ಲಸಿಕೆ ಪಡೆದ ಬಳಿಕ ಮೃತ ಮಹಿಳೆಗೆ 50 ಲಕ್ಷ ಪರಿಹಾರ

Kannadaprabha News   | Asianet News
Published : Feb 12, 2021, 09:19 AM IST
ಲಸಿಕೆ ಪಡೆದ ಬಳಿಕ ಮೃತ ಮಹಿಳೆಗೆ 50 ಲಕ್ಷ ಪರಿಹಾರ

ಸಾರಾಂಶ

ಕೊರೋನಾ ಲಸಿಕೆ ಪಡೆದು ಬಳಿಕ ಮೃತಪಟ್ಟ ಮುಂಚೂಣಿ ಕಾರ್ಯಕರ್ತೆ ಕುಟಂಬಕ್ಕೆ   ಸರ್ಕಾರ 50 ಲಕ್ಷ ರು. ಪರಿಹಾರ ಘೋಷಿಸಿದೆ. ಇವರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದಿದ್ದರು.

ಹೈದರಾಬಾದ್‌ (ಫೆ.12): ಕೊರೋನಾ ಲಸಿಕೆ ಪಡೆದು ಬಳಿಕ ಮೃತಪಟ್ಟಮುಂಚೂಣಿ ಕಾರ್ಯಕರ್ತೆ ಕುಟಂಬಕ್ಕೆ ಆಂಧ್ರಪ್ರದೇಶ ಸರ್ಕಾರ 50 ಲಕ್ಷ ರು. ಪರಿಹಾರ ಘೋಷಿಸಿದೆ. ಇಲ್ಲಿನ ಶ್ರೀಕಾಕುಲಂ ಜಿಲ್ಲೆಯ ಪಾಲಸ ಮಂಡಲದ ಪಿಲ್ಲಾ ಲಲಿತಾ (28) ಎಂಬ ಮಹಿಳೆ ಭಾನುವಾರ ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದಿದ್ದರು. ಬಳಿಕ ಲಲತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಆಕೆ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಸಂತ್ರಸ್ತೆಯ ಕುಟಂಬಕ್ಕೆ ಮುಖ್ಯಮಂತ್ರಿಗಳ ವಿಪತ್ತು ನಿಧಿಯಿಂದ 50 ಲಕ್ಷ ರು. ಪರಿಹಾರ ನೀಡುವುದಾಗಿ ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ಸರ್ಕಾರ ಘೋಷಿಸಿದೆ. ಲಲಿತಾ ಅವರಿಗೆ 8 ವರ್ಷ ಮಗನಿದ್ದಾನೆ.

ದೇಶಾದ್ಯಂತ ನಾಳೆಯಿಂದ 2ನೇ ಡೋಸ್‌ ಲಸಿಕೆ
 
 ಮಹಾಮಾರಿ ಕೊರೋನಾ ವೈರಸ್‌ನಿಂದ ರಕ್ಷಣೆ ಪಡೆಯಲು ಕೊರೋನಾ ಲಸಿಕೆಯ ಮೊದಲ ಡೋಸ್‌ ಪಡೆದವರಿಗೆ ಫೆ.13ರಿಂದ ದೇಶಾದ್ಯಂತ ಲಸಿಕೆಯ 2ನೇ ಡೋಸ್‌ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ದೇಶಾದ್ಯಂತ ಲಸಿಕೆ ಅಭಿಯಾನ ಆರಂಭವಾಗಿದ್ದ ಜನವರಿ 16ರ ಮೊದಲ ದಿನವೇ 1.91 ಲಕ್ಷ ಮಂದಿ ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಆ ಎಲ್ಲರಿಗೂ ನಾಳೆಯಿಂದಲೇ 2ನೇ ಡೋಸ್‌ ಲಸಿಕೆಯನ್ನು ವಿತರಿಸಲಾಗುತ್ತದೆ. ಇದಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ: ಫೆ.10ರ ಅಂಕಿ-ಸಂಖ್ಯೆ ತಿಳಿದುಕೊಳ್ಳಿ ..

ಮೊದಲ ಹಂತದಲ್ಲಿ ಲಸಿಕೆ ಪಡೆದವರು 28 ದಿನಗಳ ಬಳಿಕ ತಾವು ಮೊದಲ ಡೋಸ್‌ ಪಡೆದ ಕೇಂದ್ರಗಳಲ್ಲೇ 2ನೇ ಡೋಸ್‌ ಪಡೆಯುವಂತೆ ಆರೋಗ್ಯ ಇಲಾಖೆಯ ಆಯುಕ್ತ ಸೂಚಿಸಿದ್ದಾರೆ. ಜೊತೆಗೆ ಮೊದಲ ಡೋಸ್‌ ಪಡೆಯದ ಆರೋಗ್ಯ ಸಿಬ್ಬಂದಿ ಫೆ.25ರ ಮೊದಲು ಲಸಿಕೆ ಪಡೆಯುವಂತೆ ಅವರು ಇದೇ ವೇಳೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು
ದೇವಸ್ಥಾನದ ಕಾರ್ತಿಕ ದೀಪದ ಪರವಾಗಿ ತೀರ್ಪು ನೀಡಿದ ಜಡ್ಜ್‌, ಸೇಡು ತೀರಿಸಿಕೊಳ್ಳಲು ಮುಂದಾದ ತಮಿಳುನಾಡು ಸರ್ಕಾರ!