Anant Ambani: ತಿರುಪತಿಗೆ ತೆರಳಿ ಅಂಬಾನಿ ಪುತ್ರ ಮುಡಿ ಕೊಟ್ಟಿದ್ದು ಯಾಕೆ? ಇಲ್ಲಿದೆ ಕಾರಣ!

Published : Jun 28, 2026, 04:14 PM IST
Anant Ambani

ಸಾರಾಂಶ

Anant Ambani News: ಅನಂತ್ ಅಂಬಾನಿ ಅವರು ಭಾನುವಾರ ತಿರುಪತಿಯ ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಸಾಂಪ್ರದಾಯಿಕವಾಗಿ ಮುಡಿ ಕೊಟ್ಟು ಹರಕೆ ತೀರಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಅವರು ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಪೂಜೆ ಸಲ್ಲಿಸಿ, ಮುಡಿ ನೀಡಿ ಹರಕೆ ತೀರಿಸಿದ್ದಾರೆ. ದೇವಸ್ಥಾನದ ಆನೆಗಳಿಗೆ ಆಹಾರವನ್ನೂ ನೀಡಿದ್ದಾರೆ. ಇತ್ತೀಚೆಗೆ ತಮ್ಮ ಕುಟುಂಬದೊಂದಿಗೂ ಅವರು ಇಲ್ಲಿಗೆ ಬಂದಿದ್ದರು.

ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಅವರು ಭಾನುವಾರ ತಿರುಪತಿಯ ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಸಾಂಪ್ರದಾಯಿಕವಾಗಿ ಮುಡಿ ಕೊಟ್ಟು ಹರಕೆ ತೀರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಅನಂತ್, ಲಕ್ಷಾಂತರ ಭಕ್ತರು ಪಾಲಿಸುವ ಈ ಸಂಪ್ರದಾಯದಂತೆ ತಲೆಗೂದಲು ಅರ್ಪಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಮುಗಿದ ನಂತರ ದೇವಸ್ಥಾನದ ಆನೆಗಳಿಗೆ ಆಹಾರವನ್ನೂ ನೀಡಿದ್ದು ವಿಶೇಷವಾಗಿತ್ತು.

ಅಂಬಾನಿ ಕುಟುಂಬದ ವಾರ್ಷಿಕ ಯಾತ್ರೆ

ಅಂಬಾನಿ ಕುಟುಂಬಕ್ಕೆ ತಿಮ್ಮಪ್ಪನ ಮೇಲೆ ಅಪಾರ ಭಕ್ತಿ. ಅವರು ಪ್ರತಿ ವರ್ಷ ತಪ್ಪದೇ ತಿರುಮಲಕ್ಕೆ ಭೇಟಿ ನೀಡುತ್ತಾರೆ. ಇದಕ್ಕೂ ಮುನ್ನ, ಜೂನ್ 12 ರಂದು ಕೂಡ ಅನಂತ್ ಅಂಬಾನಿ ತಮ್ಮ ತಂದೆ, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಅಧ್ಯಕ್ಷ ಮುಕೇಶ್ ಅಂಬಾನಿ ಜೊತೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದರು. ಆ ಸಂದರ್ಭದಲ್ಲಿ ಅನಂತ್ ಅವರ ಪತ್ನಿ ರಾಧಿಕಾ ಮರ್ಚೆಂಟ್ ಕೂಡ ಜೊತೆಗಿದ್ದರು. ಇಡೀ ಕುಟುಂಬ ಒಟ್ಟಾಗಿ ದೇವರಿಗೆ ಪೂಜೆ ಸಲ್ಲಿಸಿತ್ತು.

ತಿರುಮಲ ವೆಂಕಟೇಶ್ವರ ದೇವಸ್ಥಾನದ ಬಗ್ಗೆ

ಶೇಷಾಚಲಂ ಬೆಟ್ಟಗಳ ಏಳನೇ ಶಿಖರದ ಮೇಲೆ ಈ ತಿರುಮಲ ವೆಂಕಟೇಶ್ವರ ದೇವಸ್ಥಾನವಿದೆ. ಇದು ಭಾರತದ ಅತ್ಯಂತ ಪವಿತ್ರ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ವೆಂಕಟೇಶ್ವರ ಅಥವಾ ಬಾಲಾಜಿ ಅಂತಾನೂ ಕರೆಯಲಾಗುವ ಈ ದೇವರಿಗೆ ಈ ದೇಗುಲ ಸಮರ್ಪಿತವಾಗಿದೆ. ಶತಮಾನಗಳ ಇತಿಹಾಸವಿರುವ ಈ ದೇವಸ್ಥಾನಕ್ಕೆ ಪ್ರತಿ ವರ್ಷ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಅನೇಕ ಗಣ್ಯರು, ರಾಜಕಾರಣಿಗಳು ಮತ್ತು ಕ್ರೀಡಾಪಟುಗಳು ಕೂಡ ಇಲ್ಲಿಗೆ ಬಂದು ದೇವರ ಆಶೀರ್ವಾದ ಪಡೆಯುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Most Used Car In India: ದೇಶದಲ್ಲಿ ಅತಿ ಹೆಚ್ಚು ಜನ ಖರೀದಿಸೋ ಸೆಕೆಂಡ್ ಹ್ಯಾಂಡ್ ಕಾರು ಯಾವುದು ಗೊತ್ತಾ?
ಲೋಹಗಡ ಕೋಟೆಯಲ್ಲಿ ಉದ್ಯಮಿ ಕೇತನ್ ಕೊಂದ ಸಿಯಾ ಗೋಯಲ್ ಪ್ರಕರಣ, ಮಿತ್ತಲ್ ಕುಟುಂಬ ಶಾಮೀಲು ಶಂಕೆ, ತೀವ್ರ ವಿಚಾರಣೆ