ನದಿ ದಾಟುತ್ತಿದ್ದ ವೇಳೆ ಆರ್ಮಿ ಟ್ಯಾಂಕ್‌ ಮಗುಚಿ ದುರಂತ: ಪ್ರವಾಹದಲ್ಲಿ ಕೊಚ್ಚಿ ಹೋದ ಐವರು ಯೋಧರು

Published : Jun 29, 2024, 12:26 PM IST
ನದಿ ದಾಟುತ್ತಿದ್ದ ವೇಳೆ ಆರ್ಮಿ ಟ್ಯಾಂಕ್‌ ಮಗುಚಿ ದುರಂತ: ಪ್ರವಾಹದಲ್ಲಿ ಕೊಚ್ಚಿ ಹೋದ ಐವರು ಯೋಧರು

ಸಾರಾಂಶ

ನದಿ ದಾಟುತ್ತಿದ್ದ ವೇಳೆ ಸೇನಾ ಟ್ಯಾಂಕರೊಂದು ಮಗುಚಿ ಐವರು ಯೋಧರು ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ. ಲಡಾಕ್‌ ಗಡಿ ನಿಯಂತ್ರಣ ರೇಖೆಯ ಬಳಿ ಮಳೆಯಿಂದಾಗಿ ಪ್ರವಾಹ ಉಂಟಾಗಿ  ಈ ದುರಂತ ಸಂಭವಿಸಿದೆ.

ಲಡಾಕ್‌: ನದಿ ದಾಟುತ್ತಿದ್ದ ವೇಳೆ ಸೇನಾ ಟ್ಯಾಂಕರೊಂದು ಮಗುಚಿ ಐವರು ಯೋಧರು ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ. ಲಡಾಕ್‌ ಗಡಿ ನಿಯಂತ್ರಣ ರೇಖೆಯ ಬಳಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಈ ವೇಳೆ ನೀರಿನಲ್ಲಿ ಐವರು ಯೋಧರು ಕೊಚ್ಚಿ ಹೋಗಿದ್ದಾರೆ. ನಾಪತ್ತೆಯಾದವರಲ್ಲಿ ಜೂನಿಯರ್ ಕಮೀಷನ್ಡ್ ಆಫೀಸರ್, ಜೆಒಸಿ ಕೂಡ ಸೇರಿದ್ದಾರೆ. ರಾತ್ರಿ ಸುಮಾರು 1 ಗಂಟೆಗೆ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ. 

ಚೀನಾ ಗಡಿಗೆ ಸಮೀಪವಿರುವ ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು. ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್‌ ಬಳಿ ಬೋಧಿ ನದಿಯನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನದಿ ನೀರು ಏರಿಕೆ ಆಗಿ ಈ ಅವಘಡ ಸಂಭವಿಸಿದೆ. ಯೋಧರ  ತಂಡ T-72 ಟ್ಯಾಂಕ್‌ನಲ್ಲಿ ನದಿ ದಾಟುತ್ತಿದ್ದಾಗ ದಾಟುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನಾಪತ್ತೆಯಾದ ಯೋಧರ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು