ಕೃಷಿ ಕಾಯ್ದೆಯಲ್ಲಿ ಮಂಡಿ ಬಂದ್ ಮಾಡುವ ಉಲ್ಲೇಖ ಎಲ್ಲಿದೆ? ಠಾಕೂರ್ ಸವಾಲಿಗೆ ವಿಪಕ್ಷ ಗಪ್‌ಚುಪ್!

Published : Feb 12, 2021, 10:31 PM ISTUpdated : Feb 12, 2021, 10:32 PM IST
ಕೃಷಿ ಕಾಯ್ದೆಯಲ್ಲಿ ಮಂಡಿ ಬಂದ್ ಮಾಡುವ ಉಲ್ಲೇಖ ಎಲ್ಲಿದೆ? ಠಾಕೂರ್ ಸವಾಲಿಗೆ ವಿಪಕ್ಷ ಗಪ್‌ಚುಪ್!

ಸಾರಾಂಶ

ಕೃಷಿ ಕಾಯ್ದೆ ಕುರಿತು ವಿಪಕ್ಷಗಳು ತಪ್ಪು ಮಾಹಿತಿಯನ್ನು ಜನರಿಗೆ ನೀಡುತ್ತಿದೆ. ರೈತರನ್ನು ಎತ್ತಿಕಟ್ಟುವ ಪ್ರಯತ್ನದಲ್ಲಿದೆ ಎಂಬುದು ಬಿಜೆಪಿ ಆರೋಪ. ಸದನದಲ್ಲಿನ ಚರ್ಚೆ ಬಿಜೆಪಿ ಆರೋಪಗಳನ್ನು ಸಾಬೀತುಪಡಿಸಿದೆ. ಕಾರಣ ಮಂಡಿ ಬಂದ್ ಮಾಡುವ ಕಾನೂನು ಎಂದು ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ಮೊಸಳೆ ಕಣ್ಣೀರಿಗೆ, ಅನುರಾಗ್ ಠಾಕೂರ್ ಖಡಕ್ ಉತ್ತರಕ್ಕೆ ವಿಪಕ್ಷ ಒಂದು ಶಬ್ದ ಆಡದೆ ಸುಮ್ಮನಾಗಿದೆ.

ನವದೆಹಲಿ(ಫೆ.12): ಕೃಷಿ ಕಾಯ್ದೆ ಹಾಗೂ ರೈತ ಪ್ರತಿಭಟನೆ ಮುಗಿಯದ ಸಮಸ್ಯೆಯಾಗಿ ಪರಿಣಮಿಸಿದೆ. ಕೇಂದ್ರ ತಂದಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಅನ್ನೋ ಹೋರಾಟಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೈಜೋಡಿಸಿದೆ. ಇತ್ತ ಕೇಂದ್ರ ಕಾಯ್ದೆಯ ಯಾವ ಅಂಶ ಮಾರಕ ಎಂಬ ಪ್ರಶ್ನೆಗೆ ರೈತ ಸಂಘಟನೆಗಳು ಉತ್ತರ ನೀಡಿಲ್ಲ. ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ತಂದಿರುವ ಕೃಷಿ ಕಾಯ್ದೆ ಮಂಡಿ ಬಂದ್ ಮಾಡಲು ತಂದಿದೆ ಎಂದಿದ್ದಾರೆ. ಇದಕ್ಕೆ ರಾಜ್ಯ ಹಣಕಾಸು ಹಾಗೂ ಕಾರ್ಪೋರೇಟ್  ಅಫೈರ್ಸ್ ಸಚಿವ ಅನುರಾಗ್ ಠಾಕೂರ್ ಖಡಕ್ ಉತ್ತರ ನೀಡಿದ್ದಾರೆ.

ರೈತ ಪ್ರತಿಭಟನೆ ಮುಂದಾಳತ್ವ ವಹಿಸಿರುವ ರಾಕೇಶ್ ಟಿಕೈಟ್ ಆಸ್ತಿ 80 ಕೋಟಿ!

ಸದನದಲ್ಲಿ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿತು. ಕೇಂದ್ರ ತಂದಿರುವ ಕೃಷಿ ಕಾಯ್ದೆ ಮಾರುಕಟ್ಟೆ(ಮಂಡಿ) ಬಂದ್ ಮಾಡಲು ಉದ್ದೇಶಿಸಿ ತರಲಾಗಿದೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ತಿರುಗೇಟು ನೀಡಿದ ಠಾಕೂರ್, ಕಾಯ್ದೆಯ ಯಾವ ಕ್ಲಾಸ್‍‌ನಲ್ಲಿ ಮಂಡಿ ಬಂದ್ ಆಗುತ್ತಿರುವ ಅಂಶ ಇದೆ? ಸದನದಲ್ಲಿ ಉತ್ತರಿಸಿ ಎಂದು ಸವಾಲು ಹಾಕಿದರು.

 

ಇಲ್ಲಿರುವ ಸಂಸದರೂ ಉತ್ತರ ನೀಡಿ, ಕಾಯ್ದೆಯ ಯಾವ ಕ್ಲಾಸ್, ಯಾವ ವಾಕ್ಯದಲ್ಲಿ ಮಂಡಿ ಬಂದ್ ಮಾಡುವ ಉಲ್ಲೇಖವಿದೆ. ಕಾಂಗ್ರೆಸ್ ಸಂಸದರೇ, ವಿಪಕ್ಷಗಳೇ ಉತ್ತರಿಸಿ ಎಂದರು.  ಠಾಕೂರ್ ಸವಾಲಿಗೆ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮೌನವಹಿಸಿತು. ಇಷ್ಟಕ್ಕೆ ನಿಲ್ಲಿಸಿದ ಠಾಕೂರ್, ಕಾಂಗ್ರೆಸ್ ಹಾಗೂ ವಿಪಕ್ಷ ದೇಶದ ಜನರನ್ನು ಹಾಗೂ ರೈತರನ್ನು ಮೂರ್ಖರನ್ನಾಗಿ ಮಾಡುತ್ತಿದೆ. ತಪ್ಪು ಮಾಹಿತಿಯನ್ನು ನೀಡುತ್ತಿದೆ. ಎಲ್ಲರ ಬಂಡವಾಳ ಬಯಲಾಗಿದೆ ಎಂದರು.

ರೈತರನ್ನು ಮಾತುಕತೆಗೆ ಆಹ್ವಾನಿಸಿದ ಬೆನ್ನಲ್ಲೇ ಪ್ರತಿಭಟನೆಗೆ ತೀವ್ರಗೊಳಿಸಿದ ಸಂಘಟನೆ!

ರಾಹುಲ್ ಗಾಂಧಿ ಇದು ಮಂಡಿ ಮಾರುಕಟ್ಟೆಯನ್ನು ನಿಲ್ಲುಸುವ ಉದ್ದೇಶದಿಂದ ಈ ಕಾಯ್ದೆ ತರಲಾಗಿದೆ. ಇದರ ಹೊರತು ಈ ಕಾಯ್ದೆಗೆ ಇನ್ಯಾವ ಉದ್ದೇಶವೂ ಇಲ್ಲ ಎಂದಿದ್ದರು. ವಿಪಕ್ಷಗಳು ಎಪಿಎಂಸಿ ಮಾರುಕಟ್ಟೆ ಬಂದ್ ಮಾಡಿ, ಖಾಸಗಿ ಮಂಡಿ ತೆರಯಲು ಈ ರೀತಿ ಕಾಯ್ದೆ ತರಲಾಗಿದೆ ಎಂದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?