ಬಾಂಗ್ಲಾದಿಂದ ಬಂದವರೆಲ್ಲಾ ಭಾರತೀಯರೇ: ಮಮತಾ

Published : Mar 04, 2020, 10:10 AM IST
ಬಾಂಗ್ಲಾದಿಂದ ಬಂದವರೆಲ್ಲಾ ಭಾರತೀಯರೇ: ಮಮತಾ

ಸಾರಾಂಶ

ಬಾಂಗ್ಲಾದಿಂದ ಬಂದವರೆಲ್ಲಾ ಭಾರತೀಯರೇ: ಮಮತಾ ಹೊಸ ಕ್ಯಾತೆ| ಹೊಸದಾಗಿ ಪೌರತ್ವಕ್ಕೆ ಅರ್ಜಿ ಬೇಕಿಲ್ಲ

ಕಾಳಿಗಂಜ್‌[ಮಾ.04]: ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಪಿಆರ್‌ ಮತ್ತು ಆರ್‌ಆರ್‌ಸಿ ವಿಷಯ ಸಂಬಂಧ, ಕೇಂದ್ರ ಸರ್ಕಾರದ ಜೊತೆ ನೇರ ಸಂಘರ್ಷಕ್ಕೆ ಇಳಿದಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಇದೀಗ ಬಾಂಗ್ಲಾದೇಶದಲ್ಲಿ ಬಂದು ಭಾರತದಲ್ಲಿ ನೆಲೆಸಿದವರೆಲ್ಲಾ ಭಾರತೀಯ ಪ್ರಜೆಗಳೇ ಎಂದು ಹೊಸ ಕ್ಯಾತೆ ತೆಗೆದಿದ್ದಾರೆ.

ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಮತಾ, ‘ಬಾಂಗ್ಲಾದಿಂದ ಬಂದು ಇಲ್ಲಿ ನೆಲೆಸಿದವರೆಲ್ಲಾ ಭಾರತೀಯರೇ.... ಅವರಿಗೆಲ್ಲಾ ಪೌರತ್ವ ಸಿಕ್ಕಿದೆ. ಹೀಗಾಗಿ ನೀವೆಲ್ಲಾ ಮತ್ತೆ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬೇಕಿಲ್ಲ. ನೀವೆಲ್ಲಾ ಹಲವು ವರ್ಷಗಳಿಂದ ಪ್ರಧಾನಿ, ಮುಖ್ಯಮಂತ್ರಿ, ಜಿಲ್ಲಾ ಪರಿಷತ್‌ ಸದಸ್ಯರ ಆಯ್ಕೆಗೆ ಮತ ಚಲಾವಣೆ ಮಾಡುತ್ತಲೇ ಬಂದಿದ್ದೀರಿ. ಇದೀಗ ನೀವೆಲ್ಲಾ ಭಾರತೀಯ ಪ್ರಜೆಗಳಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ನಾವು ಒಬ್ಬನೇ ಒಬ್ಬ ವ್ಯಕ್ತಿಯನ್ನು ಬಂಗಾಳದಿಂದ ಹೊರಹಾಕಲು ಬಿಡುವುದಿಲ್ಲ. ನೀವ್ಯಾರು ಚಿಂತಿಸಬೇಕಿಲ್ಲ. ದೀದಿ ನಿಮ್ಮ ಜೊತೆ ಸದಾ ಇರಲಿದ್ದಾರೆ’ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹಿಂಸಾಚಾರ ಪ್ರಕರಣ ನಿರ್ವಹಿಸಿದ ರೀತಿ ಬಗ್ಗೆ ಕೇಂದ್ರದ ಬಗ್ಗೆ ಹರಿಹಾಯ್ದಿರುವ ಮಮತಾ, ಪಶ್ಚಿಮ ಬಂಗಾಳವನ್ನು ಮತ್ತೊಂದು ದೆಹಲಿ ಆಗಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು