ಶ್ರೀಕೃಷ್ಣ ಜನ್ಮಭೂಮಿ ವಿವಾದ ವಿಚಾರಣೆಗೆ ಹೈಕೋರ್ಟ್‌ ಅಸ್ತು: ಮುಸ್ಲಿಂ ಕಕ್ಷಿದಾರರ ಅರ್ಜಿ ವಜಾ

Published : May 02, 2023, 07:14 AM IST
ಶ್ರೀಕೃಷ್ಣ ಜನ್ಮಭೂಮಿ ವಿವಾದ ವಿಚಾರಣೆಗೆ ಹೈಕೋರ್ಟ್‌ ಅಸ್ತು: ಮುಸ್ಲಿಂ ಕಕ್ಷಿದಾರರ ಅರ್ಜಿ ವಜಾ

ಸಾರಾಂಶ

ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಪಕ್ಕದಲ್ಲೇ ಇರುವ ಮಸೀದಿಯನ್ನು ತೆರವುಗೊಳಿಸಿ, ಅದರ ಜಾಗವನ್ನು ದೇಗುಲ ಟ್ರಸ್ಟ್‌ಗೆ ಮರಳಿಸಬೇಕು ಎಂಬ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಜಿಲ್ಲಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಉತ್ತರಪ್ರದೇಶ ಸುನ್ನಿ ವಕ್ಫ್ ಮಂಡಳಿ ಹಾಗೂ ಶಾಹಿ ಈದ್ಗಾ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಗಳನ್ನು ಅಲಹಾಬಾದ್‌ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. 

ನವದೆಹಲಿ: ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಪಕ್ಕದಲ್ಲೇ ಇರುವ ಮಸೀದಿಯನ್ನು ತೆರವುಗೊಳಿಸಿ, ಅದರ ಜಾಗವನ್ನು ದೇಗುಲ ಟ್ರಸ್ಟ್‌ಗೆ ಮರಳಿಸಬೇಕು ಎಂಬ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಜಿಲ್ಲಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಉತ್ತರಪ್ರದೇಶ ಸುನ್ನಿ ವಕ್ಫ್ ಮಂಡಳಿ ಹಾಗೂ ಶಾಹಿ ಈದ್ಗಾ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಗಳನ್ನು ಅಲಹಾಬಾದ್‌ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ತಡೆಯನ್ನೂ ತೆರವುಗೊಳಿಸಿದೆ. ಈ ಬೆಳವಣಿಗೆಯೊಂದಿಗೆ ಶ್ರೀ ಕೃಷ್ಣ ಜನ್ಮಭೂಮಿ ದೇಗುಲಕ್ಕೆ ಸಂಬಂಧಿಸಿದ ಕಾನೂನು ಹೋರಾಟ ಪುನಾರಂಭಕ್ಕೆ ಹಾದಿ ಸುಗಮವಾದಂತಾಗಿದೆ.

ಸಿವಿಲ್‌ ನ್ಯಾಯಾಧೀಶರ (Civil Judge) ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಹೊಸದಾಗಿ ವಿಚಾರಣೆ ಆರಂಭಿಸಿ ಮಥುರಾದ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಬೇಕು. ಎಲ್ಲ ಕಕ್ಷಿದಾರರು ತಮ್ಮ ವಾದಗಳನ್ನು ಮಥುರಾದ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶರ ಮುಂದೆ ಮಂಡಿಸಬೇಕು ಎಂದು ಹೈಕೋರ್ಟ್ (High Court) ಸೂಚನೆ ನೀಡಿದೆ.

Krishna Janmabhoomi case: ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಕ್ಟೋಬರ್‌ 3 ರಿಂದ ವಿಚಾರಣೆ ಆರಂಭ

ಏನಿದು ವಿವಾದ?:

ಶ್ರೀಕೃಷ್ಣ ಜನ್ಮಭೂಮಿ ವಿವಾದ (Sri Krishna Janmabhoomi) 13.37 ಎಕರೆ ಜಾಗಕ್ಕೆ ಸಂಬಂಧಿಸಿದ್ದಾಗಿದೆ. 1973ರಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ಸಿವಿಲ್‌ ನ್ಯಾಯಾಲಯ, ಮಸೀದಿ ಟ್ರಸ್ಟ್‌ ಹಾಗೂ ದೇಗುಲ ಆಡಳಿತ ಮಂಡಳಿಗಳ ನಡುವೆ ಮೂಡಿದ ಒಮ್ಮತವನ್ನು ಆಧರಿಸಿ ಜಾಗವನ್ನು ಹಂಚಿಕೆ ಮಾಡಿತ್ತು. ಆದರೆ ಸಿವಿಲ್‌ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ 2016ರಲ್ಲಿ ದೇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. 2020ರಲ್ಲಿ ಹಿಂದು ಕಕ್ಷಿದಾರರ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲಾಗದು ಎಂದು ಸಿವಿಲ್‌ ನ್ಯಾಯಾಲಯ ತಿರಸ್ಕರಿಸಿತ್ತು.

ಆದರೆ, ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ (District Session court) ಹೇಳುವ ಮೂಲಕ ಸಿವಿಲ್‌ ನ್ಯಾಯಾಲಯದ ಆದೇಶವನ್ನು ಬದಿಗೊತ್ತಿತ್ತು. ಇದು 1991ರ ಆರಾಧನಾ ಸ್ಥಳಗಳ ಕಾಯ್ದೆಗೆ ವಿರುದ್ಧವಾಗಿದೆ ಎಂದು ಮುಸ್ಲಿಂ ಕಕ್ಷಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ಪ್ರಕರಣಕ್ಕೆ ತಡೆ ಕೊಟ್ಟಿತ್ತು.

Krishna Janmabhoomi case: ಮಸೀದಿ ತೆರವು ಮಾಡುವ ಅರ್ಜಿ ವಿಚಾರಣೆಗೆ ಒಪ್ಪಿದ ಮಥುರಾ ಕೋರ್ಟ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!