
ಹಾಜಿಪುರ: ಬಿಹಾರದಲ್ಲಿ ಸೇತುವೆ ಕುಸಿತದ ಸರಣಿ ಮುಂದುವರಿದಿದ್ದು, ವೈಶಾಲಿ ಜಿಲ್ಲೆಯ ರಾಘೋಪುರದಲ್ಲಿ ಶನಿವಾರ ಸಣ್ಣ ಸೇತುವೆಯೊಂದು ಕುಸಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘20 ವರ್ಷ ಹಳೆಯದಾಗಿದ್ದ ಈ ಸೇತುವೆ ನೀರಿನ ರಭಸದಿಂದ ಹಾನಿಗೊಳಗಾಗಿತ್ತು. ಆದ್ದರಿಂದ ಅದರ ಬಳಕೆಯನ್ನು 2021ರಲ್ಲೇ ನಿಲ್ಲಿಸಲಾಗಿತ್ತು’ ಎಂದು ಜಿಲ್ಲಾಧಿಕಾರ ಹೇಳಿಕೆ ಬಿಡುಗಡೆ ಮಾಡಿದೆ.
ಮೋದಿಯವರಿಗೆ ಸೀಟು ಕಡಿಮೆ ಬಂದಿದ್ದಕ್ಕೆ ಸಂಭ್ರಮಿಸಿದವರು; ಬಾಂಗ್ಲಾದೇಶದಿಂದ ಪಾಠ ಕಲಿಯಬೇಕು: ಉಮಾ ಭಾರತಿ
ಇತ್ತೀಚಿನ ದಿನಗಳಲ್ಲಿ ಬಿಹಾರದ ಹಲವು ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಸೇತುವೆಗಳು ಕುಸಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್, ಕಿಶನ್ಗಂಜ್ ಜಿಲ್ಲೆಗಳು ಮತ್ತು ಇತರ ಸ್ಥಳಗಳಲ್ಲಿ ಸಣ್ಣ ಸೇತುವೆಗಳು ಕುಸಿದ ಘಟನೆಗಳು ವರದಿಯಾಗಿವೆ. ಹೀಗಾಗಿ ರಾಜ್ಯದ ಎಲ್ಲಾ ಸೇತುವೆಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ರಿಪೇರಿ ಮಾಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಸೂಚಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ