ತಲಾಖ್‌ ನಿಷೇಧಕ್ಕೆ ಕಾರಣವಾದಾಕೆಗೆ ಸಚಿವ ದರ್ಜೆ ಸ್ಥಾನ

Published : Oct 22, 2020, 10:48 AM IST
ತಲಾಖ್‌ ನಿಷೇಧಕ್ಕೆ ಕಾರಣವಾದಾಕೆಗೆ ಸಚಿವ ದರ್ಜೆ ಸ್ಥಾನ

ಸಾರಾಂಶ

 ತ್ರಿವಳಿ ತಲಾಖ್‌ ವಿರೋಧಿ ಹೋರಾಟಗಾರ್ತಿ ಶಾಯರಾ ಬಾನು ಅವರಿಗೆ  ಬಿಜೆಪಿ ಸರ್ಕಾರ ಸಚಿವ ದರ್ಜೆ ಸ್ಥಾನಮಾನ ನೀಡಿದೆ.   

ಡೆಹ್ರಾಡೂನ್‌ (ಅ.22): ಇತ್ತೀಚೆಗೆ ಬಿಜೆಪಿ ಸೇರಿದ್ದ ತ್ರಿವಳಿ ತಲಾಖ್‌ ವಿರೋಧಿ ಹೋರಾಟಗಾರ್ತಿ ಶಾಯರಾ ಬಾನು ಅವರಿಗೆ ಉತ್ತರಾಖಂಡದ ಬಿಜೆಪಿ ಸರ್ಕಾರ ಸಚಿವ ದರ್ಜೆ ಸ್ಥಾನಮಾನ ನೀಡಿದೆ. 

ಬಾನು ಅವರನ್ನು ರಾಜ್ಯ ಮಹಿಳಾ ಆಯೋಗದ ಮೂವರು ಉಪಾಧ್ಯಕ್ಷರಲ್ಲಿ ಒಬ್ಬರನ್ನಾಗಿ ನೇಮಿಸಲಾಗಿದೆ. ಇದು ರಾಜ್ಯ ಸಚಿವ ಸ್ಥಾನಮಾನ ಹೊಂದಿದ ಹುದ್ದೆಯಾಗಿದೆ ಎಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅವರ ಮಾಧ್ಯಮ ಸಲಹೆಗಾರ ದರ್ಶನ್‌ ಸಿಂಗ್‌ ರಾವತ್‌ ತಿಳಿಸಿದ್ದಾರೆ. 

ತ್ರಿವಳಿ ತಲಾಖ್‌, 370ನೇ ವಿಧಿ ರದ್ದಿಗೆ 1 ವರ್ಷ: ಕಾರ್ಯಕ್ರಮ ಆಯೋಜಿಸಲು ಸೂಚನೆ! ..

ಶಾಯರಾ ಬಾನು ಅವರು ಮುಸ್ಲಿಮರಲ್ಲಿ ಜಾರಿಯಲ್ಲಿದ್ದ ಆಕ್ಷೇಪಾರ್ಹ ಪದ್ಧತಿಯಾಗಿದ್ದ ತ್ರಿವಳಿ ತಲಾಖ್‌ ಅನ್ನು 2014ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಮೊದಲ ಮಹಿಳೆ. 

ಈ ಅರ್ಜಿಯನ್ನೇ ಆಧರಿಸಿ ಕೋರ್ಟು ತ್ರಿವಳಿ ತಲಾಖ್‌ ಅಮಾನ್ಯ ಮಾಡಿತ್ತು. ಕಳೆದ 10 ದಿನಗಳ ಹಿಂದೆಯಷ್ಟೇ ಅವರು ಬಿಜೆಪಿ ಸೇರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Kali Dance Controversy: ಕಾಳಿ ವೇಷ ಧರಿಸಿ ಕೆಟ್ಟ ಡ್ಯಾನ್ಸ್ ಪ್ರದರ್ಶನ, ಆಕ್ರೋಶಕ್ಕೆ ಬೆದರಿ ಕ್ಷಮೆ ಕೇಳಿದ ಕೋಲ್ಕತ್ತಾ ಕಲಾತಂಡ
ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!