
ಕನೌಜ್(ಜ.14): ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕಳೆದ ವಾರ ನಡೆದ ಅಪಘಾತದಲ್ಲಿ 20 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಗಾಯಾಳುಗಳ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದ ಅಖಿಲೇಶ್ ಯಾದವ್, ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗಾಯಾಳುಗಳು ಅಖಿಲೇಶ್ ಮುಂದೆ ತಮ್ಮ ಅಳಲು ತೋಡಿಕೊಳ್ಳುತ್ತಿರುವಾಗ ವೈದ್ಯ ಮಧ್ಯಪ್ರವೇಶಿಸಿದ್ದಾರೆ. ಇದರಿಂದ ಕೆರಳಿದ ಅಖಿಲೇಶ್ ಯಾದವ್, ನೀವು ಸರ್ಕಾರಿ ಅಧಿಕಾರಿ, RSS ಹಾಗೂ ಬಿಜೆಪಿ ವ್ಯಕ್ತಿ, ನೀವು ಮಾತನಾಡಬೇಡಿ ಎಂದು ಗದರಿದರು.
ನೀವು ಅತ್ಯಂತ ಕಿರಿಯ ಅಧಿಕಾರಿ, ನೀವು RSS ಅಥವಾ ಬಿಜೆಪಿ ಸದಸ್ಯರಾಗಿರಬಹುದು ಎಂದು ಅಖಿಲೇಶ್ ಸರ್ಕಾರಿ ವೈದ್ಯ ಡಿಎಸ್ ಮಿಶ್ರಾ ಅವರನ್ನು ಗದರಿರುವ ವಿಡಿಯೋ ವೈರಲ್ ಆಗಿದೆ.
ಸದ್ಯ ಅಖಿಲೇಶ್ ಯಾದವ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸರ್ಕಾರಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಪರಿಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ