
ನವದೆಹಲಿ(ನ.20): ಕೊರೋನಾ ವೈರಸ್ ದೇಶದ ಚಿತ್ರವಣನ್ನೇ ಬದಲಿಸಿದೆ. ಜನಸಾಮಾನ್ಯರು ತೀರಾ ಸಂಕಷ್ಟ ಪಡುತ್ತಿದ್ದಾರೆ. ಮಾಸ್ಕ್ ಧರಿಸಲು ಸಾಧ್ಯವಾಗದೆ, ಅತ್ತ ದಂಡ ಕಟ್ಟಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷದ ಸಂಸದರು, ಶಾಸಕರು, ಸಚಿವರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಜನ ಸಾಮಾನ್ಯರಿಗೆ ಮಾಸ್ಕ್ ನೀಡವು ಕುರಿತು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ದಿಲ್ಲಿಯಲ್ಲಿ ಕೊರೋನಾ 3ನೇ ಅಲೆ: ಸಿಎಂ ಕೇಜ್ರಿವಾಲ್!..
ಆಪ್ ಸಂಸದರು, ಶಾಸಕರು, ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆ ಸ್ಥಳಗಳಿಗೆ ತೆರಳಿ ಮಾಸ್ಕ್ ಧರಿಸದವರಿಗೆ ಮಾಸ್ಕ್ ಉಚಿತವಾಗಿ ನೀಡಬೇಕು. ಮಾನವ ಸೇವೆಯೇ ಅತೀ ದೊಡ್ಡ ದೇಶಭಕ್ತಿ. ಇತರ ರಾಜಕೀಯ ಪಕ್ಷಗಳು, ಪಕ್ಷದ ಕಾರ್ಯಕರ್ತರು ಎಲ್ಲರೂ ಈ ಕಾರ್ಯಕ್ಕೆ ಕೈಜೋಡಿಸಿದರೆ ಉತ್ತಮ. ಕೊರೋನಾ ತಡೆಯದಂತೆ ಎಲ್ಲರು ನೆರವಾಗಿ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೇಶದ ಹಲವು ನಗರಗಳಲ್ಲಿ ಮಾಸ್ಕ್ ಧರಿಸಿದಿದ್ದರೆ ದಂಡ 2000 ರೂಪಾಯಿಗೆ ಏರಿಸಲಾಗಿದೆ. ಪದೆ ಪದೇ ಮಾಸ್ಕ್ ಬದಲಾಸುವ ಶಕ್ತಿ ಹಲವರಿಗಿಲ್ಲ. ಇದೀಗ ಈ ಸಮಸ್ಯೆಯನ್ನು ಗಮನಿಸಿರುವ ಅರವಿಂದ್ ಕೇಜ್ರಿವಾಲ್ ಉಚಿತ ಮಾಸ್ಕ್ ವಿತರಿಸಲು ಕರೆ ನೀಡಿದ್ದಾರೆ. ಸ್ವಯಂತ ಸೇವಕರು ಈ ಅಭಿಯಾನಕ್ಕೆ ಕೈಜೋಡಿಸಲು ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ