ಮನೆ ಬಾಗಿಲಿಗೇ ಪಿಜ್ಜಾ ಬರುತ್ತೆ, ರೇಶನ್‌ ಏಕಿಲ್ಲ?: ಕೇಜ್ರಿ ಕಿಡಿ

Published : Jun 07, 2021, 08:39 AM ISTUpdated : Jun 07, 2021, 09:18 AM IST
ಮನೆ ಬಾಗಿಲಿಗೇ ಪಿಜ್ಜಾ ಬರುತ್ತೆ, ರೇಶನ್‌ ಏಕಿಲ್ಲ?: ಕೇಜ್ರಿ ಕಿಡಿ

ಸಾರಾಂಶ

* ಕೊರೋನಾ ವೈರಸ್‌ ಹಾವಳಿಯ ನಿಯಂತ್ರಣಕ್ಕಾಗಿ ದೆಹಲಿ ಮಾದರಿಯಲ್ಲಿ ಜಾರಿಗೆ ತರಲಾಗಿದ್ದ ‘ಮನೆ ಬಾಗಿಲಿಗೆ ಪಡಿತರ’ ಯೋಜನೆ' * ಮನೆ ಬಾಗಿಲಿಗೇ ಪಿಜ್ಜಾ ಬರುತ್ತೆ, ರೇಶನ್‌ ಏಕಿಲ್ಲ?: ಕೇಜ್ರಿ ಕಿಡಿ * ಮನೆಬಾಗಿಲಿಗೆ ಪಡಿತರಕ್ಕೆ ಕೇಂದ್ರ ತಡೆ: ಆಕ್ರೋಶ

ನವದೆಹಲಿ(ಜೂ.07): ಕೊರೋನಾ ವೈರಸ್‌ ಹಾವಳಿಯ ನಿಯಂತ್ರಣಕ್ಕಾಗಿ ದೆಹಲಿ ಮಾದರಿಯಲ್ಲಿ ಜಾರಿಗೆ ತರಲಾಗಿದ್ದ ‘ಮನೆ ಬಾಗಿಲಿಗೆ ಪಡಿತರ’ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌ ಹಾಕಿದ್ದಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕಿಡಿಕಾರಿದ್ದಾರೆ.

ಈ ಯೋಜನೆ ವಿವಾದ ಹೈಕೋರ್ಟಲ್ಲಿದೆ ಎಂದು ಉಪರಾಜ್ಯಪಾಲರು ಶುಕ್ರವಾರ ಪಡಿತರ ವಿತರಣೆಗೆ ತಡೆ ನೀಡಿದ್ದರು. ಭಾನುವಾರ ಈ ಬಗ್ಗೆ ಮಾತನಾಡಿದ ಕೇಜ್ರಿವಾಲ್‌, ‘ಮನೆ-ಮನೆಗಳಿಗೇ ಹೋಗಿ ಪಡಿತರ ವಿತರಣೆ ಮಾಡುವ ನಮ್ಮ ಸರ್ಕಾರದ ಯೋಜನೆಯನ್ನು ಕೇಂದ್ರ ಸರ್ಕಾರ ತಡೆದದ್ದು ಏಕೆ? ಗ್ರಾಹಕರು ಆರ್ಡರ್‌ ಮಾಡಿದ ಪಿಜ್ಜಾ, ಬರ್ಗರ್‌ಗಳು, ಸ್ಮಾರ್ಟ್‌ಫೋನ್‌ಗಳು ಮತ್ತು ಉಡುಪುಗಳು ಮನೆ ಬಾಗಿಲಿಗೇ ತಲುಪಿಸಲು ಇರುವ ಅನುಮತಿ ಪಡಿತರ ವಿತರಣೆಗೆ ಏಕೆ ಇಲ್ಲ?’ ಎಂದು ಪ್ರಶ್ನಿಸಿದರು.

‘ಕೊರೋನಾ ಹಾವಳಿ ನಿಯಂತ್ರಿಸಲು ಪಡಿತರ ಫಲಾನುಭವಿಗಳಿಗೆ ಅವರ ಮನೆ ಬಾಗಿಲಿಗೇ ಪಡಿತರ ವಿತರಣೆ ಮಾಡಬೇಕು. ಇಲ್ಲದಿದ್ದರೆ ಪಡಿತರ ಅಂಗಡಿಗಳು ಕೋವಿಡ್‌ ಹರಡುವ ಕೇಂದ್ರಗಳಾಗಿ ಮಾರ್ಪಡಲಿವೆ’ ಎಂದು ಅವರು ಇದೇ ವೇಳೆ ಎಚ್ಚರಿಕೆ ನೀಡಿದರು.

ಬಿಜೆಪಿ ಸಮರ್ಥನೆ:

ಪಡಿತರಕ್ಕೆ ತಡೆ ಮೂಲಕ ಕೇಜ್ರಿವಾಲ್‌ ಸರ್ಕಾರ ನಡೆಸಬಹುದಾಗಿದ್ದ ಕೋಟ್ಯಂತರ ರು. ಮೌಲ್ಯದ ಹಗರಣವೊಂದನ್ನು ಕೇಂದ್ರ ಸರ್ಕಾರ ತಡೆದಿದೆ ಎಂದು ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ