ಆಂಧ್ರ ವಕ್ಫ್‌ ಆಡಳಿತ ಮಂಡಳಿ ವಿಸರ್ಜನೆ: ಟಿಡಿಪಿ ಸರ್ಕಾರ ಹಾಕಲಿದೆ ಹೊಸ ಬೋರ್ಡ್‌

Published : Dec 02, 2024, 08:41 AM IST
ಆಂಧ್ರ ವಕ್ಫ್‌ ಆಡಳಿತ ಮಂಡಳಿ ವಿಸರ್ಜನೆ: ಟಿಡಿಪಿ ಸರ್ಕಾರ ಹಾಕಲಿದೆ ಹೊಸ ಬೋರ್ಡ್‌

ಸಾರಾಂಶ

ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಟಿಡಿಪಿ ಸರ್ಕಾರ ರದ್ದುಗೊಳಿಸಿದೆ. ಆಡಳಿತ ಮತ್ತು ವಕ್ಫ್ ಆಸ್ತಿಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ. ಹೊಸ ಬೋರ್ಡ್ ಶೀಘ್ರದಲ್ಲೇ ರಚನೆಯಾಗಲಿದೆ.

ಅಮರಾವತಿ: ಈ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಚನೆಯಾದ ಆಂಧ್ರ ವಕ್ಫ್‌ ಬೋರ್ಡ್‌ ಅನ್ನು ಬಿಜೆಪಿ ಮೈತ್ರಿಕೂಟದ ಭಾಗವಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಇದೀಗ ರದ್ದು ಮಾಡಿದೆ. ಶೀಘ್ರದಲ್ಲೇ ಹೊಸ ವಕ್ಫ್‌ ಬೋರ್ಡ್‌ ರಚಿಸುವುದಾಗಿ ಘೋಷಿಸಿದೆ.

ಉತ್ತಮ ಆಡಳಿತ, ವಕ್ಫ್‌ ಆಸ್ತಿಗಳ ರಕ್ಷಣೆ, ವಕ್ಫ್‌ ಮಂಡಳಿಯ ಸುಗಮ ಕಾರ್ಯಾಚರಣೆಗೆ ಪೂರಕವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಹಳೆಯ ವಕ್ಫ್‌ ಮಂಡಳಿಯಲ್ಲಿ ಸುನ್ನಿ ಮತ್ತು ಶಿಯಾ ಸಮುದಾಯದ ವಿದ್ವಾಂಸರಿಗೆ ಯಾವುದೇ ಪ್ರಾತಿನಿಧ್ಯ ಇರಲಿಲ್ಲ. ಮಾಜಿ ಸಂಸದರಿಗೂ ಕೂಡ ಸ್ಥಾನವಿರಲಿಲ್ಲ. ಜತೆಗೆ, ಬಾರ್‌ ಕೌನ್ಸಿಲ್‌ ಕೆಟಗಿರಿಯಿಂದ ಕಿರಿಯ ವಕೀಲರನ್ನು ಮಂಡಳಿಗೆ ನೇಮಿಸಿ ಹಿರಿಯ ವಕೀಲರ ಜತೆಗೆ ಹಿತಾಸಕ್ತಿಯ ಸಂಘರ್ಷಕ್ಕೆ ಹಾದಿ ಮಾಡಿಕೊಡಲಾಗಿತ್ತು. ವಕ್ಫ್‌ ಸದಸ್ಯರಾಗಿ ಎಸ್‌.ಕೆ.ಖಾಜಾ ಅವರ ಆಯ್ಕೆ ಕುರಿತೂ ಸಾಕಷ್ಟು ದೂರುಗಳಿದ್ದವು. ಹಲವು ಕೋರ್ಟ್‌ ಕೇಸ್‌ಗಳಿಂದಾಗಿ ವಕ್ಫ್‌ ಅಧ್ಯಕ್ಷರ ಕೂಡ ನೇಮಕವಾಗಿರಲಿಲ್ಲ. ಹೀಗಾಗಿ ಸುಮಾರು ಒಂದೂವರೆ ವರ್ಷದಿಂದ ವಕ್ಫ್‌ ಮಂಡಳಿ ಇದ್ದೂ ಇಲ್ಲದಂತಿದ್ದ ಕಾರಣ ಸರ್ಕಾರ ವಕ್ಫ್‌ ಮಂಡಳಿಯನ್ನೇ ರದ್ದು ಮಾಡಿದೆ ಎಂದು ಸರ್ಕಾರ ತಿಳಿಸಿದೆ.

ಆದರೆ, ಸರ್ಕಾರದ ಈ ನಿರ್ಧಾರ ಆಕ್ಷೇಪಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ವಕ್ಫ್‌ ಕಾಯ್ದೆ ತಿದ್ದುಪಡಿಗೆ ಪೂರಕವಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಸಂಭಲ್‌ ಮಸೀದಿ ನಿಯಂತ್ರಣಕ್ಕೆ ಮನವಿ ಸಲ್ಲಿಸಿದ ASI; ಭಾರತದ ಮುಸ್ಲಿಮರ ಸ್ಥಿತಿ ಬಾಂಗ್ಲಾ ಹಿಂದೂಗಳ ರೀತಿ ಎಂದ ಮುಫ್ತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್