
ನವದೆಹಲಿ (ನ. 05): ಜಮ್ಮು-ಕಾಶ್ಮೀರ ಹಾಗೂ ಲಡಾಖನ್ನು ಪ್ರತ್ಯೇಕಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ಮಾಡಿದ ನಂತರ ಭಾರತ ಸರ್ಕಾರ ದೇಶದ ಹೊಸ ನಕ್ಷೆಯನ್ನು ಭಾನುವಾರ ಬಿಡುಗಡೆ ಮಾಡಿತ್ತು. ಆದರೆ ಅದು ಈಗ ವಿವಾದಕ್ಕೆ ಕಾರಣವಾಗಿದೆ.
ಕೇಂದ್ರ ಸರ್ಕಾರಿ ನೌಕರಿ ಕನ್ನಡಿಗರಿಗೆ ಮರೀಚಿಕೆ
ಏಕೆಂದರೆ ವಿಭಜಿತ ಆಂಧ್ರಪ್ರದೇಶದ ರಾಜಧಾನಿ ‘ಅಮರಾವತಿ’ಯನ್ನು ನಕ್ಷೆಯಲ್ಲಿ ಉಲ್ಲೇಖಿಸಿಯೇ ಇಲ್ಲ. ಇದು ಆಂಧ್ರಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಬೇರೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮತ್ತು ಅವುಗಳ ರಾಜಧಾನಿಯನ್ನು ನಕ್ಷೆಯಲ್ಲಿ ನಮೂದಿಸಲಾಗಿದೆ.
ಆದರೆ ಅಮರಾವತಿ ಹೆಸರು ಇಲ್ಲ. 2014ರಲ್ಲಿ ಆಂಧ್ರಪ್ರದೇಶ ವಿಭಜನೆಗೊಂಡು ತೆಲಂಗಾಣ ರಾಜ್ಯ ಉದಯಿಸಿತು. ಆಂಧ್ರಪ್ರದೇಶ ಆಗ ರಾಜಧಾನಿ ಹೈದರಾಬಾದನ್ನು ಕಳೆದುಕೊಂಡಿತು. ಅಮರಾವತಿಯನ್ನು ಆಂಧ್ರಪ್ರದೇಶ ರಾಜಧಾನಿ ಎಂದು ಘೋಷಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ