ಹೂಡಿಕೆ ಬಗ್ಗೆ ಈಗ ಆಂಧ್ರ ವರ್ಸಸ್‌ ತಮಿಳ್ನಾಡು

Kannadaprabha News   | Kannada Prabha
Published : Oct 22, 2025, 03:27 AM IST
Nara Lokesh

ಸಾರಾಂಶ

ಗೂಗಲ್‌ನ 1.3 ಲಕ್ಷ ಕೋಟಿ ರು. ಮೌಲ್ಯದ ಡೇಟಾ ಹಾಗೂ ಎಐ ಹಬ್‌ ಆಂಧ್ರಪ್ರದೇಶದ ಪಾಲಾಗಿದೆ. ಈ ಬಗ್ಗೆ ಮಾತನಾಡಿದ ಪಳನಿಸ್ವಾಮಿ ಹಾಗೂ ಉದಯಕುಮಾರ್, ‘ಗೂಗಲ್‌ನ ಸಿಇಒ ಸುಂದರ್‌ ಪಿಚೈ ಅವರು ತಮಿಳುನಾಡಿನ ಮದುರೈನರಾದರೂ ಹೂಡಿಕೆಗೆ ಆಂಧ್ರವನ್ನು ಆರಿಸಿಕೊಂಡರು ಎಂದಿದ್ದಾರೆ.

ಅಮರಾವತಿ : ಹೂಡಿಕೆ ವಿಚಾರದಲ್ಲಿ ಈಗ ಕರ್ನಾಟಕದ ಬಳಿಕ ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ನಡುವೆ ವಾಕ್ಸಮರ ಆರಂಭವಾಗಿದೆ.

ಗೂಗಲ್‌ನ 1.3 ಲಕ್ಷ ಕೋಟಿ ರು. ಮೌಲ್ಯದ ಡೇಟಾ ಹಾಗೂ ಎಐ ಹಬ್‌ ಆಂಧ್ರಪ್ರದೇಶದ ಪಾಲಾಗಿದೆ. ಈ ಬಗ್ಗೆ ಮಾತನಾಡಿದ ಅಣ್ಣಾಡಿಎಂಕೆ ನೇತಾರರಾದ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಉದಯಕುಮಾರ್, ‘ಗೂಗಲ್‌ನ ಸಿಇಒ ಸುಂದರ್‌ ಪಿಚೈ ಅವರು ತಮಿಳುನಾಡಿನ ಮದುರೈನರಾದರೂ ಹೂಡಿಕೆಗೆ ಆಂಧ್ರವನ್ನು ಆರಿಸಿಕೊಂಡರು. ಅವರನ್ನು ಆಕರ್ಷಿಸಲು ಸಿಎಂ ಸ್ಟಾಲಿನ್‌ ವಿಫಲರಾದರು. ಇದು ಡಿಎಂಕೆ ಸರ್ಕಾರದ ವೈಫಲ್ಯ’ ಎಂದಿದ್ದಾರೆ.

ಇದಕ್ಕೆ, ಗೂಗಲ್‌ ಅನ್ನು ಆಂಧ್ರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆಂಧ್ರ ಸಚಿವ ನಾರಾ ಲೋಕೇಶ್‌ ಮಾರ್ಮಿಕವಾಗಿ ಪ್ರತಿಕ್ರಿಯಿಸಿ, ‘ಅವರು (ಪಿಚೈ) ಭಾರತವನ್ನು ಆರಿಸಿಕೊಂಡರು’ ಎಂದು ತಿರುಗೇಟು ನೀಡಿದ್ದಾರೆ.

ಈ ಮುನ್ನ ನಾರಾ ಹಾಗೂ ಕರ್ನಾಟಕ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ನಡುವೆ ಇದೇ ವಿಷಯಕ್ಕೆ ಸಂಬಂಧಿಸಿ ವಾಕ್ಸಮರ ನಡೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?