
ಹರಿಯಾಣ (ಆಗಸ್ಟ್ 21) ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವೀಕೆಂಡ್ ಲಾಕ್ ಡೌನ್ ಮೊರೆ ಹೋಗಿದೆ. ನಾವು ಹೇಳುತ್ತಿರುವುದು ಹರಿಯಾಣದ ಸುದ್ದಿ.
ರಾಷ್ಟ್ರ ರಾಜಧಾನಿ ದೆಹಲಿಯ ಜೊತೆಗೆ ಗಡಿ ಹಂಚಿಕೊಂಡಿರುವ ಹರಿಯಾಣದಲ್ಲಿ ಕೊರೋನಾ ವೈರಸ್ ಹಾವಳಿ ಮಿತಿಮೀರಿದ್ದು ರಾಜ್ಯ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿದೆ. ಹರಿಯಾಣದಲ್ಲಿ ಈವರೆಗೆ 50,000ಕ್ಕೂ ಹೆಚ್ಚು ಜನ ಕೊರೋನಾ ವೈರಸ್ಗೆ ತುತ್ತಾಗಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಸರ್ಕಾರ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಮುಂದಾಗಿದೆ.
ವಾರಾಂತ್ಯದ ಶನಿವಾರ ಮತ್ತು ಭಾನುವಾರ ಹರಿಯಾಣದಲ್ಲಿ ಅಗತ್ಯ ವಸ್ತುಗಳ ಹೊರತು ಬೇರೆ ಯಾವ ಅಂಗಡಿಗಳು ಹಾಗೂ ಕಚೇರಿಗಳು ತೆರೆದಿರುವುದಿಲ್ಲ. ಎಲ್ಲವನ್ನೂ ಸಂಪೂರ್ಣವಾಗಿ ಮುಚ್ಚಲಾಗುತ್ತದೆ ಎಂದು ಸಚಿವ ಅನಿಲ್ ವಿಜ್ ಟ್ವೀಟ್ ಮೂಲಕ ತಿಳಿಸಿದ್ದು ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಕೊರೋನಾ ಮಿತಿಮೀರಿದ ಕಾರಣ ಪಂಜಾಬ್ ಸಹ ನಗರ ಮತ್ತು ಪಟ್ಟಣಗಳಲ್ಲಿ ದೈನಂದಿನ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್ ಡೌನ್ ಘೋಷಿಸಿತ್ತು. ಇದಾದ ಮೇಲೆ ಹರಿಯಾಣ ಸಹ ಅದೇ ಹಾದಿ ತುಳಿದಿದೆ. ಎಲ್ಲಿಯವರೆಗೆ ವಾರಾಂತ್ಯದ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ ಎಂಬುದನ್ನು ಸರ್ಕಾರ ಹೇಳಿಲ್ಲ. ಆದರೆ ಪರಿಸ್ಥಿತಿ ನಿಭಾಯಿಸಲು ಅನಿವಾರ್ಯವಾಗಿ ಲಾಕ್ ಡೌನ್ ಮಾಡಲಾಗುತ್ತದೆ ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ