ಸಚಿವ ರಾಜೀವ್ ಚಂದ್ರಶೇಖರ್ ಬೇಟಿಯಾದ ಕುಕ್, ಮೋದಿ ದೂರದೃಷ್ಟಿ ಪ್ರಶಂಸಿಸಿದ ಆ್ಯಪಲ್ ಸಿಇಒ!

Published : Apr 19, 2023, 09:32 PM ISTUpdated : Apr 19, 2023, 09:44 PM IST
ಸಚಿವ ರಾಜೀವ್ ಚಂದ್ರಶೇಖರ್ ಬೇಟಿಯಾದ ಕುಕ್, ಮೋದಿ ದೂರದೃಷ್ಟಿ ಪ್ರಶಂಸಿಸಿದ ಆ್ಯಪಲ್ ಸಿಇಒ!

ಸಾರಾಂಶ

ಭಾರತದಲ್ಲಿ ಮೊದಲ ಆ್ಯಪಲ್ ಸ್ಟೋರ್ ಉದ್ಘಾಟಿಸಿರುವ ಸಿಸಿಒ ಟಿಮ್ ಕುಕ್ ಇಂದು ಪ್ರಧಾನಿ ನರೇಂದ್ರ ಮೋದಿ ಬಳಿಕ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿಯಾಗಿದ್ದಾರೆ. ಭಾರತದ ಡಿಜಿಟಲ್ ಪಯಣದ, ಆರ್ಥಿಕತೆ, ರಫ್ತುವಿನ ಕುರಿತು ಚರ್ಚಿಸಿದ್ದಾರೆ. ಇದೇ ವೇಳೆ ಮೋದಿ ದೂರದೃಷ್ಟಿ ನಾಯಕತ್ವವನ್ನು ಕೊಂಡಾಡಿದ್ದಾರೆ.  

ನವದೆಹಲಿ(ಏ.19): ಭಾರತದಲ್ಲಿ ಮೊದಲ ಆ್ಯಪಲ್ ಸ್ಟೋರ್ ಉದ್ಘಾಟಿಸಿರುವ ಸಿಸಿಒ ಟಿಮ್ ಕುಕ್ ಇಂದು ಪ್ರಧಾನಿ ನರೇಂದ್ರ ಮೋದಿ ಬಳಿಕ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿಯಾಗಿದ್ದಾರೆ. ಭಾರತದ ಡಿಜಿಟಲ್ ಪಯಣದ, ಆರ್ಥಿಕತೆ, ರಫ್ತುವಿನ ಕುರಿತು ಚರ್ಚಿಸಿದ್ದಾರೆ. ಭಾರತದಲ್ಲಿ ಆ್ಯಪಲ್ ಪಾಲುದಾರಿಕೆ ಹಾಗೂ ಸುದೀರ್ಘ ಪಾಲುದಾರಿಕೆ ಕುರಿತು ಚರ್ಚಿಸಿದ್ದಾರೆ. ಡಿಜಿಟಲ್ ಇಂಡಿಯಾ ಪಯಣದಲ್ಲಿ ಆ್ಯಪಲ್ ಪಾಲುದಾರಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ಯುವಕರ ಕೌಶಲ್ಯ ವೃದ್ಧಿ, ಆರ್ಥಿಕ ಹಾಗೂ ಉದ್ಯೋಗ ಸೃಷ್ಟಿಯನ್ನು ವಿಸ್ತರಿಸುವ ಕುರಿತೂ ಚರ್ಚೆ ನಡೆಸಲಾಗಿದೆ.

ಭಾರತದಲ್ಲಿ ಮೊದಲ ಆ್ಯಪಲ್ ಸ್ಟೋರ್ ಉದ್ಘಾಟನೆಗಾಗಿ ಭಾರತಕ್ಕೆ ಆಗಮಿಸಿದ ಸಿಇಒ ಟಿಮ್ ಕುಕ್ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಪ್ರಧಾನಿ ಮೋದಿ ಬೇಟಿ ಬಳಿಕ ಕೇಂದ್ರದ ಹಲವು ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಟಿಮ್ ಕುಕ್ ಜೊತೆಗಿನ ಮಾತುಕತೆ ಬಳಿ ಟ್ವೀಟ್ ಮಾಡಿರುವ ರಾಜೀವ್ ಚಂದ್ರಶೇಖರ್, ಟಿಮ್ ಕುಕ್ ಭೇಟಿಯಿಂದ ಸಂತೋಷವಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

 

 

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಕುಕ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಹಲವು ವರ್ಷಗಳ ಹಿಂದಯೇ ಪ್ರಧಾನಿ ನರೇಂದ್ರ ಮೋದಿ, ಭಾರತವನ್ನು ಎಲೆಕ್ಟ್ರಾನಿಕ್ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಯೋಜನೆ ರೂಪಿಸಿ ಕಾರ್ಯಗತಗೊಳಿಸಿದ್ದರು. ಈ ದೂರದೃಷ್ಟಿ ನಾಯಕತ್ವವನ್ನು ಟಿಮ್ ಕುಕ್ ಕೊಂಡಾಡಿದ್ದಾರೆ. 

ಮಾಧುರಿ ದೀಕ್ಷಿತ್ ಮೀಟ್ ಆಗ್ಬೇಕು ಅಂತ ಟಿಮ್‌ ಕುಕ್ ಕೇಳಿದ್ದೇಕೆ?

ಏಪ್ರಿಲ್ 18 ರಂದು ಟಿಮ್ ಕುಕ್, ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಭಾರತದ ಮೊಟ್ಟ ಮೊದಲ ಆ್ಯಪಲ್ ಸ್ಟೋರ್ ಉದ್ಘಾಟನೆ ಮಾಡಿದ್ದರು. ಜಿಯೋ ವಲ್ಡ್‌ರ್‍ ಡ್ರೈವ್‌ ಮಾಲ್‌ನಲ್ಲಿ ಮಳಿಗೆ ತರೆಯಲಾಗಿದ್ದು, ಇದಕ್ಕೆ ‘ಆ್ಯಪಲ್‌ ಬಿಕೆಸಿ’ ಎಂದು ಹೆಸರಿಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಮ್‌ ಕುಕ್‌, ‘ಮುಂಬೈನಲ್ಲಿ ಆ್ಯಪಲ್‌ ಸ್ಟೋರ್‌ ಆರಂಭಕ್ಕೆ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆ ಸ್ಫೂರ್ತಿದಾಯಕವಾಗಿದೆ. ಅತ್ಯದ್ಭುತ ಪ್ರತಿಕ್ರಿಯೆ ನೋಡುತ್ತುತ್ತಿದ್ದೇವೆ. ಭಾರತದ ಮೊದಲ ಆ್ಯಪಲ್‌ ಬಿಕೆಸಿ ಸ್ಟೋರ್‌ ಆರಂಭಿಸಲು ಸಂತಸವಾಗುತ್ತಿದೆ’ ಎಂದಿದ್ದರು. 

ಆ್ಯಪಲ್‌ ಈಗ ಸ್ಮಾರ್ಚ್‌ಫೋನ್‌ ಮಾರುಕಟ್ಟೆಯಲ್ಲಿ ಶೇ.3ರಷ್ಟುಪಾಲು ಹೊಂದಿದೆ. ಭಾರತದಲ್ಲಿ 2500 ಜನರಿಗೆ ಉದ್ಯೋಗ ಕಲ್ಪಿಸಿದೆ. ಅಲ್ಲದೆ ತನ್ನ ಉತ್ಪನ್ನಗಳ ಮಾರಾಟದ ಮೂಲಕ ಪರೋಕ್ಷವಾಗಿ 10 ಲಕ್ಷ ಉದ್ಯೋಗ ಸೃಷ್ಟಿಸಲು ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?