
ಪುಣೆ(ಮೇ.02): ಪ್ರತಿವರ್ಷದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತೊಮ್ಮೆ ಕರ್ನಾಟಕದೊಂದಿಗೆ ಗಡಿ-ಕ್ಯಾತೆ ತೆಗೆದಿದ್ದಾರೆ. ಮಹಾರಾಷ್ಟ್ರ ಸಂಸ್ಥಾಪನಾ ದಿನದ ಅಂಗವಾಗಿ ಪುಣೆಯಲ್ಲಿ ಭಾನುವಾರ ಮಾತನಾಡಿದ ಅವರು ಮರಾಠಿ ಮಾತನಾಡುವ ಜನರು ನೆಲೆಸಿರುವ ಕರ್ನಾಟಕದ ಗಡಿಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಅವರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
‘ಮಹಾರಾಷ್ಟ್ರ ಸಂಸ್ಥಾಪನೆಯ 62 ನೇ ವರ್ಷ ಆಚರಿಸುತ್ತಿದ್ದರೂ ಮರಾಠಿ ಭಾಷಿಕರು ವಾಸವಾಗಿರುವ ಕರ್ನಾಟಕದ ಬೀದರ್, ಭಾಲ್ಕಿ, ಬೆಳಗಾವಿ, ಕಾರವಾರ, ನಿಪ್ಪಾಣಿ ಹಾಗೂ ಇನ್ನಿತರ ಪ್ರದೇಶಗಳು ಮಹಾರಾಷ್ಟ್ರದಲ್ಲಿ ಇನ್ನೂ ಸೇರ್ಪಡೆಯಾಗಿಲ್ಲ ಎಂಬುದು ವಿಷಾದನೀಯ. ಮಹಾರಾಷ್ಟ್ರದ ಸರ್ಕಾರ ಹಾಗೂ ಜನತೆ ಕರ್ನಾಟಕದ ಗಡಿಭಾಗದಲ್ಲಿರುವ ಮರಾಠಿ ಭಾಷಿಕರ ಹೋರಾಟಕ್ಕೆ ಬೆಂಬಲ ಸೂಚಿಸುತ್ತೇವೆ. ಕರ್ನಾಟಕದ ಮರಾಠಿ ಭಾಷಿಕ ಗ್ರಾಮಗಳು ಕರ್ನಾಟಕದ ಭಾಗವಾಗುವವರೆಗೂ ಬೆಂಬಲ ಮುಂದುವರೆಯಲಿದೆ’ ಎಂದು ಹೇಳಿದ್ದಾರೆ.
ಮಹಾ ಡಿಸಿಎಂ ಹೇಳಿಕೆಗೆ ಕನ್ನಡಿಗರ ಆಕ್ರೋಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ