
ನವದೆಹಲಿ(ಮಾ. 05) ಕರೋನಾ ಭೀತಿಗೆ ಇಡೀ ದೇಶವೆ ಬೆಚ್ಚಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಪ್ರಕರಣಗಳು ವರದಿಯಾಗಿದ್ದು ಆತಂಕ ಮತ್ತಷ್ಟು ಹೆಚ್ಚು ಮಾಡಿದೆ. ಎಚ್ಚೆತ್ತುಕೊಂಡಿರುವ ದೆಹಲಿ ಸರ್ಕಾರ ಮಾರ್ಚ್ 6 ರಿಂದ ಮಾರ್ಚ್ 31ರ ವರೆಗೆ ರಜಾ ಘೋಷಣೆ ಮಾಡಿದೆ.
ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ. ಸಿಬಿಎಸ್ ಸಿ ಪರೀಕ್ಷೆಗಳನ್ನು ಸಹ ಮುಂದೂಡಲೂ ತೀರ್ಮಾನ ಮಾಡಲಾಗಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
ಸರ್ಕಾರದ ಈ ಆದೇಶ ಸರ್ಕಾರಿ, ಎಂಸ್ಡಿ ,ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ಅನ್ವಯವಾಗುತ್ತದೆ. ದೆಹಲಿಯ 1ನೇ ತರಗತಿಯಿಂದ 5ನೇ ತರಗತಿವರೆಗಿಬ ಮಕ್ಕಳಿಗೆ ಮಾರ್ಚ್ 31ರ ತನಕ ರಜಾ ಇರಲಿದೆ.
ನೋಯ್ಡಾದ ವಿದ್ಯಾರ್ಥಿಯೊಬ್ಬರ ತಂದೆಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಎಂಬ ಕಾರಣಕ್ಕೆ ಬುಧವಾರ ಶಾಲೆ ಕ್ಳೋಸ್ ಮಾಡಲಾಗಿತ್ತು. ಒಂದೇ ದಿನದಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 5 ರಿಂದ 31ಕ್ಕೆ ಏರಿತ್ತು. ಗಜಿಯಾಬಾದ್ ನಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಕಂಡುಬಂದಿದ್ದು ಆತಂಕ ಹೆಚ್ಚಿಸಿತ್ತು.
ಪೋಷಕರು ಸಹ ಶಾಲೆಗಳಿಗೆ ರಜೆ ನೀಡಬೇಕು ಎಂದು ಆಗ್ರಹಿಸಿದ್ದರು. ನೋಯ್ಡಾ, ಫರೀದಾಬಾದ್, ಗಜಿಯಾಬಾದ್, ಗುರುಗ್ರಾಮ ಸೇರಿದಂತೆ ಪ್ರಮುಖ ಪ್ರದೇಶದ ಶಾಲೆಗಳಿಗೆ ರಜಾ ಘೋಷಣೆ ಮಾಡಲಾಗಿದೆ. ಇದು ಒಂದು ರೀತಿಯಲ್ಲಿ ಮುಂಜಾಗೃತಾ ಕ್ರಮ ಎಂದೇ ಪರಿಭಾವಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ