ಅಣ್ಣಾ ವಿವಿ ಲೈಂಗಿಕ ಕಿರುಕುಳ ಪ್ರಕರಣ: : ಡಿಎಂಕೆ ನಂಟಿನ ಆರೋಪಿಗೆ 30 ವರ್ಷ ಜೈಲು

Published : Jun 03, 2025, 10:30 AM ISTUpdated : Jun 03, 2025, 10:33 AM IST
Anna University Sexual Harassment

ಸಾರಾಂಶ

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಡಿಎಂಕೆ ನಂಟಿನ ಆರೋಪಿ ಜ್ಞಾನಶೇಖರನ್‌ಗೆ 30 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಅಣ್ಣಾ ವಿವಿ ಲೈಂಗಿಕ ಕಿರುಕುಳ : ಡಿಎಂಕೆ ನಂಟಿನ ಆರೋಪಿಗೆ 30 ವರ್ಷ ಜೈಲು

ಚೆನ್ನೈ: ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ, ಆಡಳಿತಾರೂಢ ಡಿಎಂಕೆಯೊಂದಿಗೆ ನಂಟು ಹೊಂದಿರುವ ಅಪರಾಧಿ ಜ್ಞಾನಶೇಖರನ್‌ಗೆ ಇಲ್ಲಿನ ಮಹಿಳಾ ನ್ಯಾಯಾಲಯ ಕ್ಷಮಾದಾನ ರಹಿತ ಕನಿಷ್ಠ 30 ವರ್ಷ ಸೆರೆವಾಸದ ಜೀವಾವಧಿ ಶಿಕ್ಷೆ ವಿಧಿಸಿದೆ.

ಜ್ಞಾನಶೇಖರನ್‌ ವಿರುದ್ಧ ದಾಖಲಾಗಿದ್ದ 11 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾ। ಎಂ. ರಾಜಲಕ್ಷ್ಮಿ, ಮೇ 28ರಂದು ಆತ ದೋಷಿಯೆಂದು ತೀರ್ಪು ಹೊರಡಿಸಿದ್ದರು ಹಾಗೂ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಇದೇ ವೇಳೆ, ‘ಮನೆಯಲ್ಲಿ ತಾನೊಬ್ಬನೇ ದುಡಿಯುವ ವ್ಯಕ್ತಿ ಎಂದು ಆರೋಪಿ ಶಿಕ್ಷೆ ಕಡಿತಕ್ಕೆ ಆಗ್ರಹಿಸಿದ್ದ. ಆದರೆ ಆತನಿಗೆ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ’ ಎಂದು ಅವರು ಹೇಳಿದರು.

ಏನಿದು ಪ್ರಕರಣ?:

ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಇದ್ದಾಗ ಆಕೆಯನ್ನು ಬೆದರಿಸಿದ್ದ ಜ್ಞಾನಶೇಖರನ್‌, ಲೈಂಗಿಕವಾಗಿ ಕಿರುಕುಳ ನೀಡಿದ್ದ. ಈ ಕುರಿತು ಅವಳು 2024ರ ಡಿ.23ರಂದು ಕೊಟ್ಟುಪುರಂನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಳು. ಆ ಎಫ್‌ಐಆರ್‌ ಸೋರಿಕೆಯಾಗಿ ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು.

ಬಳಿಕ ಆರೋಪಿಯನ್ನು ಬಂಧಿಸಲಾಯಿತು. ಮದ್ರಾಸ್‌ ಹೈಕೋರ್ಟ್‌ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿತು. ಬಳಿಕ ಅದನ್ನು ಮಹಿಳಾ ಕೋರ್ಟ್‌ಗೆ ಹಸ್ತಾಂತರಿಸಲಾಯಿತು. ಅಲ್ಲಿ, ಭಾರತೀಯ ನ್ಯಾಯ ಸಂಹಿತೆ, ಐಟಿ ಕಾಯ್ದೆ, ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.

ಅತ್ತ ಜ್ಞಾನಶೇಖರನ್‌ ಆಡಳಿತಾರೂಢ ಡಿಎಂಕೆ ಜತೆ ನಂಟು ಹೊಂದಿದ್ದಾನೆ ಎಂಬ ವಿಷಯ ರಾಜಕೀಯದಲ್ಲೂ ಸಂಚಲನ ಸೃಷ್ಟಿಸಿತ್ತು. ಆದರೆ ಜನವರಿಯಲ್ಲಿ ಡಿಎಂಕೆ ಮುಖ್ಯಸ್ಥರಾಗಿರುವ ಸಿಎಂ ಎಂ.ಕೆ. ಸ್ಟಾಲಿನ್ ಅವರು, ‘ಆತ ಪಕ್ಷದ ಸದಸ್ಯನಲ್ಲ. ಬೆಂಬಲಿಗನಷ್ಟೇ’ ಎಂದು ಸ್ಪಷ್ಟನೆ ನೀಡಿ, ಅಂತರ ಕಾಯ್ದುಕೊಳ್ಳಲು ಯತ್ನಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..