ಕ್ಯಾ ಬಾತ್: ಠಾಕ್ರೆ ಸರ್ಕಾರದಲ್ಲಿ ಅಜಿತ್ ಪವಾರ್ ಮತ್ತೆ ಡಿಸಿಎಂ!

Published : Nov 28, 2019, 06:02 PM IST
ಕ್ಯಾ ಬಾತ್: ಠಾಕ್ರೆ ಸರ್ಕಾರದಲ್ಲಿ ಅಜಿತ್ ಪವಾರ್ ಮತ್ತೆ ಡಿಸಿಎಂ!

ಸಾರಾಂಶ

ಮಹಾರಾಷ್ಟ್ರದಲ್ಲಿ ಅಂತ್ಯಗೊಂಡ ರಾಜಕೀಯ ಹೈಡ್ರಾಮಾ| ಶಿವಸೇನೆ, ಕಾಂಗ್ರೆಸ್-ಎನ್’ಸಿಪಿ ಮೖತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ| ಠಾಕ್ರೆ ಸರ್ಕಾರದಲ್ಲಿ ಅಜಿತ್ ಪವಾರ್’ಗೆ ಮತ್ತೆ ಉಪಮುಖ್ಯಮಂತ್ರಿ ಹುದ್ದೆ ಸಿಗುವ ಸಾಧ್ಯತೆ| ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಣಯ ಎಂದ ಅಜಿತ್ ಪವಾರ್| 

ಮುಂಬೈ(ನ.28): ಮಹಾರಾಷ್ಟ್ರದಲ್ಲಿ ಕೊನೆಗೂ ರಾಜಕೀಯ ಹೈಡ್ರಾಮಾ ಅಂತ್ಯಗೊಂಡಿದೆ. ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ಸಂಜೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಈ ಮಧ್ಯೆ ಬಿಜೆಪಿ ಸಾಂಗತ್ಯ ಬೆಳೆಸಿ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಎನ್’ಸಿಪಿ ಯ ಅಜಿತ್ ಪವಾರ್, ಮತ್ತೆ ಠಾಕ್ರೆ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಪಡೆಯಲಿದ್ದಾರೆ ಎನ್ನಲಾಗಿದೆ.

ಉದ್ಧವ್ ಠಾಕ್ರೆ ಸೋದರತ್ತೆ ಸುಪ್ರಿಯಾ ಸುಳೆ ಅತ್ತೆ: ಫ್ಯಾಮಿಲಿ ಒಂದಾಗಲ್ವೆ ಮತ್ತೆ?

ಎನ್’ಸಿಪಿ ಯ ಮೂಲ ಬಣಕ್ಕೆ ವಾಪಸ್ ಆಗಿರುವ ಅಜಿತ್ ಪವಾರ್ ಅವರನ್ನು ಮತ್ತೆ ಡಿಸಿಎಂ ಮಾಡುವ ಇರಾದೆ ಶರದ್ ಪವಾರ್ ಅವರದ್ದು ಎನ್ನಲಾಗಿದೆ.

ಆದರೆ ಇಂದು ನಡೆಯುವ ಪ್ರಮಾಣವಚನ ಸಮಾರಂಭದಲ್ಲಿ ಅಜಿತ್ ಪ್ರತಿಜ್ಞಾವಿಧಿ ಸ್ವೀಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಕುರಿತು ಖುದ್ದು ಸ್ಪಷ್ಟನೆ ನೀಡಿರುವ ಅಜಿತ್, ಮೂರು ಪಕ್ಷಗಳ 6 ಶಾಸಕರು ಮಾತ್ರ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಇನ್ಮುಂದೆ ಠಾಕ್ರೆ ಸರ್ಕಾರ್‌

ಡಿಸಿಎಂ ಹುದ್ದೆ ಕುರಿತು ಕೇಳಲಾದ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಅಜಿತ್, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು