
ಡೆಲ್ಲಿ ಮಂಜು ಕನ್ನಡಪ್ರಭ ವಾರ್ತೆ
ಪೆಹಲ್ಲಾವ್ ( ಜಮ್ಮು-ಕಾಶ್ಮೀರ) : ಹರಹರ ಮಹದೇವ್ ಎನ್ನಲು ಸಿದ್ದವಾಗುತ್ತಿದೆ ಪಹಲ್ಗಾಂ ಬೇಸ್ ಕ್ಯಾಂಪ್. ಸವಾರಿ ಹೊತ್ತು ಸಾಗಲು ಸೈ ಎನ್ನುತ್ತಿರುವ ಅಶ್ವಗಳು..! ಪಹಲ್ಲಾ೦ ಸುಂದರ ಪರಿಸರಕ್ಕೆ ಕಪ್ಪು ಮಚ್ಚೆ ಎಂಬಂತೆ ಪಾಕಿಸ್ತಾನಿ ದುಷ್ಟರು ರಕ್ತದ ಕಲೆಗಳನ್ನು ಮಾಡಿದ್ದರು. ಹೀಗಾಗಿ ನಿತ್ಯ ಸಾವಿರಾರು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದ ಬೈಸರನ್ ಕಣಿವೆ ಇದೀಗ ನಿಶಬ್ದವಾಗಿದೆ. ಇಷ್ಟರ ನಡುವೆ ಹಿಂದೂಗಳ ಆರಾಧ್ಯ ದೈವ ಅಮರನಾಥನನ್ನು ಕಾಣುವ ಸಮಯ ಸನ್ನಿತವಾಗುತ್ತಿದೆ. ಜು.3 ರಿಂದ ಈ ಬಾರಿಯ ಅಮರನಾಥ ಯಾತ್ರೆ ಶುರುವಾಗಲಿದ್ದು, ಹಿಮ ಸ್ವರೂಪಿ ಮಹದೇವನನ್ನು ಕಾಣಲು ಲಕ್ಷಗಳ ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿದ್ದಾರೆ. ಆ.17 ಯಾತ್ರೆ ಕೊನೆಗೊಳ್ಳಲಿದೆ.
ಕಳೆದ ವರ್ಷ 5.11 ಲಕ್ಷ ಮಂದಿ ಭಕ್ತರು ಕಾಶ್ಮೀರ ಕಣಿವೆಯಲ್ಲಿ ಹಿಮಸ್ವರೂಪಿಯಾಗಿ ಕೂತಿರುವ ಮಹದೇವನನ್ನು ದರ್ಶನ ಮಾಡಿದರು. ಇನ್ನು ಬೋಲೇನಾಥನನ್ನು ಕಾಣಲು 2 ದಾರಿಗಳು ಇವೆ. ಶ್ರೀನಗರದಿಂದ ಅನಂತನಾಗ್ ಮೂಲಕ ಪಹಲ್ಗಾಂ ತಲುಪುವುದು. ಇದರಿಂದ ಚಂದನ್ ವಾಡಿಯ ತನಕ ವಾಹನಗಳಲ್ಲಿ ಸಾಗಿ ಅಲ್ಲಿಂದ 32 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಬೇಕು. ಇದು 3 ರಿಂದ 4 ದಿನಗಳ ನಡಿಗೆ ಆಗಿರುತ್ತೆ. ಇನ್ನೊಂದು ಶ್ರೀನಗರದಿಂದ ಬಾಲ್ಟಾಲ್ ಬೇಸ್ ಕ್ಯಾಂಪ್ ತಲುಪಿ ಅಲ್ಲಿಂದ 13 ಕಿ.ಮೀ. ನಡಿಗೆಯಲ್ಲಿ ಸಾಗಬೇಕು.
ಅಶ್ವಗಳಿಗೆ ವಿಮೆ: ಈಗಾಗಲೇ ಒಂದೊಂದು ಪೂರ್ವ ಸಿದ್ಧತೆ ಆರಂಭಿಸಿರುವ ಜಮ್ಮು ಮತ್ತು ಕಾಶ್ಮೀರದ ಸರ್ಕಾರ, ಭಕ್ತರನ್ನು ಹೊತ್ತು ಸಾಗುವ ಕುದುರೆಗಳ ನೋಂದಣಿ ಶುರು ಮಾಡಿದೆ. ಕುದುರೆಗಳ ನೋಂದಣಿ ಕಡ್ಡಾಯಗೊಳಿಸಿದೆ. ಇದರ ಜೊತೆಗೆ ಭಕ್ತರನ್ನು ಹೊತ್ತು ಸಾಗುವಾಗ ಆಕಸ್ಮಿಕ ದುರಂತಗಳಿಗೆ ತುತ್ತಾಗಿ ಕುದುರೆಗಳು ಮೃತಪಟ್ಟರೇ ವಿಮೆಯ ಹಣ 50 ಸಾವಿರವನ್ನು ಆ ಕುದುರೆಯ ಮಾಲೀಕನಿಗೆ ತಲುಪಿಸುವ ಒಂದು ಯೋಜನೆ ಕೂಡ ಮಾಡಿದ್ದು, ಇದರ ನೋಂದಣಿ ಕೂಡ ಶುರುವಾಗಿದೆ.
ಇನ್ನು ಒಂದು ಕಡೆಯ ಸವಾರಿ ₹4000, ಎರಡೂ ಕಡೆಯ ಸವಾರಿ 7 ರಿಂದ8 ಸಾವಿರ ರು. ಇರುತ್ತದೆ ಎಂದು ಕುದುರೆ ಮಾಲೀಕರು ತಿಳಿಸಿದ್ದಾರೆ. ಈ ಅಮರನಾಥ ಯಾತ್ರೆಯಲ್ಲಿ ಎರಡೂ ಬೇಸ್ ಕ್ಯಾಂಪ್ಗಳಿಂದ ಹೆಚ್ಚು ಕಡಿಮೆ 14 ರಿಂದ 15 ಸಾವಿರ ಕುದುರೆಗಳು ಬಳಕೆಯಾಗುತ್ತವೆ. ಹಾಗಾಗಿ ನಾವು ಪೂರ್ವ ಸಿದ್ಧತೆ ಆರಂಭಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೈಸರನ್ ವ್ಯಾಲಿಯ ರಕ್ತದ ಕಲೆಯಿಂದಾಗಿ ಈಬಾರಿ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆಗೆ ಬರುವುದು ಅನುಮಾನ ಇದೆ. ಪ್ರವಾಸಿಗಳು ಬರುವುದಕ್ಕೂ ಈ ದುಷ್ಟರು ಕಲ್ಲು ಹಾಕಿದ್ರು. ಈಗ ಅಮರನಾಥನ ಭಕ್ತರು ಬರುವ ಸಮಯ ಶುರುವಾಗಲಿದೆ. ಏನಾಗುತ್ತೋ ಏನೋ, ಅಂತು ಈ ವರ್ಷ ನಮ್ಮ ಹೊಟ್ಟೆಗೆ ತಣ್ಣೀರಿನ ಬಟ್ಟೆಯೇ ಸರಿ. ಪ್ರವಾಸಿಗಳು, ಅಮರನಾಥ ಯಾತ್ರಾರ್ಥಿಗಳಿಂದಲೇ ನಮ್ಮ ಬದುಕು ಎನ್ನುತ್ತಾರೆ ಕುದುರೆ ಮಾಲೀಕ ಆಶ್ರಫ್ ಆಲಿ.
ಇನ್ನು ಪಹಲ್ಲಾಂ ಅಭಿವೃದ್ಧಿ ಪ್ರಾಧಿಕಾರದಿಂದ ಸಿದ್ದತೆಗಳು ಶುರುವಾಗಲಿದ್ದು ಬೇಸ್ ಕ್ಯಾಂಪ್ ನಲ್ಲಿ ಭಕ್ತರ ನೋಂದಣಿ, ಆರೋಗ್ಯ ಸೇವೆಗಳು ಸೇರಿದಂತೆ ಹಲವು ಕೆಲಸಗಳು ಇನ್ನೂ ಆರಂಭಗೊಳ್ಳಬೇಕಿದೆ.
ರಾಜಸ್ಥಾನದ ಗಡಿಯಲ್ಲಿ ಮತ್ತೆ ಪಾಕ್ ಡೋನ್ ಸಂಚಾರ: ಭಾರೀ ಕಟ್ಟೆಚ್ಚರ
ಜೈಪುರ: ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಪಾಕಿಸ್ತಾನದ ಗಡಿಯಲ್ಲಿ ಗುರುವಾರ ಡೋನ್ ಪತ್ತೆಯಾಗಿದ್ದು, ಬಿಎಸ್ಎಫ್ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ.
ಅನೂಪ್ಗಢ ಪ್ರದೇಶದ ಗ್ರಾಮಸ್ಥರು ಬೆಳಗ್ಗೆ 9.45ರ ಸುಮಾರಿಗೆ ಡೋನ್ ಅನ್ನು ಗಮನಿಸಿ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅನೂಪ್ ಗಢ ಠಾಣಾಧಿಕಾರಿ ಈಶ್ವರ್ ಜಂಗಿಡ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 5-7 ಅಡಿ ಉದ್ದದ ಡೋನ್ ಪತ್ತೆಯಾಗಿದ್ದು, ಅದರ ಕ್ಯಾಮೆರಾ ಮಾಡ್ಯೂಲ್ ಮುರಿದು ಬೇರ್ಪಟ್ಟಿದೆ. 'ನಾವು ಡೋನ್ ವಶಪಡಿಸಿಕೊಂಡಿದ್ದೇವೆ. ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳವನ್ನು ಸಹ ಕರೆಯಲಾಗಿದೆ. ಡೋನ್ನ ಮೂಲ ಮತ್ತು ಉದ್ದೇಶವನ್ನು ಪತ್ತೆ ಹಚ್ಚಲು ಅದನ್ನು ವಿಧಿವಿಜ್ಞಾನ ಮತ್ತು ತಾಂತ್ರಿಕ ವಿಶ್ಲೇಷಣೆಗೆ ಕಳುಹಿಸಲಾಗುತ್ತದೆ' ಎಂದು ಈಶ್ವರ್ ಜಂಗಿಡ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ