
ಶ್ರೀಕಾಕುಲಂ(ಏ.21): ಆಂಧ್ರಪ್ರದೇಶದಲ್ಲಿ ಲೋಕಸಮರದ ಜೊತೆ ಜೊತೆಗೆ ಅಸೆಂಬ್ಲಿ ಎಲೆಕ್ಷನ್ ಕಾವು ಕೂಡ ಜೋರಾಗಿದೆ. ಇಲ್ಲಿ ವಿಧಾನಸಭೆ ಚುನಾವಣೆಯ ಜಿದ್ದಾಜಿದ್ದಿನ ಸ್ಪರ್ಧೆ ವೈಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿರುವ ಪತಿ, ಪತ್ನಿಯ ದಾಂಪತ್ಯ ಕಲಹಕ್ಕೆ ಸಾಕ್ಷಿಯಾಗಿದೆ. ತಮ್ಮ ಬದಲಿಗೆ ಪತಿಗೆ ಟಿಕೆಟ್ ನೀಡಿದ್ದಕ್ಕೆ ಸಿಡಿದೆದ್ದಿರುವ ಪತ್ನಿ ಬಂಡಾಯವಾಗಿ ಸ್ಪರ್ಧಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ತೆಕ್ಕಲಿ ಕ್ಷೇತ್ರದಲ್ಲಿ ಪಕ್ಷದ ನಾಯಕ ಶ್ರೀನಿವಾಸ್ಗೆ ವಿಧಾನಸಭಾ ಟಿಕೆಟ್ ನೀಡುವುದಾಗಿ ಕಳೆದ ವರ್ಷವೇ ವೈಎಎಸ್ಆರ್ ಕಾಂಗ್ರೆಸ್ ನಾಯಕರು ಘೋಷಿಸಿದ್ದರು. ಆದರೆ ತಮ್ಮ ಪತಿ ಕೆಲವೊಂದು ನಿಲುವುಗಳನ್ನು ಅವರ ಪತ್ನಿ ವಾಣಿ ಪ್ರಶ್ನಿಸಿದ ಬಳಿಕ ವಾಣಿ ಅವರನ್ನು ಕ್ಷೇತ್ರದ ಉಸ್ತುವಾರಿಯಾಗಿ ನೇಮಿಸಲಾಗಿತ್ತು. ಹೀಗಾಗಿ ವಾಣಿ ತಮಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು.
IAS ಆಗೋ ಕನಸು ನನಸು, ಸೆರೆಬ್ರಲ್ ಪಾಲ್ಸಿಗೆ ತುತ್ತಾದ ಸಾರಿಕಾ ಯುಪಿಎಸ್ಸಿ ಪಾಸು
ಆದರೆ ಇತ್ತೀಚೆಗೆ ಪಕ್ಷ ಶ್ರೀನಿವಾಸ್ಗೆ ಟಿಕೆಟ್ ಪ್ರಕಟಿಸಿದೆ. ಅದರ ಬೆನ್ನಲ್ಲೇ ವಾಣಿ ಸಿಟ್ಟಿಗೆದ್ದು ಒಂದು ವೇಳೆ ಪಕ್ಷ ತನ್ನ ನಿರ್ಧಾರವನ್ನು ಬದಲಿಸದಿದ್ದರೆ, ಏ.22 ರಂದು ನಾಮಪತ್ರ ಸಲ್ಲಿಕೆ ಮಾಡಿ, ಪತಿ ಶ್ರೀನಿವಾಸ್ ವಿರುದ್ಧ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಹೀಗೆ ವಿಧಾನಸಭಾ ಚುನಾವಣೆ 30 ವರ್ಷಗಳಿಂದ ಖುಷಿ ಖುಷಿಯಿಂದ ದಾಂಪತ್ಯ ಜೀವನ ನಡೆಸುತ್ತಿದ್ದ ದಂಪತಿಗಳ ನಡುವೆ ಕಲಹ ತಂದಿಟ್ಟಿದೆ. ಶ್ರೀನಿವಾಸ್ಗೆ ಟಿಕೆಟ್ ಘೋಷಣೆಯಾಗುತ್ತಲೇ, ಮನೆ ತೊರೆದಿರುವ ವಾಣಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ