ಜ್ಞಾನವಾಪಿ ಗದ್ದಲದ ಬೆನ್ನಲ್ಲೇ ಕುತುಬ್ ಮಿನಾರ್ ವಿವಾದ, ಉತ್ಖನನ ನಡೆಸಲು ASIಗೆ ಸರ್ಕಾರದ ಆದೇಶ!

Published : May 22, 2022, 02:06 PM ISTUpdated : May 22, 2022, 02:07 PM IST
ಜ್ಞಾನವಾಪಿ ಗದ್ದಲದ ಬೆನ್ನಲ್ಲೇ ಕುತುಬ್ ಮಿನಾರ್ ವಿವಾದ, ಉತ್ಖನನ ನಡೆಸಲು ASIಗೆ ಸರ್ಕಾರದ ಆದೇಶ!

ಸಾರಾಂಶ

* ಜ್ಞಾನವಾಪಿ ಮಸೀದಿ ಸಮೀಕ್ಷೆಯ ಬೆನ್ನಲ್ಲೇ, ದೆಹಲಿಯ ಕುತುಬ್ ಮಿನಾರ್ ವಿವಾದ * ಹಿಂದೂ ದೇವತೆಗಳ ವಿಗ್ರಹಗಳು ಕಂಡುಬಂದಿವೆ ಎಂಬ ವಾದ * ಸ್ಮಾರಕವನ್ನು ಹಿಂದೂ ಚಕ್ರವರ್ತಿ ರಾಜಾ ವಿಕ್ರಮಾದಿತ್ಯ ನಿರ್ಮಿಸಿದ ಎಂಬ ಹೇಳಿಕೆ

ನವದೆಹಲಿ(ಮೇ.22): ಜ್ಞಾನವಾಪಿ ಮಸೀದಿ ಸಮೀಕ್ಷೆಯ ಬೆನ್ನಲ್ಲೇ, ದೆಹಲಿಯ ಕುತುಬ್ ಮಿನಾರ್ ವಿಚಾರವಾಗಿ ವಿವಾದ ಭುಗಿಲೆದ್ದಿದೆ. ಹಿಂದೂ ದೇವತೆಗಳ ವಿಗ್ರಹಗಳು ಕಂಡುಬಂದಿವೆ ಮತ್ತು ಸ್ಮಾರಕವನ್ನು ಹಿಂದೂ ಚಕ್ರವರ್ತಿ ರಾಜಾ ವಿಕ್ರಮಾದಿತ್ಯ ನಿರ್ಮಿಸಿದ ಎಂದು ಹೇಳಲಾಗಿದೆ. ಇದೀಗ, ಕುತುಬ್ ಮಿನಾರ್‌ನಲ್ಲಿ ವಿಗ್ರಹಗಳ ಉತ್ಖನನ ಮತ್ತು ಪ್ರತಿಮಾಶಾಸ್ತ್ರವನ್ನು ನಡೆಸಲು ಸಂಸ್ಕೃತಿ ಸಚಿವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಸೂಚನೆ ನೀಡಿದೆ.

ಎಎಸ್‌ಐನ ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಅವರು ಕುತುಬ್ ಮಿನಾರ್ ಅನ್ನು ರಾಜಾ ವಿಕ್ರಮಾದಿತ್ಯ ನಿರ್ಮಿಸಿದ್ದು, ತುಬ್ ಅಲ್-ದಿನ್ ಐಬಕ್ ನಿರ್ಮಿಸಿಲ್ಲ. ಇದನ್ನು ಸೂರ್ಯನ ದಿಕ್ಕನ್ನು ಅಧ್ಯಯನ ಮಾಡಲು ನಿರ್ಮಾಣ ಮಾಡಲಾಗಿದೆ ಎಂಬ ಹೇಳಿಕೆ ಬಳಿಕ ವಿವಾದ ಸ್ಫೋಟಗೊಂಡಿದೆ.

ಸಂಸ್ಕೃತಿ ಸಚಿವಾಲಯವು ತನ್ನ ಉತ್ಖನನ ವರದಿಯನ್ನು ಸಲ್ಲಿಸುವಂತೆ ಎಎಸ್‌ಐಗೆ ಕೇಳಿದೆ. ಮಸೀದಿಯಿಂದ 15 ಮೀಟರ್ ದೂರದಲ್ಲಿ ಮಿನಾರೆಟ್‌ನ ದಕ್ಷಿಣದಲ್ಲಿ ಉತ್ಖನನವನ್ನು ಪ್ರಾರಂಭಿಸಬಹುದು. ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಮೇ 21 ರ ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಂಡರು.

Qutub Minar: ದಿಲ್ಲಿಯ ಕುತುಬ್‌ ಮಿನಾರ್‌ ಸೂರ್ಯ ಗೋಪುರ: ಮುಸ್ಲಿಂ ಸ್ಮಾರಕ ಅಲ್ಲ

ಗೋವಿಂದ್ ಮೋಹನ್ ಅವರು ಮೂವರು ಇತಿಹಾಸಕಾರರು, ನಾಲ್ವರು ಎಎಸ್ಐ ಅಧಿಕಾರಿಗಳು ಮತ್ತು ಸಂಶೋಧಕರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಕುತುಬ್ ಮಿನಾರ್ ಸಂಕೀರ್ಣದಲ್ಲಿ 1991 ರಿಂದ ಉತ್ಖನನ ಕಾರ್ಯ ನಡೆದಿಲ್ಲ ಎಂದು ಎಎಸ್‌ಐ ಅಧಿಕಾರಿಗಳು ಕಾರ್ಯದರ್ಶಿಗೆ ತಿಳಿಸಿದರು.

ಈ ಹಿಂದೆ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ವಕ್ತಾರ ವಿನೋದ್ ಬನ್ಸಾಲ್, ಕುತುಬ್ ಮಿನಾರ್ ವಾಸ್ತವವಾಗಿ 'ವಿಷ್ಣು ಸ್ತಂಭ' ಮತ್ತು 27 ಹಿಂದೂ-ಜೈನ ದೇವಾಲಯಗಳನ್ನು ಕೆಡವಿ ಪಡೆದ ವಸ್ತುಗಳಿಂದ ಈ ರಚನೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

Qutub Minar ಕುತುಬ್‌ ಮಿನಾರ್‌ ಹೆಸರನ್ನು ವಿಷ್ಣು ಸ್ತಂಭವೆಂದು ಬದಲಾಯಿಸಲು ಪ್ರತಿಭಟನೆ

ಕುತುಬ್ ಮಿನಾರ್‌ನಲ್ಲಿ 1200 ವರ್ಷಗಳಷ್ಟು ಹಳೆಯದಾದ ನರಸಿಂಹನ ವಿಗ್ರಹ, ಗಣಪತಿ ಮತ್ತು ಕೃಷ್ಣನ ವಿಗ್ರಹಗಳು ಪತ್ತೆಯಾದ ನಂತರ ಹಲವಾರು ಹಿಂದೂ ಗುಂಪುಗಳು ಪ್ರತಿಭಟನೆಗಳನ್ನು ನಡೆಸಿದರು, ಹನುಮಾನ್ ಚಾಲೀಸಾವನ್ನು ಪಠಿಸಿದರು ಮತ್ತು ಕುತುಬ್ ಮಿನಾರ್ ಅನ್ನು ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!