನೋಹರ್ ಪರಿಕ್ಕರ್ ನಿಲ್ದಾಣದಲ್ಲಿ ಕೂಲಂಕಶವಾಗಿ ಪರಿಶೀಲನೆ ನಡೆಸಿದಾಗ, ಇದು ಹುಸಿ ಕರೆ ಎಂದು ತಿಳಿದು ಬಂದಿದೆ. ಬಳಿಕ ಕರೆ ಮಾಡಿದ ಸಂಖ್ಯೆಯನ್ನು ಟ್ರಾಕ್ ಮಾಡಿದಾಗ ಕುಡಿದ ಮತ್ತಿನಲ್ಲಿ ಕುಂದನ್ ಕುಮಾರ್ ಎಂಬ ಸಿಬ್ಬಂದಿಯೇ ಕರೆ ಮಾಡಿದ್ದ ಎಂದು ಗೊತ್ತಾಗಿದ್ದು, ಆತನನ್ನು ಬಂಧಿಸಿದ್ದಾರೆ.
ಗೋವಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ!
ಏರ್’ಪೋರ್ಟ್’ನಲ್ಲೇ ಬಿಜೆಪಿಯಿಂದ ರಾಜಕೀಯ ಸಭೆ; ತನಿಖೆಗೆ ಕಾಂಗ್ರೆಸ್ ಆಗ್ರಹ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ