
ನವದೆಹಲಿ(ಫೆ.15): ಭಾರತದ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಳಿಕ ನೆರೆಯ ನೇಪಾಳ ಮತ್ತು ಶ್ರೀಲಂಕಾದಲ್ಲೂ ಬಿಜೆಪಿ ಸರ್ಕಾರ ಸ್ಥಾಪಿಸಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಯೋಜನೆ ರೂಪಿಸಿದ್ದಾರೆ ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಹೇಳಿದ್ದಾರೆ.
ಇತ್ತೀಚೆಗೆ ತ್ರಿಪುರಾದ ರಬೀಂದ್ರ ಶತವಾರ್ಷಿಕ ಭವನದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅಮಿತ್ ಶಾ ಅವರು ಈ ವಿಚಾರ ಹಂಚಿಕೊಂಡಿದ್ದಾರೆ ಎಂದು ತಮಗೆ ಶಾ ಅವರು ಹೇಳಿದ್ದಾರೆ ಎಂದು ಬಿಪ್ಲಬ್ ಹೇಳಿದ್ದಾಗಿ ‘ಈಸ್ಟ್ ಮೋಜೊ’ ಎಂಬ ವೆಬ್ಸೈಟ್ ವರದಿ ಮಾಡಿದೆ.
ಅಲ್ಲದೆ ಶಾ ನೇತೃತ್ವದಲ್ಲೇ ಬಿಜೆಪಿ ವಿಶ್ವದ ಅತಿದೊಡ್ಡ ಪಕ್ಷವಾಗಿದೆ ಎಂದೂ ದೇಬ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ