ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ: ಕೇಜ್ರಿವಾಲ್‌ ಬಗ್ಗೆಅಣ್ಣಾ ಹಜಾರೆ ವ್ಯಂಗ್ಯ

Published : Mar 24, 2024, 09:05 AM IST
ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ: ಕೇಜ್ರಿವಾಲ್‌ ಬಗ್ಗೆಅಣ್ಣಾ ಹಜಾರೆ ವ್ಯಂಗ್ಯ

ಸಾರಾಂಶ

ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವೆಂಬ ಪಿಡುಗನ್ನು ತೊಲಗಿಸಬೇಕೆಂದು ಕೋರಿ ಲೋಕಪಾಲ್‌ ಮಸೂದೆ ಜಾರಿಗೆ ಆಗ್ರಹಿಸಿ ಹೋರಾಟದಲ್ಲಿ ಭಾಗಿಯಾಗಿದ್ದ ಅರವಿಂದ್‌ ಕೇಜ್ರಿವಾಲ್‌ ಅವರೇ ಲಂಚ ಪ್ರಕರಣದಲ್ಲಿ ಬಂಧಿತನಾಗಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದ್ದಾರೆ.   

ನವದೆಹಲಿ (ಮಾ.24): ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವೆಂಬ ಪಿಡುಗನ್ನು ತೊಲಗಿಸಬೇಕೆಂದು ಕೋರಿ ಲೋಕಪಾಲ್‌ ಮಸೂದೆ ಜಾರಿಗೆ ಆಗ್ರಹಿಸಿ ಹೋರಾಟದಲ್ಲಿ ಭಾಗಿಯಾಗಿದ್ದ ಅರವಿಂದ್‌ ಕೇಜ್ರಿವಾಲ್‌ ಅವರೇ ಲಂಚ ಪ್ರಕರಣದಲ್ಲಿ ಬಂಧಿತನಾಗಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಲೋಕಪಾಲ್‌ ಮಸೂದೆ ಜಾರಿಗೆ ಹೋರಾಟ ಮಾಡುವಾಗ ಕೇಜ್ರಿವಾಲ್‌ ರಾಜಕೀಯ ಪಕ್ಷವನ್ನು ಸ್ಥಾಪಿಸಿದಾಗ ನಮ್ಮ ಹೋರಾಟ ದಿಕ್ಕು ತಪ್ಪಿತು. ಬಳಿಕವೂ ನಾನು ಅವರಿಗೆ ಹಲವು ಬಾರಿ ಅಬಕಾರಿ ನೀತಿಯನ್ನು ಜಾರಿ ಮಾಡಬೇಡಿ ಎಂದು ವಿನಂತಿಸಿದ್ದೆ. ಈಗ ಅವರೇ ಲಮಚ ಪ್ರಕರಣದಲ್ಲಿ ಬಂಧನವಾಗಿರುವುದು ಹಾಸ್ಯಾಸ್ಪದವಾಗಿದೆ. ಈ ಹಗರಣದ ಸಂಪೂರ್ಣ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.

ಕೇಜ್ರಿಗೆ ಮದ್ಯ ನೀತಿ ಜಾರಿ ಮಾಡಬೇಡಿ ಎಂದಿದ್ದೆ: ಲೋಕಪಾಲ ಮಸೂದೆಗೆ ಜಾರಿ ಕೋರಿ ಅನಿರ್ದಿಷ್ಟ ಉಪವಾಸ ಮಾಡುವ ಮೂಲಕ ಅರವಿಂದ್‌ ಕೇಜ್ರಿವಾಲ್‌ ಅವರು ಮುನ್ನೆಲೆಗೆ ಬರಲು ಕಾರಣರಾಗಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು, ತಾವು ಕೇಜ್ರಿವಾಲ್‌ಗೆ ಮದ್ಯ ನೀತಿಯನ್ನು ಜಾರಿಗೆ ತರದಂತೆ ಹಲವು ಬಾರಿ ವಿನಂತಿಸಿದ್ದಾಗಿ ತಿಳಿಸಿದ್ದಾರೆ.

ತೈಮೂರ್‌, ಬಾಬರ್‌ ಯುಗದಲ್ಲಿ ಭಾರತದಲ್ಲಿ ಹಿಂದೂಗಳೇ ಇರಲಿಲ್ಲ: ಪ್ರಸೂನ್‌ ಬ್ಯಾನರ್ಜಿ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಕೇಜ್ರಿವಾಲ್‌ ಅವರ ಬಂಧನಕ್ಕೆ ಅವರು ಮಾಡಿದ ಕರ್ಮಗಳೇ ಕಾರಣವಾಗಿದೆ. ನಾನು ಅವರಿಗೆ ಹಲವು ಬಾರಿ ಮದ್ಯ ಕುರಿತಾದ ನೀತಿಯನ್ನು ಜಾರಿ ಮಾಡಬೇಡಿ ಎಂದು ಪರಿಪರಿಯಾಗಿ ವಿನಂತಿಸಿದ್ದೆ. ಆದರೆ ಅವರು ಹೆಚ್ಚು ಆದಾಯ ಬರಲಿದೆ ಎನ್ನುವ ಸಲುವಾಗಿ ನೀತಿಯನ್ನು ಜಾರಿ ಮಾಡಿದರು. ಒಂದು ಕಾಲದಲ್ಲಿ ಮದ್ಯಪಾನದ ಕುರಿತಾಗಿ ಹೋರಾಡಿದವರೇ ಇಂದು ಮದ್ಯ ನೀತಿಯ ಹಗರಣದಲ್ಲಿ ಬಂಧನವಾಗಿರುವುದನ್ನು ಕೇಳಿ ಬಹಳ ದುಃಖವಾಗಿದೆ’ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!