
ನವದೆಹಲಿ(ಆ.22): ಜಾತಿಯ ಆಧಾರದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಲಾಗುವ ಮೀಸಲಾತಿಯನ್ನು ವಿರೋಧಿಸಿ ಶುಕ್ರವಾರ ಜಂತರ್ ಮಂತರ್ನಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸಿಜೆಪಿ ಮಾದರಿಯಲ್ಲಿ ಹುಟ್ಟಿಕೊಂಡ ‘ರಿಸರ್ವೇಷನ್ ಹಟಾವೋ ಆಂದೋಲನ’ ಎಂಬ ಇನ್ಸ್ಟಾಗ್ರಾಂ ಪೇಜ್ನಲ್ಲಿ ಈ ಹೋರಾಟಕ್ಕೆ ಕರೆ ನೀಡಲಾಗಿತ್ತು.
ಪೊಲೀಸರ ಅನುಮತಿ ಸಿಗದ ಹೊರತಾಗಿಯೂ ಬ್ಯಾನರ್, ಪೋಸ್ಟರ್, ಕೇಸರಿ ಧ್ವಜ ಹಿಡಿದು ಬಂದ ನೂರಾರು ಮಂದಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸರು ಹಾಗೂ ಅರೆಸೇನಾಪಡೆಗಳನ್ನು ನಿಯೋಜಿಸಲಾಗಿತ್ತು.
‘ಸರ್ಕಾರದಿಂದ ಯಾರಿಗೆ ನೆರವು ಸಿಗಬೇಕು ಎಂಬುದನ್ನು ಆರ್ಥಿಕ ಸ್ಥಿತಿಯ ಆಧಾರದಲ್ಲಿ ನಿರ್ಧರಿಸಬೇಕು. ಜಾತಿಯ ಹಂಗಿಲ್ಲದೆ ಎಲ್ಲಾ ಬಡವರಿಗೆ ಶಿಕ್ಷಣ, ತರಬೇತಿ ಇತ್ಯಾದಿಗಳ ಸವಲತ್ತು ಲಭಿಸಬೇಕು’ ಎಂದು ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾ ನಂಟಿನ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದೇ ವೇಳೆ, ‘ಸದ್ಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗೆ ಅನುಗುಣವಾಗಿ ನೀತಿಗಳನ್ನು ರೂಪಿಸಬೇಕು. ಮೀಸಲಾತಿಯಲ್ಲೂ ಕೆನೆ ಪದರದ ವ್ಯವಸ್ಥೆ ತರಬೇಕು’ ಎಂದು ಆಗ್ರಹಿಸಲಾಗಿದೆ. ಯುಜಿಸಿ ಸಮಾನತೆ ನಿಯಮಾವಳಿ, 2026ರ ಬಗ್ಗೆಯೂ ಈ ಪ್ರತಿಭಟನೆ ವೇಳೆ ಅಪಸ್ವರ ಎತ್ತಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ