ಕೇಂದ್ರ ಸಚಿವ ನಮಿಸಿದ ಅಂಬೇಡ್ಕರ್ ಪ್ರತಿಮೆ ಶುದ್ಧೀಕರಣ ಮಾಡಿದರು| ಗಂಗಾಜಲದಿಂದ ಶುದ್ಧೀಕರಣ ಮಾಡಿದ ಆರ್ಜೆಡಿ ಕಾರ್ಯಕರ್ತರು
ಬೇಗುಸರಾಯ್[ಫೆ.16]: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮಾಲಾರ್ಪಣೆ ಮಾಡಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಸಿಪಿಐ ಹಾಗೂ ಆರ್ಜೆಡಿ ಕಾರ್ಯಕರ್ತರು ಗಂಗಾಜಲದಿಂದ ಶುದ್ಧೀಕರಣ ಮಾಡಿದ ಘಟನೆ ಇಲ್ಲಿನ ಬಲಿಯಾ ಬ್ಲಾಕ್ನಲ್ಲಿ ನಡೆದಿದೆ.
ಗಿರಿರಾಜ್ ಸಿಂಗ್ ಮನುವಾದಿಯಾಗಿದ್ದು, ಅಂಬೇಡ್ಕರ್ ತತ್ವ- ಸಿದ್ಧಾಂತಗಳ ವಿರೋಧಿ. ಅಂಥವರು ಮಾಲಾರ್ಪಣೆ ಮಾಡುವುದು ಮೂರ್ತಿಯನ್ನು ಅಪವಿತ್ರಗೊಳಿಸಿದಂತೆ ಎಂದು ವಾದಿಸಿದ್ದಾರೆ. ಶುಕ್ರವಾರ ನಡೆದ ಸಿಎಎ ಪರ ರಾರಯಲಿ ವೇಳೆ ಗಿರಿರಾಜ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು.
Bihar: CPI (Communist Party of India) & RJD (Rashtriya Janata Dal) workers washed the statue of BR Ambedkar (in pic 3), after Union Minister Giriraj Singh garlanded the statue in Begusarai. (14.02.2020) pic.twitter.com/opwCPqpaAN
— ANI (@ANI)ಇದಾದ ಮರುದಿನವೇ ಸಿಎಎ ವಿರೋಧಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಪಿಐ ಹಾಗೂ ಆರ್ಜೆಡಿ ನಾಯಕರು ಗಂಗಾಜಲದಿಂದ ಶುದ್ಧೀಕರಣ ಮಾಡಿದ್ದಾರೆ.