
ಭೋಪಾಲ್(ಜ.21): ಲಸಿಕೆ ಪಡೆಯಲು ನೋಂದಾಯಿಸಿದ ಕೊರೋನಾ ವಾರಿಯರ್ಗಳೆಲ್ಲರೂ ಲಸಿಕೆ ಪಡೆಯದ ಕಾರಣ ಲಸಿಕೆ ವ್ಯರ್ಥವಾಗುತ್ತಿದೆ. ಹಾಗಾಗಿ ಆರೋಗ್ಯವಂತರು ಅಥವಾ ಲಸಿಕೆ ಪಡೆಯಲು ಇಚ್ಛಿಸುವ ಇತರ ಎಲ್ಲರಿಗೂ ಚುಚ್ಚುಮದ್ದು ಪಡೆಯಲು ಕೇಂದ್ರ ಸರ್ಕಾರ ಅವಕಾಶ ನೀಡಬೇಕು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮನವಿ ಮಾಡಿದೆ.
ಸದ್ಯ 50 ಮಿ.ಲೀ. ನ ಒಂದು ಬಾಟಲಿಯಿಂದ 10 ಜನರಿಗೆ ತಲಾ 5 ಎಂಎಲ್ನಂತೆ ಲಸಿಕೆ ನೀಡಬಹುದು. ಆದರೆ ಕೋವಿಶೀಲ್ಡ್ ಬಾಟಲ್ ಅನ್ನು ಒಮ್ಮೆ ತೆರೆದರೆ ಅದನ್ನು 6 ತಾಸಿನ ಒಳಗೆ ಪೂರ್ಣ ಬಳಸಬೇಕು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆಯನ್ನು 4 ಗಂಟೆಗಳ ಒಳಗೆ ಕಾಲಿ ಮಾಡಬೇಕು. ಆದರೆ ಅಗತ್ಯ ಸಂಖ್ಯೆಯ ಕೊರೋನಾ ವಾರಿಯರ್ಗಳು ಲಸಿಕೆ ಪಡೆಯದ ಕಾರಣ, ಅವಧಿ ಮೀರಿದ ಲಸಿಕೆ ವ್ಯರ್ಥವಾಗುತ್ತಿದೆ. ಹಾಗಾಗಿ ಎಲ್ಲರಿಗೂ ಲಸಿಕೆ ಪಡೆಯಲು ಅವಕಾಶ ನೀಡಬೇಕು ಎಂದು ಐಎಂಎ ಆಗ್ರಹಿಸಿದೆ.
ಕೊರೋನಾ ಲಸಿಕೆ ಪಡೆದ ಕೇವಲ ಶೇ.0.18 ಜನರ ಮೇಲೆ ಮಾತ್ರ ಅಡ್ಡಪರಿಣಾಮ ಉಂಟಾಗಿದೆ. ಕೇವಲ ಶೇ.0.002ರಷ್ಟುಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ವಿಶ್ವದಲ್ಲೇ ತೀರಾ ಕಮ್ಮಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೀತಿ ಆರೋಗ್ಯ (ಆರೋಗ್ಯ) ಸದಸ್ಯ ವಿ.ಕೆ. ಪೌಲ್, ‘ಲಸಿಕೆ ಪಡೆದ ನಂತರ ಉಂಟಾದ ಅಡ್ಡಪರಿಣಾಮಗಳು, ಅದರ ಗಂಭೀರತೆ ನಗಣ್ಯ. ಎರಡೂ ಲಸಿಕೆಗಳು ಸುರಕ್ಷಿತ’ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ