UP Elections: ಯುಪಿ ಚುನಾವಣೆ ಮುಂದಕ್ಕೆ? ಮೋದಿ, ಆಯೋಗಕ್ಕೆ ಹೈಕೋರ್ಟ್‌ ಮನವಿ!

Published : Dec 24, 2021, 04:24 AM ISTUpdated : Dec 24, 2021, 04:53 AM IST
UP Elections: ಯುಪಿ ಚುನಾವಣೆ ಮುಂದಕ್ಕೆ? ಮೋದಿ,  ಆಯೋಗಕ್ಕೆ ಹೈಕೋರ್ಟ್‌ ಮನವಿ!

ಸಾರಾಂಶ

* ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ * ಚುನಾವಣೆ ಮುಂದೂಡಲು ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಲಹಾಬಾದ್‌ ಹೈಕೋರ್ಟ್‌ ಮನವಿ  * ಚುನಾವಣೆಗೆ ಸಂಬಂಧಿಸಿದಂತೆ ಜನ ಸೇರುವುದನ್ನು ತಡೆಯಬೇಕು ಎಂದು ಉಲ್ಲೇಖ  

ಅಲಹಾಬಾದ್‌(ಡಿ.24): ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಬರುವ ಉತ್ತರ ಪ್ರದೇಶ ಚುನಾವಣೆಯನ್ನು ಒಂದು ಅಥವಾ 2 ತಿಂಗಳು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಲಹಾಬಾದ್‌ ಹೈಕೋರ್ಟ್‌ ಮನವಿ ಮಾಡಿದೆ. ಜೊತೆಗೆ ಚುನಾವಣೆಗೆ ಸಂಬಂಧಿಸಿದಂತೆ ಜನ ಸೇರುವುದನ್ನು ತಡೆಯಬೇಕು ಎಂದು ಹೇಳಿದೆ.

ಹೈಕೋರ್ಟ್‌ನಲ್ಲಿ ಜಾಮೀನು ಸಂಬಂಧಿ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ಸಮಯದಲ್ಲಿ ಕೋರ್ಟ್‌ ಈ ವಿಷಯವನ್ನು ಪ್ರಸ್ತಾಪಿಸಿದೆ. ‘ಚುನಾವಣಣಾ ರಾರ‍ಯಲಿಗಳನ್ನು ತಡೆಯದೇ ಇದ್ದರೆ ಮುಂದಿನ ಪರಿಣಾಮಗಳು 2ನೇ ಅಲೆಗಿಂತಲೂ ಭೀಕರವಾಗಿರುತ್ತದೆ. ಬಂಗಾಳದಲ್ಲಿ ನಡೆದ ಗ್ರಾಮಪಂಚಾಯತ್‌ ಚುನಾವಣೆಯ ನಂತರ ಅತಿ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದರು. ಹಾಗಾಗಿ ಈ ಚುನಾವಣೆಯ ಸಮಯದಲ್ಲೂ ಇಂತಹ ಸಮಸ್ಯೆ ತಲೆದೋರಬಹುದು. ಹಾಗಾಗಿ ಚುನಾವಣಾ ರಾರ‍ಯಲಿಗಳನ್ನು ನಿಷೇಧಿಸಿ ಮತ್ತು ಚುನಾವಣೆಯನ್ನು ಸ್ವಲ್ಪ ಕಾಲ ಮುಂದೂಡಿ ಎಂದು ಕೋರ್ಟ್‌ ಮನವಿ ಮಾಡಿದೆ.

ಇದೇ ವೇಳೆ ಕೋವಿಡ್‌ ಲಸಿಕೆ ವಿತರಿಸಲು ಮೋದಿ ಕೈಗೊಂಡ ಕ್ರಮಗಳನ್ನು ನ್ಯಾಯಮೂರ್ತಿ ಶೇಖರ್‌ ಯಾದವ್‌ ಶ್ಲಾಘಿಸಿದರು.

 2 ಕೋಟಿ ಮೌಲ್ಯದ ಭೂಮಿ ಕೆಲವೇ ನಿಮಿಷದಲ್ಲಿ 18 ಕೋಟಿಗೆ ಮಾರಾಟ!

ಹಲವು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ (Ram Temple) ಸುತ್ತಮುತ್ತ ನಡೆದಿದೆ ಎನ್ನಲಾದ ಭೂ ಅಕ್ರಮದ ಕುರಿತಾಗಿ ಕಾಂಗ್ರೆಸ್ (Congress )ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಗುರುವಾರ ಅತ್ಯಂತ ವಿವರವಾದ ಮಾಹಿತಿ ನೀಡಿದರು. ಬಿಜೆಪಿಯ ಮುಖಂಡರ (BJP leaders) ಸಂಬಂಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು  ದೇವಸ್ಥಾನದ ಸುತ್ತಮುತ್ತಲೂ ಅಕ್ರಮವಾಗಿ ಭೂಮಿ ಖರೀದಿ ಮಾಡಿದ್ದರ ಕುರಿತಾಗಿ ಬಂದಿರುವ ಪ್ರತ್ಯೇಕ ಆರೋಪಗಳ ಬಗ್ಗೆ ಉತ್ತರ ಪ್ರದೇಶ ಸರ್ಕಾರ (Uttar Pradesh government) ಈಗಾಗಲೇ ತನಿಖೆಯನ್ನೂ ಆರಂಭ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಆಸ್ತಿ ಮಾರಾಟದ ದಾಖಲೆಗಳನ್ನು ತೋರಿಸಿದರು.  ರಾಮಮಂದಿರ ಸುತ್ತಮುತ್ತಲಿನ ಜಾಗ ಅಂದಾಜು 2 ಕೋಟಿ ರೂಪಾಯಿ ಮೌಲ್ಯದ್ದಾಗಿದ್ದು, ಇದನ್ನು ಎರಡು ಬಾರಿ ಮಾರಾಟ ಮಾಡಲಾಗಿದೆ. ಮೊದಲ ಬಾರಿಗೆ ಇದನ್ನು 8 ಕೋಟಿಗೆ ಮಾರಾಟ ಮಾಡಲಾಗಿದ್ದರೆ, 2ನೇ ಬಾರಿಗೆ 18.5 ಕೋಟಿ ರೂಪಾಯಿಗೆ 2020ರಲ್ಲಿ ಕೇಂದ್ರ ಸರ್ಕಾರ ನಿರ್ಮಿಸಿರುವ ರಾಮಮಂದಿರ ಟ್ರಸ್ಟ್ ಗೆ ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

2017ರಲ್ಲಿ ನಿರ್ದಿಷ್ಟ ವ್ಯಕ್ತಿಗೆ ಮಾರಾಟ ಮಾಡಲಾಗಿದ್ದ ಒಂದು ತುಂಡು ಭೂಮಿಯನ್ನು ಆ ವ್ಯಕ್ತಿ ಎರಡು ಭಾಗಗಳಲ್ಲಿ ಮಾರಾಟ ಮಾಡಿದ್ದಾನೆ. ಮೊದಲ ಭಾಗವನ್ನು ರಾಮಮಂದಿರ ಟ್ರಸ್ಟ್ ಗೆ ನೇರವಾಗಿ 8 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಇನ್ನು 2ನೇ ಭಾಗವನ್ನು ಇದಾದ 19 ನಿಮಿಷಗಳ ನಂತರ ರವಿ ಮೋಹನ್ ತಿವಾರಿ (Ravi Mohan Tiwari) ಎನ್ನುವ ವ್ಯಕ್ತಿಗೆ 2 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗುತ್ತದೆ. ಐದು ನಿಮಿಷದ ಬಳಿಕ ರವಿ ಮೋಹನ್ ತಿವಾರಿ 2 ಕೋಟಿ ರೂ. ಮೌಲ್ಯದ ಈ ಭೂಮಿಯನ್ನು 18.5 ಕೋಟಿ ರೂಪಾಯಿಗೆ ರಾಮಮಂದಿರ ಟ್ರಸ್ಟ್ ಗೆ ಮಾರಾಟ ಮಾಡುತ್ತಾರೆ. ಕೇವಲ 2 ಕೋಟಿ ರೂಪಾಯಿ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಿನ ಮೌಲ್ಯವಿರುವ ಈ ಭೂಮಿಯನ್ನು ರಾಮಮಂದಿರ ಟ್ರಸ್ಟ್ ಗೆ 8 ಕೋಟಿ ಹಾಗೂ 18.5 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು