ಮುಸ್ಲಿಮರ ಕುರಿತು ಮೌಲಾನಾ ಹೇಳಿಕೆ ವಿವಾದ; 'ಭಾರತಕ್ಕಿಂತ ಉತ್ತಮ ಸ್ಥಳವಿಲ್ಲ, ಹಿಂದೂಗಿಂತ ಒಳ್ಳೆಯ ಅಣ್ಣ ಇಲ್ಲ' ಎಂದ ಬಿಜೆಪಿ!

Published : Nov 23, 2025, 10:33 AM ISTUpdated : Nov 23, 2025, 10:43 AM IST
Muslims Cannot Be VC in India Arshad Madani Sparks Row BJP Retorts No Better Place Than India

ಸಾರಾಂಶ

ಜಮಿಯತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಅವರು, ಭಾರತದಲ್ಲಿ ಮುಸ್ಲಿಮರು ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ಮುಸ್ಲಿಮರಿಗೆ ಭಾರತಕ್ಕಿಂತ ಉತ್ತಮ ದೇಶವಿಲ್ಲ ಎಂದ ಬಿಜೆಪಿ

ಜಮಿಯತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಅವರು ದೇಶದಲ್ಲಿ ಮುಸ್ಲಿಮರ ಸ್ಥಿತಿಗತಿಯ ಕುರಿತು ನೀಡಿರುವ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಮದನಿ ಅವರು, 'ಇಂದು ಮಮ್ದಾನಿಯಂತಹ ಮುಸ್ಲಿಂ ನ್ಯೂಯಾರ್ಕ್ ಮೇಯರ್ ಆಗಬಹುದು, ಖಾನ್ ಲಂಡನ್ ಮೇಯರ್ ಆಗಬಹುದು, ಆದರೆ ಭಾರತದಲ್ಲಿ ಯಾರೂ ವಿಶ್ವವಿದ್ಯಾಲಯದ ಕುಲಪತಿಯಾಗಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ. ಈ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮುಸ್ಲಿಮರಿಗೆ ಭಾರತಕ್ಕಿಂತ ಉತ್ತಮ ಸ್ಥಳ ಮತ್ತೊಂದಿಲ್ಲ: ಬಿಜೆಪಿ

​ಮದನಿ ಅವರ ಹೇಳಿಕೆಗೆ ತಕ್ಷಣವೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಯಾಸರ್ ಜಿಲಾನಿ ಅವರು, ಮುಸ್ಲಿಮರಿಗೆ ಭಾರತಕ್ಕಿಂತ ಉತ್ತಮವಾದ ಸ್ಥಳ ಇನ್ನೊಂದಿಲ್ಲ. ಹಿಂದೂಗಳಿಗಿಂತ ಉತ್ತಮ ಮನುಷ್ಯ ಅಥವಾ ಅಣ್ಣನೂ ಇರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮದನಿ ಅವರ ಹೇಳಿಕೆಯಲ್ಲಿ ಗೊಂದಲವಿದೆ ಎಂದು ಹೇಳಿದ ಜಿಲಾನಿ, 'ಒಂದೆಡೆ ಅವರು ಜಾಗತಿಕವಾಗಿ ಮುಸ್ಲಿಮರ ಕೆಟ್ಟ ಸ್ಥಿತಿಯ ಬಗ್ಗೆ ಮಾತನಾಡಿದರೆ, ಮತ್ತೊಂದೆಡೆ ನ್ಯೂಯಾರ್ಕ್ ಮೇಯರ್ ಆಗಿ ಆಯ್ಕೆಯಾದ ಜೋಹ್ರಾನ್ ಮಮ್ದಾನಿ ಮತ್ತು ಲಂಡನ್ ಮೇಯರ್ ಬಗ್ಗೆ ಉಲ್ಲೇಖಿಸುತ್ತಾರೆ ಎಂದು ಹೇಳಿದರು.

 

​ಅಜಮ್ ಖಾನ್ ಮತ್ತು ಅಲ್-ಫಲಾಹ್ ವಿಶ್ವವಿದ್ಯಾಲಯದ ಬಗ್ಗೆ ಮದನಿ ಉಲ್ಲೇಖಿಸಿದ್ದಕ್ಕೆ ಪ್ರತಿಕ್ರಿಯಿಸಿದ ಜಿಲಾನಿ, 'ಅಲ್-ಫಲಾಹ್ ವಿಶ್ವವಿದ್ಯಾಲಯದ ಮಾಲೀಕರು ಅನೇಕ ಜನರ ಹಣವನ್ನು ವಂಚಿಸಿದ ಅಪರಾಧಿ ಎಂದು ದೂರಿದರು. ಹಾಗೆಯೇ, ಅಜಂ ಖಾನ್ ಕೂಡ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದು, ಬಡವರಿಗೆ ಸೇರಿದ ಭೂಮಿಯನ್ನು ಕಬಳಿಸಿ ಜೌಹರ್ ವಿಶ್ವವಿದ್ಯಾಲಯವನ್ನು ನಿರ್ಮಿಸಿದ್ದಾರೆ, ಈ ವಿಷಯದಲ್ಲಿ ಮುಸ್ಲಿಮರೇ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಜಿಲಾನಿ ಹೇಳಿದರು. ಕೇಂದ್ರ ಸರ್ಕಾರವು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತಿದೆ, ಆದ್ದರಿಂದ ಮದನಿ ಅವರು ದೇಶದ ಜನರಲ್ಲಿ ಗೊಂದಲ ಸೃಷ್ಟಿಸಬಾರದು ಎಂದು ಅವರು ಮನವಿ ಮಾಡಿದರು.

 

 

ತಪ್ಪು ಮಾಡಿದವರಿಗೆ ಶಿಕ್ಷೆ, ಮುಸ್ಲಿಮರು ಎಂಬ ಕಾರಣಕ್ಕಲ್ಲ:

​ಭಾರತ ಸರ್ಕಾರವನ್ನು ಶ್ಲಾಘಿಸಿದ ಬಿಜೆಪಿ ನಾಯಕ ಯಾಸರ್ ಜಿಲಾನಿ ಅವರು, ಭಾರತವು ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ ಎಲ್ಲರನ್ನೂ ತನ್ನೊಂದಿಗೆ ಕರೆದೊಯ್ಯುತ್ತಿದೆ ಎಂದು ಹೇಳಿದರು. ಯಾರಾದರೂ ತಪ್ಪು ಮಾಡಿದರೆ, ಅವರಿಗೆ ಶಿಕ್ಷೆಯಾಗುವುದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ ಅಲ್ಲ, ಬದಲಾಗಿ ಅವರು ಅಪರಾಧ ಮಾಡುತ್ತಿರುವುದರಿಂದ. ದಾರಿ ತಪ್ಪಿ ಭಯೋತ್ಪಾದನೆಯತ್ತ ಸಾಗುತ್ತಿರುವ ಯುವಜನರ ವಿರುದ್ಧ ಫತ್ವಾ ಹೊರಡಿಸುವುದಾಗಿ ಅವರು ಹೇಳಿದರು. ಪ್ರಸ್ತುತ ಸರ್ಕಾರದ ಬಗೆಗಿನ ಕಹಿ ಭಾವನೆ ಕಡಿಮೆಯಾಗಿದೆ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ