
ಹೈದರಾಬಾದ್(ಮಾ.13): ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ 2021ರ ಆ.15ಕ್ಕೆ 75 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿರುವ ಬೆನ್ನಲ್ಲೇ, ದೇಶದ ತ್ರಿವರ್ಣ ಧ್ವಜ ರೂಪಿಸಿದ ಕೀರ್ತಿಯ ಪಿಂಗಾಳಿ ವೆಂಕಯ್ಯ ಅವರ ಪುತ್ರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರು ಸನ್ಮಾನ ಮಾಡಿದ್ದಾರೆ.
ಶುಕ್ರವಾರ ಗುಂಟೂರು ಜಿಲ್ಲೆಯ ಮಚೆರ್ಲಾ ಗ್ರಾಮಕ್ಕೆ ಆಗಮಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ ಅವರು, ಪಿಂಗಾಳಿ ವೆಂಕಯ್ಯ ಅವರ ಪುತ್ರಿಯಾದ 99 ವರ್ಷದ ಹಿರಿಯ ನಾಯಕಿ ಘಂಟಸಾಲ ಸೀತಾಮಹಾಲಕ್ಷ್ಮೇ ಅವರಿಗೆ ಸ್ಮರಣಿಕೆಯೊಂದನ್ನು ನೀಡಿ ಸನ್ಮಾನ ನೆರವೇರಿಸಿದರು.
ಮುಖ್ಯಮಂತ್ರಿ ಜಗನ್ ಅವರ ಈ ವೈಖರಿಯು ನಾನು ಮನಸೋತಿದ್ದೇನೆ ಎಂದು ಸೀತಾಮಹಾಲಕ್ಷ್ಮೇ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ