ಉಗ್ರರ ದಾಳಿಯಲ್ಲಿ ಹತ್ಯೆಯಾದ ಬಿಹಾರ ಕಾರ್ಮಿಕರ ಕುಟುಂಬಕ್ಕೆ ತಲಾ 2 ಲಕ್ಷ ರೂ ಘೋಷಣೆ!

By Suvarna NewsFirst Published Oct 17, 2021, 9:31 PM IST
Highlights
  • ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ
  • ನಾಗರೀಕರನ್ನು ಗುರಿಯಾಸಿ ದಾಳಿ, ಇಬ್ಬರು ಹತ್ಯೆ
  • ಸಾವನ್ನಪಿದ ಕುಟುಂಬಕ್ಕೆ ತಲಾ 2 ಲಕ್ಷ ಘೋಷಿಸಿದ ಬಿಹಾರ ಸಿಎಂ

ನವದೆಹಲಿ(ಅ.17): ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರೀಕರನ್ನು ಗುರಿಯಾಗಿಸಿ ಉಗ್ರರ ದಾಳಿ ಮುಂದುವರಿದಿದೆ. ಕಳೆದ ಎರಡು ದಿನಗಳಲ್ಲಿ ಮೂರನೇ ದಾಳಿ ಇದಾಗಿದೆ. ಕಾಶ್ಮೀರದ ಕುಲ್ಗಾಮ್ ವಲಯದಲ್ಲಿ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಬಿಹಾರ ಕಾರ್ಮಿಕರು ಸಾವನ್ನಪ್ಪಿದ್ದಾರೆ.  ಸದ್ಯ ಗುಲ್ಕಾಮ್ ಏರಿಯಾವನ್ನು ಭಾರತೀಯ ಸೇನೆ ಸುತ್ತುವರಿದಿದ್ದು, ಶೋಧ ಕಾರ್ಯ ಮುಂದವರಿಸಿದ್ದಾರೆ.

Poonch encounter;ಉಗ್ರರ ದಾಳಿಗೆ ಸೇನಾಧಿಕಾರಿ ಸೇರಿ ಐವರು ಯೋಧರು ಹುತಾತ್ಮ!

ಕಾಶ್ಮೀರಕ್ಕೆ ತೆರಳಿ ಕಾರ್ಮಿಕರಾಗಿ ದುಡಿಯುತ್ತಿದ್ದ ಬಿಹಾರದ  ಮೂಲದ ಇಬ್ಬರು  ಕುಲ್ಗಾಮ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಉಗ್ರರು ಏಕಾಏಕಿ ಗುಂಡಿನ ಸುರಿಮಳೆಗೈದು ಇಬ್ಬರನ್ನು ಹತ್ಯೆಗೈದಿದ್ದಾರೆ. ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಬಿಹಾರದ ಕಾರ್ಮಿಕರನ್ನು ರಾಜಾ ರಾಜೇಶ್ ದೇವ್ ಹಾಗೂ ಜೋಗಿಂದರ್ ರೇಶಿ ದೇವ್ ಎಂದು ಗುರುತಿಸಲಾಗಿದೆ.

 

Terrorists fired indiscriminately upon non-local labourers at Wanpoh area of Kulgam. In this terror incident, 2 non-locals were killed and 1 injured. Police & Security Forces cordoned off the area. Details awaited: J&K Police pic.twitter.com/nLBU6PSzlm

— ANI (@ANI)

ಉಗ್ರರ ದಾಳಿಯನ್ನು ಕಾಶ್ಮೀರ ಮೇಯರ್ ಸೇರಿದಂತ ಹಲವರು ಖಂಡಿಸಿದ್ದಾರೆ. ಇತ್ತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜಾ ರಾಜೇಶ್ ದೇವ್ ಹಾಗೂ ಜೋಗಿಂದರ್ ರೇಶಿ ದೇವ್ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

Bihar CM Nitish Kumar announces Rs 2 Lakh each ex-gratia from CM's relief fund for kin of Raja Reshi Dev and Joginder Reshi Dev who were killed by terrorists in Kulgam, J&K this evening.

CM also spoke to J&K Lt Governor Manoj Sinha & expressed his concern over the killings

— ANI (@ANI)

ಉಗ್ರರ ಭೀತಿ: ಕಾಶ್ಮೀರದಿಂದ ಹಿಂದೂಗಳ ಸಾಮೂಹಿಕ ಗುಳೆ!

ಕಳೆದ ಎರಡು ದಿನದಲ್ಲಿ ನಡೆಯುತ್ತಿರುವ 3ನೇ ದಾಳಿ ಇದಾಗಿದೆ. ಶನಿವಾರ ಶ್ರೀನಗರ ಹಾಗೂ ಪುಲ್ವಾಮದಲ್ಲಿ ನಾಗರೀಕರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಕಳೆದ 15 ದಿನಗಳಲ್ಲಿ ನಾಗರೀಕರ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 11 ನಾಗರೀಕರು ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 7 ರಂದು ಉಗ್ರರು ಶಾಲೆಯ ಪ್ರಿನ್ಸಿಪಾಲ್ ಹಾಗೂ ಶಿಕ್ಷಕನನ್ನು ಹತ್ಯೆ ಮಾಡಿದ್ದರು. ಎರಡು ದಿನಗಳ ಹಿಂದೆ ಉಗ್ರರ ದಾಳಿಯಲ್ಲಿ ಫಾರ್ಮಸಿ ಮಾಲೀಕ ಎಂಎಲ್ ಬಿಂದ್ರೋ ಸಾವನ್ನಪ್ಪಿದ್ದರು. ಬೀದಿ ಬದಿ ವ್ಯಾಪರಿ, ಟ್ಯಾಕ್ಸಿ ಚಾಲಕ ಸೇರಿದಂತೆ ಹಲವರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

ಕುಲ್ಗಾಮ್ ಪ್ರದೇಶವನ್ನು ಸೇನೆ ಸುತ್ತುವರಿದಿದೆ. ಜಮ್ಮ ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗುತ್ತಿದೆ. ಗಡಿಯಲ್ಲಿ ಒಳನುಸುಳುವಿಕೆ ನಡೆಯುತ್ತಿದ್ದರೆ, ಶ್ರೀನಗರ, ಪುಲ್ವಾಮಾ ಸೇರಿದಂತೆ ಹಲವು ಭಾಗಗಳಲ್ಲಿ ನಾಗರೀಕರನ್ನು ಗುರಿಯಾಸಿ ದಾಳಿ ನಡೆಯುತ್ತಲೇ ಇದೆ.

ಉಗ್ರರು ನಡೆಸಿದ ಈ ದಾಳಿ ನರಮೇಧಕ್ಕೆ ಸಮವಾಗಿದೆ. ಸತತ ದಾಳಿ ನಡೆಯುತ್ತಿದೆ. ಇದಕ್ಕೆ ಉಗ್ರರು ತಕ್ಕ ಬೆಲೆ ತೆರಬೇಕಾಗುತ್ತದೆ. ಕಾಶ್ಮೀರದಲ್ಲಿ ಶಾಂತಿ ಕದಡುವ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಾಶ್ಮೀರ ಬಿಜೆಪ್ ನಾಯಕ ಅಲ್ತಾಫ್ ಠಾಕೂರ್ ಹೇಳಿದ್ದಾರೆ.

J&K: Two non-local labourers killed and one injured after being fired upon by terrorists at Wanpoh area of Kulgam. Police & Security Forces cordoned off the area. Details awaited. pic.twitter.com/52H4vgOFCe

— ANI (@ANI)
click me!