ಮಣಿಪುರದಲ್ಲಿ ಶಾಂತಿಗೆ ಸರ್ವ ಯತ್ನ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

Published : Apr 16, 2024, 10:32 AM IST
ಮಣಿಪುರದಲ್ಲಿ ಶಾಂತಿಗೆ ಸರ್ವ ಯತ್ನ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಸಾರಾಂಶ

ಪ್ರಸ್ತುತ ಲೋಕಸಭಾ ಚುನಾವಣೆ ಮಣಿಪುರವನ್ನು ಒಡೆಯುವ ಮತ್ತು ಒಂದುಗೂಡಿಸುವವರ ನಡುವಿನ ಸಂಗ್ರಾಮವಾಗಿದೆ. ಬಿಜೆಪಿಯು ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದಕ್ಕೆ ಆದ್ಯತೆ ನೀಡುತ್ತದೆ: ಅಮಿತ್‌ ಶಾ 

ಇಂಫಾಲ್‌(ಏ.16):  ಗಲಭೆಪೀಡಿತ ಮಣಿಪುರ ರಾಜ್ಯವನ್ನು ಒಡೆಯದೆ ಅಲ್ಲಿ ಸರ್ವ ಸಮುದಾಯವನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ಬಿಜೆಪಿಯ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದರು.

ಸೋಮವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಸ್ತುತ ಲೋಕಸಭಾ ಚುನಾವಣೆ ಮಣಿಪುರವನ್ನು ಒಡೆಯುವ ಮತ್ತು ಒಂದುಗೂಡಿಸುವವರ ನಡುವಿನ ಸಂಗ್ರಾಮವಾಗಿದೆ. ಬಿಜೆಪಿಯು ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದಕ್ಕೆ ಆದ್ಯತೆ ನೀಡುತ್ತದೆ’ ಎಂದು ತಿಳಿಸಿದರು.

ಮೈತೇಯಿಗಿಲ್ಲ ಎಸ್ಟಿ ಸ್ಥಾನಮಾನ: ಮಣಿಪುರ ಗಲಭೆಗೆ ಕಾರಣವಾಗಿದ್ದ ವಿವಾದಿತ ಆದೇಶವೇ ರದ್ದು

ಕಳೆದ ವರ್ಷ ಮಣಿಪುರದಲ್ಲಿ ಪ್ರಬಲ ಮೈತೇಯಿ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡುವ ವಿಚಾರವಾಗಿ ಗಲಭೆ ಏರ್ಪಟ್ಟು 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮಣಿಪುರದ ಒಂದು ಲೋಕಸಭಾ ಕ್ಷೇತ್ರಕ್ಕೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!
10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ: ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ