
ನವದೆಹಲಿ(ಮೇ.16): ಕೆಲ ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಕೇಜ್ರಿವಾಲ್ ಅವರಿಗೆ ‘ವಿಶೇಷ ಸೌಲಭ್ಯ’ ನೀಡಲಾಗಿದೆ ಎಂದು ಜನ ಮಾತನಾಡುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು,‘ಅರವಿಂದ್ ಕೇಜ್ರಿವಾಲ್ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಎಂದಿನ ತೀರ್ಪಿನಂತಿರಲಿಲ್ಲ. ಅದು ಕೇಜ್ರಿವಾಲ್ ಅವರಿಗೆ ನೀಡಿದ ವಿಶೇಷ ಸೌಲಭ್ಯದಂತಿತ್ತು ಎಂದು ದೇಶದ ಜನರು ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ಮದ್ಯ ಹಗರಣ ಕೇಸಲ್ಲಿ ಆಪ್ ಪಕ್ಷವೇ ಆರೋಪಿ: ಕೇಜ್ರಿವಾಲ್ಗೆ ಮತ್ತೆ ಸಂಕಷ್ಟ..!
ಕೇಜ್ರಿವಾಲ್ ತಮಗೆ ಚುನಾವಣೆಯಲ್ಲಿ ಹೆಚ್ಚು ಮತ ಬಂದರೆ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಗೆದ್ದರೆ ಅವರಲ್ಲಿ ತಪ್ಪಿದ್ದರೂ ಸುಪ್ರೀಂ ಕೋರ್ಟ್ ಅವರನ್ನು ಜೈಲಿಗೆ ಅಟ್ಟುವುದಿಲ್ಲ ಎನ್ನುವುದನ್ನು ಕೇಜ್ರಿವಾಲ್ ಹೇಳಲು ಹೊರಟಿದ್ದಾರೆ. ಇದು ಸ್ಪಷ್ಟ ನ್ಯಾಯಾಂಗ ನಿಂದನೆ. ಇವರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಧೀಶರು ಕೇಜ್ರಿವಾಲ್ ಹೇಗೆ ಜಾಮೀನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಬೇಕು’ ಎಂದರು.
ತಿಹಾರ್ನಲ್ಲಿ ಕ್ಯಾಮರಾ ಅಳವಡಿಸಲಾಗಿದೆ ಎಂಬುದಕ್ಕೆ ಉತ್ತರಿಸಿದ ಅಮಿತ್ ಶಾ,‘ ತಿಹಾರ್ ಜೈಲಿನ ನಿರ್ವಹಣೆ ದೆಹಲಿ ಸರ್ಕಾರದಲ್ಲಿರುತ್ತದೆ ಹೊರತು ಕೇಂದ್ರದಲ್ಲಲ್ಲ. ಈ ರೀತಿ ದಿಕ್ಕುತಪ್ಪಿಸುವ ಹೇಳಿಕೆಗಳನ್ನು ನೀಡುವುದರಿಂದ ಕೇಜ್ರಿವಾಲ್ ಹಿಂದೆ ಸರಿಯಬೇಕು ಎಂದರು.
ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಸಲುವಾಗಿ ಇತ್ತೀಚೆಗೆ ಸುಪ್ರೀಂಕೋರ್ಟ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ