ರೈತರ ಬೆಂಬಲಿಸಿ ನಡೆಸಲು ಉದ್ದೇಶಿಸಿದ್ದ ಉಪವಾಸ ಸತ್ಯಗ್ರಹ ಕೈಬಿಟ್ಟ ಅಣ್ಣ ಹಜಾರೆ!

Published : Jan 29, 2021, 09:36 PM ISTUpdated : Jan 29, 2021, 09:40 PM IST
ರೈತರ ಬೆಂಬಲಿಸಿ ನಡೆಸಲು ಉದ್ದೇಶಿಸಿದ್ದ ಉಪವಾಸ ಸತ್ಯಗ್ರಹ ಕೈಬಿಟ್ಟ ಅಣ್ಣ ಹಜಾರೆ!

ಸಾರಾಂಶ

ಕೃಷಿ ಕಾಯ್ದೆ ವಿರೋಧಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದರು. ಆದರೆ ಮಹಾರಾಷ್ಟ್ರ ಮಾಜಿ ಸಿಎಂ ಅಣ್ಣಾ ಹಜಾರೆ ಭೇಟಿ ಮಾಡಿದ ಬೆನ್ನಲ್ಲೇ ಸತ್ಯಾಗ್ರಹ ಕೈಬಿಟ್ಟಿದ್ದಾರೆ.

ಮಹಾರಾಷ್ಟ್ರ(ಜ.29):  ರೈತರ ವಿವಿಧ ಬೇಡಿಕೆಗಳನ್ನು ಬೆಂಬಲಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಡೆಸಲು ಉದ್ದೇಶಿಸಿದ್ದ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ.  ಈ ಕುರಿತು ಅಣ್ಣಾ ಹಜಾರೆ ಕಚೇರಿ ಸ್ಪಷ್ಟಪಡಿಸಿದೆ ಎಂದು ANI ವರದಿ ಮಾಡಿದೆ

ರೈತರ ಬೇಡಿಕೆ ಈಡೇರದಿದ್ದರೆ ಜನ ಆಂದೋಲನ; ಕೇಂದ್ರಕ್ಕೆ ಅಣ್ಣಾ ಹಜಾರೆ ಎಚ್ಚರಿಕೆ!.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಲ ಅಣ್ಣಾ ಹಜಾರೆ ಜನವರಿ 30 ರಿಂದ ಅನಿರ್ದಿಷ್ಟಾವದಿ ಉಪವಾಸ ಸತ್ಯಗ್ರಹ ನಡೆಸಲು ನಿರ್ಧರಿಸಿದ್ದರು. ಅಣ್ಣ ಹದಾರೆ ತಮ್ಮ ನಿರ್ಧಾರ ಪ್ರಕಟಿಸಿದ ಬಳಿಕ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅಣ್ಣಾ ಹಜಾರೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

 

ಮಹಾರಾಷ್ಟ್ರದ ರಾಲೇಗಣ ಸಿದ್ದಿಗೆ ಭೇಟಿ ನೀಡಿದ ದೇವೇಂದ್ರ ಫಡ್ನವಿಸ್, ಅಣ್ಣ ಹಜಾರೆ ಜೊತೆ ಮಾತುಕತೆ ನಡೆಸಿದ್ದಾರೆ. ಸತ್ಯಾಗ್ರಹ ನಡೆಸದಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಸ್ಪಂದಿಸಿರುವ ಅಣ್ಣ ಹಜಾರೆ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?