ರಾಮಲಲ್ಲಾನ ಭೇಟಿ ಮಾಡಿದ ಆಂಜನೇಯ: ಅಯೋಧ್ಯೆಗೆ ಬಂದ ಜರ್ಮನ್ ಬಾಲಕನ ವೀಡಿಯೋ ಭಾರಿ ವೈರಲ್

Published : Mar 22, 2026, 12:10 PM IST
foreign boy visits Ayodhya Ram Temple

ಸಾರಾಂಶ

German boy in Ayodhya Ram Mandir: ಭಾರತೀಯರು ಮಾತ್ರವಲ್ಲದೇ ದೇಶ ವಿದೇಶಗಳಲ್ಲಿರುವ ಹಿಂದೂಗಳು ಕೂಡ ಅಯೋಧ್ಯೆಯ ಶ್ರೀರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಅದೇ ರೀತಿ ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆಂದು ಬಂದ ಪುಟ್ಟ ಬಾಲಕನೋರ್ವನ ವೀಡಿಯೋ ಸಖತ್ ವೈರಲ್ ಆಗಿದೆ.

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಜರ್ಮನ್ ಬಾಲಕ

ಅಯೋಧ್ಯೆ: ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣವಾದಾಗಿನಿಂದಲೂ ಲಕ್ಷಾಂತರ ಜನ ಭಕ್ತರು ಪ್ರತಿದಿನವೂ ಅಯೋಧ್ಯೆಗೆ ಭೇಟಿ ನೀಡುತ್ತಲೇ ಇದ್ದಾರೆ. ಭಾರತೀಯರು ಮಾತ್ರವಲ್ಲದೇ ದೇಶ ವಿದೇಶಗಳಲ್ಲಿರುವ ಹಿಂದೂಗಳು ಕೂಡ ಅಯೋಧ್ಯೆಯ ಶ್ರೀರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಅದೇ ರೀತಿ ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆಂದು ಬಂದ ಪುಟ್ಟ ಬಾಲಕನೋರ್ವನ ವೀಡಿಯೋ ಸಖತ್ ವೈರಲ್ ಆಗಿದೆ.

ಹೌದು ಜರ್ಮನಿ ಮೂಲದ ಬಾಲಕನೋರ್ವ ಅಯೋಧ್ಯೆಯ ಶ್ರೀರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನದ ಬಳಿಕ ಆ ಬಾಲಕ ಮಾತನಾಡಿದ ವೀಡಿಯೋ ಭಾರಿ ವೈರಲ್ ಆಗಿದೆ. ವೀಡಿಯೋದಲ್ಲಿ ಬಾಲಕ ಬಹಳ ಮುದ್ದಾಗಿ ಮಾತನಾಡಿದ್ದಾನೆ. ನಾನು ಜರ್ಮನಿಯಿಂದ ಬಂದಿದ್ದೇನೆ ನನ್ನ ಹೆಸರು ಆಂಜನೇಯ ಎಂದು ಆ ಬಾಲಕ ಹೇಳಿದ್ದಾನೆ.

ಇದನ್ನೂ ಓದಿ:  ಏರ್ ಇಂಡಿಯಾ ಎಡವಟ್ಟು: 7 ಗಂಟೆ ಜರ್ನಿ ಬಳಿಕ ವಾಪಸ್ ಬಂದ 300 ಪ್ರಯಾಣಿಕರಿದ್ದ ವಿಮಾನ

ಈ ದೇಗುಲಕ್ಕೆ ಬಂದ ನಂತರ ನಿಮಗೆ ಹೇಗನಿಸಿತು ಎಂದು ಆ ಬಾಲಕನ ಬಳಿ ಮಾಧ್ಯಮದವರು ಪ್ರಶ್ನೆ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಬಾಲಕ ಇದು ನಿಜವಾಗಿಯೂ ತುಂಬಾ ಚೆನ್ನಾಗಿದೆ. ಆದರೆ ವಿಚಾರ ಏನು ಅಂದ್ರೆ ಇಲ್ಲಿ ಸಿಕ್ಕಾಬಟ್ಟೆ ಬಿಸಿಲು ಸೆಖೆ ಇದೆ. ಭಾರತ ಹಾಗೆ ಇದೆ. ಆದ್ರೂ ಈ ಬಿಸಿಲಿನ ಸಮಯವನ್ನು ನನಗೆ ಮ್ಯಾನೇಜ್ ಮಾಡಬಹುದು. ದೇವಸ್ಥಾನ ಮಾತ್ರ ನಿಜವಾಗಿಯೂ ತುಂಬಾ ಚೆನ್ನಾಗಿದೆ. ಇದು ನಿಜವಾಗಿಯೂ ಒಂದು ಒಳ್ಳೆಯ ಅನುಭವ ಎಂದು ಬಾಲಕ ವಿವರಿಸಿದ್ದು, ಈ ವೀಡಿಯೋ ಈಗ ಭಾರಿ ವೈರಲ್ ಆಗಿದೆ.

ಇದನ್ನೂ ಓದಿ:  ಇರಾನ್ ಇಸ್ರೇಲ್ ಯುದ್ಧದಲ್ಲಿ ಭಾಗಿ ಹಿನ್ನೆಲೆ: ಅಮೆರಿಕಾಕ್ಕೆ ಶಸ್ತ್ರಾಸ್ತ್ರ ರಫ್ತಿಗೆ ಅನುಮೋದನೆ ನಿರಾಕರಿಸಿದ ಸ್ವಿಟ್ಜರ್ಲೆಂಡ್

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Urea Shortage: ಹಾರ್ಮುಜ್ ಬಂದ್ ಎಫೆಕ್ಟ್! ಭಾರತದ ಲಾರಿ, ಬಸ್‌ಗಳು ರಸ್ತೆಯಲ್ಲೇ ನಿಲ್ಲುವ ಆತಂಕ?
ಮದ್ವೆ ಫೋಟೋ ಶೇರ್ ಮಾಡಿದ್ದಕ್ಕೆ ಅವಮಾನ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಹಿಳಾ ನಾಯಕಿ