‘ಅಂಫನ್‌’ ಚಂಡಮಾರುತ ವಿರುದ್ಧ ಗೆದ್ದ ಪಟ್ನಾಯಕ್‌: ಮಮತಾ ಫೇಲ್‌!

Published : May 22, 2020, 08:44 AM ISTUpdated : May 22, 2020, 11:10 AM IST
‘ಅಂಫನ್‌’ ಚಂಡಮಾರುತ ವಿರುದ್ಧ ಗೆದ್ದ ಪಟ್ನಾಯಕ್‌: ಮಮತಾ ಫೇಲ್‌!

ಸಾರಾಂಶ

ಚಂಡಮಾರುತ: ಪಟ್ನಾಯಕ್‌ಗೆ ಮತ್ತೆ ಯಶ, ಮಮತಾ ಫೇಲ್‌| ಮತ್ತೊಮ್ಮೆ ಯಶಸ್ವಿಯಾಗಿ ಚಂಡಮಾರುತ ನಿರ್ವಹಿಸಿದ ಒಡಿಶಾ ಸಿಎಂ|- ಒಡಿಶಾಗಿಂತ ಪಶ್ಚಿಮ ಬಂಗಾಳದಲ್ಲೇ ಅಧಿಕ ಸಾವು ನೋವು, ಹಾನಿ

ಕೋಲ್ಕತಾ(ಮೇ.22): ‘ಅಂಫಾನ್‌’ನಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭಾರೀ ಸಾವು ನೋವು ಮತ್ತು ಆಸ್ತಿಪಾಸ್ತಿಗೆ ಹಾನಿ ದಾಖಲಾಗುವ ಮೂಲಕ, ಚಂಡಮಾರುತ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ವೈಫಲ್ಯ ಅನುಭವಿಸಿದ್ದಾರೆ. ಆದರೆ ನೆರೆಯ ಒಡಿಶಾದಲ್ಲಿ ತೀರಾ ಕಡಿಮೆ ಹಾನಿಯಾಗಿದ್ದು, ಚಂಡಮಾರುತ ನಿರ್ವಹಿಸುವಲ್ಲಿ ತಾವು ನಿಷ್ಣಾತ ಎಂಬುದನ್ನು ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಮತ್ತೊಮ್ಮೆ ನಿರೂಪಿಸಿದ್ದಾರೆ.

1999ರಲ್ಲಿ ಸೂಪರ್‌ ಸೈಕ್ಲೋನ್‌ ಅಪ್ಪಳಿಸಿದ್ದರಿಂದ ಒಡಿಶಾದಲ್ಲಿ 10 ಸಾವಿರ ಮಂದಿ ಬಲಿಯಾಗಿದ್ದರು. ಆಗ ಎಚ್ಚೆತ್ತ ನವೀನ್‌ ಪಟ್ನಾಯಕ್‌, ಪದೇಪದೇ ಬರುವ ಚಂಡಮಾರುತಗಳ ನಿರ್ವಹಣೆಗೆ ದೂರದೃಷ್ಟಿಯ ಯೋಜನೆಗಳನ್ನು ಹಾಕಿಕೊಂಡರು. ಅದರ ಫಲವಾಗಿ ಒಡಿಶಾದಲ್ಲಿ 800 ಚಂಡಮಾರುತ ಆಶ್ರಯ ಕೇಂದ್ರಗಳನ್ನು ಕರಾವಳಿಯುದ್ದಕ್ಕೂ ನಿರ್ಮಿಸಲಾಗಿದೆ. ಗಂಟೆಗೆ 300 ಕಿ.ಮೀ. ವೇಗದ ಬಿರುಗಾಳಿ ಬಂದರೂ ತಡೆದುಕೊಳ್ಳುವ ಕೇಂದ್ರಗಳಿವು. ಚಂಡಮಾರುತದ ಸೂಚನೆ ಲಭಿಸುತ್ತಿದ್ದಂತೆ ಜನರನ್ನು ಈ ಕೇಂದ್ರಗಳಿಗೆ ಸ್ಥಳಾಂತರಿಸಿ ಆಹಾರ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದಾಗಿ ಸಾವಿನ ಪ್ರಮಾಣ ಕಡಿಮೆಯಾಗುತ್ತದೆ.

ಬೊಬ್ಬಿರಿದ ಅಂಫನ್: ಪಶ್ಚಿಮ ಬಂಗಾಳದಲ್ಲಿ 100 ವರ್ಷಗಳಲ್ಲೇ ಭೀಕರ ಚಂಡಮಾರುತ!

ಚಂಡಮಾರುತ ಸೂಚನೆಯನ್ನು ಜನರ ಮೊಬೈಲ್‌ಗೆ ಅವರಿಗೆ ಸುಲಭವಾಗಿ ಅರ್ಥವಾಗುವ ಭಾಷೆಯಲ್ಲಿ ರವಾನಿಸಲಾಗುತ್ತದೆ. ಮನೆಮನೆ ಪ್ರಚಾರ ನಡೆಸಲಾಗುತ್ತದೆ. ಹವಾಮಾನ ಇಲಾಖೆಯ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿ, ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವ ಪ್ರದೇಶದಲ್ಲಿ ಎಚ್ಚರಿಕೆ ವಹಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ಚಂಡಮಾರುತ ಬಂದಾಗಲೂ ಒಡಿಶಾ ಅತ್ಯಂತ ಚಾಕಚಕ್ಯತೆಯಿಂದ ನಿರ್ವಹಿಸಿ ವಿಶ್ವದ ಮೆಚ್ಚುಗೆಗೆ ಪಾತ್ರವಾಗಿದೆ.

ಆದರೆ ಒಡಿಶಾ ಪಕ್ಕದಲ್ಲೇ ಇದ್ದರೂ ಮಮತಾ ಬ್ಯಾನರ್ಜಿ ಈ ಯಾವ ಕ್ರಮಗಳನ್ನೂ ಕೈಗೊಳ್ಳದ ಕಾರಣ ಈಗ ಬೆಲೆ ತೆರುವಂತಾಗಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ