ಹಿಮ ಸುರಿಯುತ್ತಿದೆ ಮೊಣಕಾಲಿನವರೆಗೆ... ಗರ್ಭಿಣಿಯನ್ನು 2 ಕಿಮೀ ಹೊತ್ತೇ ಸಾಗಿದ ಯೋಧರು!

Published : Jan 08, 2021, 06:02 PM ISTUpdated : Jan 08, 2021, 06:07 PM IST
ಹಿಮ ಸುರಿಯುತ್ತಿದೆ ಮೊಣಕಾಲಿನವರೆಗೆ... ಗರ್ಭಿಣಿಯನ್ನು 2 ಕಿಮೀ ಹೊತ್ತೇ ಸಾಗಿದ ಯೋಧರು!

ಸಾರಾಂಶ

ಸೇನೆಯ ಮಹಾನ್ ಕಾರ್ಯ/ ಗರ್ಭಿಣಿಯನ್ನು ಎರಡು  ಕೀಮಿ ಹೊತ್ತೆ ಸಾಗಿದರು/ ಹಿಮ ಬೀಳುತ್ತಲೇ ಇತ್ತು/  ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಲು ಆಗದ ಸ್ಥಿತಿ

ಕುಪ್ವಾರ(ಜ.  08) ದೇಶಭಕ್ತಿತಯನ್ನು ಸಾರುತ್ತಲೇ ಗಡಿ ಕಾಯುವ ಯೋಧರಿಗೆ ಎಷ್ಟು ನಮನ ಸಲ್ಲಿಸಿದರೂ ಸಾಲದು. ಇದೆಲ್ಲದರ ನಡುವೆ ಪ್ರವಾಹ ಆಗಲಿ, ನೈಸರ್ಗಿಕ ವಿಕೋಪ ಆಗಲಿ ಸೈನಿಕರು ನೆರವಿಗೆ ಧಾವಿಸುತ್ತಲೆ ಬರುತ್ತಾರೆ. ಜನರನ್ನು ತಮ್ಮ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡುತ್ತಾರೆ. ಈಗ ಸೈನಿಕರು ಅಂಥದ್ದೆ ಒಂದು ಮಹತ್ ಕಾರ್ಯ ಮಾಡಿದ್ದು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕಾಶ್ಮೀರದಲ್ಲಿ ಹಿಮ ಬೀಳುತ್ತಲೇ ಇದೆ. ಆದರೆ ಸೇನೆ ಮಾಡಿದ ಕೆಲಸಕ್ಕೆ ಒಂದು ಮೆಚ್ಚುಗೆ ಹೇಳಲೇಬೇಕು.  ತುರ್ತು ಸಂದರ್ಭದಲ್ಲಿ   ಗರ್ಭಿಣಿಯನ್ನು ಸುರಿಯುವ ಹಿಮದಲ್ಲಿ ಬರೋಬ್ಬರಿ ಎರಡು ಕಿಮೀ ಹೊತ್ತು ಸಾಗಿದ್ದಾರೆ. ಮೊಣಕಾಲಿನವರೆಗೆ ಹಿಮ ತುಂಬಿದ್ದರೂ ಜಗ್ಗದೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾಕ್ ಸೈನಿಕರಿಗೆ ಭಾರತೀಯ ಯೋಧರು ಕೊಟ್ಟ ಎಚ್ಚರಿಕೆ

ಗುರುವಾರ ರಾತ್ರಿ 11.30 ರ ಸುಮಾರಿಗೆ ಸೇನೆಯ ಕ್ಯಾಂಪ್ ಗೆ ಕರೆ ಒಂದು ಬಂದಿದೆ. ಮನ್  ಜೂರ್ ಅಹಮದ್ ಶೇಖ್ ಎನ್ನುವರು ಕರೆ ಮಾಡಿದ್ದಾರೆ.  ತಮ್ಮ ಪತ್ನಿಗೆ ಹೆರಿಗೆ  ನೋವು ಕಾಣಿಸಿಕೊಂಡಿದ್ದು ಸಹಾಯ ಬೇಕು ಎಂದು ಕೋರಿದ್ದಾರೆ.  ಆ ಸಂದರ್ಭದಲ್ಲಿ ಹಿಮ ಬೀಳುತ್ತಲೇ ಇತ್ತು. ಈ ಕಾರಣದಿಂದ ಆರೋಗ್ಯ ಸೇವೆ ನೀಡುವ ವಾಹನಗಳು  ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ. 

 ಹಾಗಾಗಿ ಬೇರೆ ಆಯ್ಕೆ ಇರಲಿಲ್ಲ. ಆರೋಗ್ಯ ಸಿಬ್ಬಂದಿ ಒಬ್ಬರನ್ನು  ಕರೆದುಕೊಂಡು ಗರ್ಭಿಣಿ ಇದ್ದಲ್ಲಿಗೆ ತೆರಳಿ  ಪ್ರಾಥಮಿಒಕ ಚಿಕಿತ್ಸೆ ನೀಡಲಾಗಿದೆ. ಅದಾದ ಮೇಲೆ ಅಲ್ಲಿಂದ ಶಿಫ್ಟ್ ಮಾಖಡುವುದು ಅನಿವಾರ್ಯ ಎಂಬಂತೆ ಗೊತ್ತಾಗಿದೆ.  ಅಲ್ಲಿಂದ ಮಹಿಳೆಯನ್ನು ಹೊತ್ತುಕೊಂಡು  ಯೋಧರು ಆಸ್ಪತ್ರೆಗೆ  ಆಗಮಿಸಿದ್ದಾರೆ.  ಸೇನೆ ಸಹ ಈ ಕಾರ್ಯವನ್ನು ಕೊಂಡಾಡಿದ್ದು ದೇಶದ ನಾಗರಿಕರು ಸೇನೆಯ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..