ಇಂದು ಸೇನಾಪಡೆಗಳಿಂದ ಆಸ್ಪತ್ರೆಗಳ ಮೇಲೆ ಹೂಮಳೆ

Kannadaprabha News   | Asianet News
Published : May 03, 2020, 10:19 AM IST
ಇಂದು ಸೇನಾಪಡೆಗಳಿಂದ ಆಸ್ಪತ್ರೆಗಳ ಮೇಲೆ ಹೂಮಳೆ

ಸಾರಾಂಶ

ಕೊರೋನಾ ವಾರಿಯರ್ಸ್‌ಗೆ ಕೃತಜ್ಞತೆ ಸಲ್ಲಿಸಲು ದೇಶದ ಮೂರೂ ಸಶಸ್ತ್ರ ಪಡೆಗಳು ಭಾನುವಾರ ದೇಶದ ಉದ್ದಗಲಕ್ಕೂ ಕೋವಿಡ್‌ ಆಸ್ಪತ್ರೆಗಳ ಮೇಲೆ ವಿಮಾನಗಳ ಮೂಲಕ ಫ್ಲೈ ಪಾಸ್ಟ್‌ ಹಾಗೂ ಹೆಲಿಕಾಪ್ಟರ್‌ಗಳಿಂದ ಹೂಮಳೆ ಸುರಿಸಲು ಸಕಲ ಸಿದ್ಧತೆ ಮಾಡಿಕೊಂಡಿವೆ.

ನವದೆಹಲಿ (ಮೇ. 03): ಕೊರೋನಾ ವಾರಿಯರ್ಸ್‌ಗೆ ಕೃತಜ್ಞತೆ ಸಲ್ಲಿಸಲು ದೇಶದ ಮೂರೂ ಸಶಸ್ತ್ರ ಪಡೆಗಳು ಭಾನುವಾರ ದೇಶದ ಉದ್ದಗಲಕ್ಕೂ ಕೋವಿಡ್‌ ಆಸ್ಪತ್ರೆಗಳ ಮೇಲೆ ವಿಮಾನಗಳ ಮೂಲಕ ಫ್ಲೈ ಪಾಸ್ಟ್‌ ಹಾಗೂ ಹೆಲಿಕಾಪ್ಟರ್‌ಗಳಿಂದ ಹೂಮಳೆ ಸುರಿಸಲು ಸಕಲ ಸಿದ್ಧತೆ ಮಾಡಿಕೊಂಡಿವೆ.

ವಾಯುಪಡೆಯ ವಿಮಾನ ಹಾಗೂ ಹೆಲಿಕಾಪ್ಟರ್‌ಗಳು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಹಾಗೂ ದಿಬ್ರುಘರ್‌ನಿಂದ ಕಛ್‌ವರೆಗೆ ಹಾರಾಟ ನಡೆಸಿ ಹೂವು ಚೆಲ್ಲಲಿವೆ. ಭೂಸೇನೆಯ ಸಶಸ್ತ್ರ ಪಡೆಗಳು ಮೌಂಟೇನ್‌ ಬ್ಯಾಂಡ್‌ ನುಡಿಸಿ, ವಿಶೇಷ ಕವಾಯತು ನಡೆಸಿ ವೈದ್ಯರು, ನರ್ಸ್‌ಗಳು, ನೈರ್ಮಲ್ಯ ಕಾರ್ಮಿಕರು, ಪೊಲೀಸರು ಹಾಗೂ ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಲಿವೆ.

2ನೇ ಆರ್ಥಿಕ ಪ್ಯಾಕೇಜ್‌ಗೆ ಮೋದಿ ಸಿದ್ಧತೆ!

ನೌಕಾಪಡೆಯು ತನ್ನ ಯುದ್ಧನೌಕೆಗಳಲ್ಲಿ ವಿದ್ಯುತ್‌ ಬೆಳಗಿ ಕೊರೋನಾ ವಾರಿಯರ್‌ಗಳ ಜೊತೆ ದೇಶದ ಯೋಧರೂ ಇದ್ದಾರೆ ಎಂದು ಸಾಂಕೇತಿಕವಾಗಿ ಹೇಳಲಿದೆ. ಈ ಫ್ಲೈ-ಪಾಸ್ಟ್‌, ವಿಶೇಷ ಕವಾಯತು ಹಾಗೂ ವಿದ್ಯುದ್ದೀಪ ಬೆಳಗುವ ಕಾರ್ಯಾಚರಣೆಗೆ ಮೂರೂ ಸಶಸ್ತ್ರ ಪಡೆಗಳು ಶನಿವಾರ ಸಕಲ ಸಿದ್ಧತೆ ಮಾಡಿಕೊಂಡಿವೆ.

ಭಾನುವಾರ ಬೆಳಗ್ಗೆ ದೇಶದ ವಿವಿಧ ಭಾಗಗಳಲ್ಲಿ ಪೊಲೀಸ್‌ ಸ್ಮಾರಕಗಳಿಗೆ ಪುಷ್ಪಗುಚ್ಚ ಇರಿಸುವ ಮೂಲಕ ಈ ಅಭಿನಂದನಾ ಕಾರ್ಯಕ್ರಮ ಆರಂಭವಾಗಲಿದೆ. ನಂತರ 10ರಿಂದ 11 ಗಂಟೆಯ ನಡುವೆ ಯುದ್ಧವಿಮಾನಗಳು ಹಾಗೂ ಸರಕು ವಿಮಾನಗಳು ಹಾರಾಟ ನಡೆಸಲಿವೆ. ಇನ್ನು ಹೆಲಿಕಾಪ್ಟರ್‌ಗಳು ವಿವಿಧ ನಗರಗಳಲ್ಲಿ ಆಸ್ಪತ್ರೆಗಳ ಮೇಲೆ ಹೂವಿನ ಮಳೆ ಸುರಿಸಲಿವೆ.

ನಂತರ ರಾತ್ರಿ 7.30ರಿಂದ 11.59ರ ವರೆಗೆ ಮುಂಬೈನ ಗೇಟ್‌ ವೇ ಆಫ್‌ ಇಂಡಿಯಾ ಬಳಿ ಐದು ಯುದ್ಧ ನೌಕೆಗಳು ವಿದ್ಯುದ್ದೀಪಗಳನ್ನು ಬೆಳಗಿ ‘ಕೊರೋನಾ ವಾರಿಯರ್‌ಗಳಿಗೆ ಸೆಲ್ಯೂಟ್‌’ ಎಂಬ ಬ್ಯಾನರ್‌ಗಳನ್ನು ಪ್ರದರ್ಶಿಸಲಿವೆ. ಗೋವಾ, ವಿಶಾಖಪಟ್ಟಣ, ಕಾರವಾರ, ಮಂಗಳೂರು ಮುಂತಾದ ನೌಕಾ ನೆಲೆಗಳಲ್ಲೂ ಇದೇ ಮಾದರಿಯ ಕಾರ್ಯಾಚರಣೆ ನಡೆಯಲಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?