
ನವದೆಹಲಿ(ಮೇ 10) ನವದೆಹಲಿಯ ರಕಾಬ್ ಗಂಜ್ ನ ಗುರುದ್ವಾರದಲ್ಲಿ ಸಿದ್ಧವಾಗುತ್ತಿರುವ ಕೊವೀಡ್ ಕೇರ್ ಕೇಂದ್ರಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್ 2 ಕೋಟಿ ರೂ ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ತಿಳಿಸಿದ್ದಾರೆ.
ದಿಲ್ಲಿಯಲ್ಲಿನ ಕೋರೋನಾ ಪರಿಸ್ಥಿತಿಗೆ ಸಂಬಂಧಿಸಿ ಮೇರುನಟ ನನಗೆ ಕರೆ ಮಾಡಿ ವಾಸ್ತವ ಸ್ಥಿತಿಯನ್ನು ತಿಳಿದುಕೊಂಡರು ಎಂದು ಹೇಳಿದ್ದಾರೆ.
ರಕಾಬ್ ಗಂಜ್ ನ ಗುರುದ್ವಾರದಲ್ಲಿ ಕೇರ್ ಸೆಂಟರ್ ತೆರೆಯಲಾಗುತ್ತಿದ್ದು 300 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ರೋಗಿಗಳಿಗೆ ಎಲ್ಲಾ ಸೇವೆಗಳನ್ನು ಉಚಿತವಾಗಿ ನೀಡುವ ತೀರ್ಮಾನ ಮಾಡಲಾಗಿದೆ.
ಕೊರೋನಾ ಜತೆಗೆ ಕ್ಯಾನ್ಸರ್ ಗುಣಪಡಿಸಬಲ್ಲ ಲಸಿಕೆ ಮಾರುಕಟ್ಟೆಗೆ
ತಮ್ಮ ಬ್ಲಾಗ್ ನಲ್ಲಿ ಅಮಿತಾಬ್ ಈ ಬಗ್ಗೆ ಬರೆದುಕೊಂಡಿದ್ದಾರೆ. ಸಾರ್ವಜನಿಕವಾಗಿ ಇದನ್ನು ಮಾತನಾಡಿ ಈ ಸಂದರ್ಭದಲ್ಲಿ ಪ್ರಚಾರ ಪಡೆದುಕೊಳ್ಳುವುದು ಬೇಡ ಎಂದು ಎನಿಸಿತು ಎಂಬುದನ್ನು ತಿಳಿಸಿದ್ದಾರೆ.
ಅಮಿತಾಬ್ ಬಚ್ಚನ್, ಬೆನ್ ಅಫ್ಲೆಕ್, ಕ್ರಿಸ್ಸಿ ಟೀಜೆನ್, ಜಿಮ್ಮಿ ಕಿಮ್ಮೆಲ್, ಸೀನ್ ಪೆನ್, ಡೇವಿಡ್ ಲೆಟರ್ಮ್ಯಾನ್ ರಂತಹ ದಿಗ್ಗಜರು ವಾಕ್ಸ್ ಲೈವ್ ನಲ್ಲಿ ಸಂವಾದ ನಡೆಸಿದ್ದರು. ಕೊರೋನಾದಿಂದ ಜಗತ್ತು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡಿದ್ದರು. ಬಲ್ ಸಿಟಿಜನ್ ನಿಧಿಸಂಗ್ರಹ ಕನ್ಸರ್ಟ್ 302 ಮಿಲಿಯನ್ ಡಾಲರ್ ಸಂಗ್ರಹಿಸುವ ಗುರಿಯನ್ನು ಹೊಂದಿದೆ.
ಬಿಗ್ ಬಿ ಹೊರತಾಗಿ, ಸೆಲೆನಾ ಗೊಮೆಜ್ ಆಯೋಜಿಸಿದ್ದ ಸಂವಾದದಲ್ಲಿ ಎಡ್ಡಿ ವೆಡ್ಡರ್, ಫೂ ಫೈಟರ್ಸ್, ಜೆ ಬಾಲ್ವಿನ್, ಎಚ್.ಇ.ಆರ್., ಲೋಪೆಜ್ ಭಾಗವಹಿದಿದ್ದು ಈ ತಿಂಗಳ ಆರಂಭದಲ್ಲಿಯೇ ಶೂಟ್ ಆಗಿತ್ತು.
ದೇಶದಲ್ಲಿ ಪ್ರತಿ ದಿನ ನಾಲ್ಕು ಲಕ್ಷಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿವೆ. ಈ ಸಂದರ್ಭದಲ್ಲಿ ಬಿಗ್ ಬಿ ಮಾದರಿ ನಡೆಯನ್ನು ಹಾಕಿಕೊಟ್ಟಿದ್ದಾರೆ. ನಟ ಸೋನು ಸೂದ್ ಕೊರೋನಾ ಆರಂಭದಿಂದಲೂ ನೆರವು ನೀಡಿಕೊಂಡೇ ಬಂದಿದ್ದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ