ಉಸಿರು ಉಳಿಸಿದ ವೈದ್ಯಕೀಯ ಕ್ಷೇತ್ರ ವೃಂದಕ್ಕೆ ಭಾರತ ರತ್ನ ನೀಡಿ; ಮೋದಿಗೆ ಕೇಜ್ರಿವಾಲ್ ಆಗ್ರಹ!

Published : Jul 04, 2021, 10:27 PM ISTUpdated : Jul 04, 2021, 10:30 PM IST
ಉಸಿರು ಉಳಿಸಿದ ವೈದ್ಯಕೀಯ ಕ್ಷೇತ್ರ ವೃಂದಕ್ಕೆ ಭಾರತ ರತ್ನ ನೀಡಿ; ಮೋದಿಗೆ ಕೇಜ್ರಿವಾಲ್ ಆಗ್ರಹ!

ಸಾರಾಂಶ

ಭಾರತದಲ್ಲಿ ಮತ್ತೆ ಸದ್ದು ಮಾಡಿದ ಭಾರತ ರತ್ನ ಜೀವ ಉಳಿಸಿದ ವೈದ್ಯ ವೃಂದಕ್ಕೆ ಭಾರತ ರತ್ನ ಪ್ರಶಸ್ತಿ ನೀಡಿ ಪ್ರಧಾನಿ ಮೋದಿಗೆ ಆಗ್ರಹಿಸಿದ ದೆಹೆಲಿ ಸಿಎಂ ಕೇಜ್ರಿವಾಲ್  

ನವದೆಹಲಿ(ಜು.04): ಭಾರತ ರತ್ನ ಪ್ರಶಸ್ತಿ ಮತ್ತೆ ಸದ್ದು ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ವಿಶೇಷ ಅಗ್ರಹ ಮಾಡಿದ್ದಾರೆ. ಸಾಂಕ್ರಾಮಿಕ ಸಂಕಷ್ಟದಲ್ಲಿ ಭಾರತೀಯರ ಜೀವ ಉಳಿಸಲು ಸತತ ಹೋರಾಟ ಮಾಡುತ್ತಿರುವ ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಿಲ್ಕಾ ಸಿಂಗ್‌ಗೆ ಭಾರತ ರತ್ನ ನೀಡಿ ಆಗ್ರಹ; ತಕ್ಷಣ ಸ್ಪಂದಿಸಿದ ಕೇಂದ್ರ ಕ್ರೀಡಾ ಸಚಿವ!.

ಇಡಿ ವೈದ್ಯಕೀಯ ಸಮುದಾಯ, ಎಲ್ಲಾ ವೈದ್ಯರು, ನರ್ಸ್, ಆರೋಗ್ಯ ಸಿಬ್ಬಂದಿಗಳು, ಮುಂಚೂಣಿ ಕಾರ್ಯಕರ್ತರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಈ ಮೂಲಕ ತಮ್ಮದ ಪ್ರಾಣದ ಹಂಗು ತೊರೆದು ಭಾರತೀಯರ ಜೀವ ಉಳಿಸುತ್ತಿರುವ ಆರೋಗ್ಯಕ್ಷೇತ್ರದ ಸಿಬ್ಬಂದಿಗಳು ಹಾಗೂ ಕೊರೋನಾದಿಂದ ಮೃತರಾದ ಆರೋಗ್ಯ ಸಿಬ್ಬಂದಿಗಳಿಗೆ ಗೌರವ ಸೂಚಿಸಲು ಇದು ಅತ್ಯುತ್ತಮ ಸಮಯ ಎಂದು ಅರವಿಂದ್ ಕೇಜ್ರಿವಾಲ್ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಭಾರತ ರತ್ನ ಪ್ರಶಸ್ತಿ ಅಭಿಯಾನ; ದೇಶದ ಜನತಗೆ ವಿಶೇಷ ಮನವಿ ಮಾಡಿದ ರತನ್ ಟಾಟಾ!

ಇದು ಒಬ್ಬ ವೈದ್ಯರಿಗೆ, ಅಥವಾ ಒಬ್ಬರಿಗೆ ನೀಡಬೇಕಾದ ಭಾರತ ರತ್ನ ಅಲ್ಲ, ಇದು ಆರೋಗ್ಯ ಸಮುದಾಯದ ಪ್ರತಿಯೊಬ್ಬರಿಗೆ ನೀಡಬೇಕಾದ ಪ್ರಶಸ್ತಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.  ಕೇಜ್ರಿವಾಲ್ ಭಾರತ ರತ್ನ ಪ್ರಶಸ್ತಿ ಆಗ್ರಹ ಮಾಡಿದ ಬೆನ್ನಲ್ಲೇ, ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ
ವೈರಲ್ ಮೀಮ್ಸ್ ಆಗಿದ್ದ ಯುವಕನ ಫೋಟೋದ ಹಿಂದಿದೆ ನೋವಿನ ಕತೆ: 38 ವರ್ಷ ಬರೀ ದ್ರವಾಹಾರದಲ್ಲೇ ಬದುಕಿದ್ದ ಪಂಚಾಲ್